ಕೇರಳಕ್ಕೆ 13,608 ಕೋಟಿ ಹೆಚ್ಚುವರಿ ಸಾಲ ಬಿಡುಗಡೆಗೆ ಕೇಂದ್ರಕ್ಕೆ ಸುಪ್ರೀಂ ಆದೇಶ

Date:

ಕೇರಳ ಸರ್ಕಾರಕ್ಕೆ ಹೆಚ್ಚುವರಿ 13,608 ಕೋಟಿ ರೂ. ಸಾಲ ಬಿಡುಗಡೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೇಂದ್ರ ಈ ಹಣವನ್ನು ತಡೆಹಿಡಿದ ಕಾರಣ ಕೇರಳ ಸರ್ಕಾರ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಉದ್ಯೋಗಿಗಳಿಗೆ ವೇತನ ಪಾವತಿಸಲು ಪರದಾಡುತ್ತಿದ್ದ ಕೇರಳಕ್ಕೆ ಹಣ ಬಿಡುಗಡೆಯಿಂದ ದೊಡ್ಡ ಪರಿಹಾರ ಸಿಕ್ಕಂತಾಗಿದೆ. ಸುಪ್ರೀಂ ಕೋರ್ಟ್ ಎರಡು ಕಡೆಯ ಅರ್ಜಿದಾರರಿಗೂ ಕಾರ್ಯದರ್ಶಿ ಮಟ್ಟದಲ್ಲಿ ಸಭೆ ನಡೆಸಿ ಸಾಲಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥ ಮಾಡಿಕೊಳ್ಳಬೇಕೆಂದು ಸಹ ನಿರ್ದೇಶಿಸಿದೆ. ಸಭೆಯು ಇಂದು ಸಂಜೆ ನಡೆಯಲಿದೆ.

ಕೇರಳವು ಹೆಚ್ಚುವರಿಯಾಗಿ 21 ಸಾವಿರ ರೂ. ಕೋಟಿ ರೂ. ಸಾಲ ನೀಡಲು ಕೇಂದ್ರಕ್ಕೆ ನಿರ್ದೇಶಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ವಜಾ ಮಾಡಿದ ಕ್ರಮವನ್ನು ಟೀಕಿಸಿದೆ. ರಾಜ್ಯವು ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಅಧಿಕಾರ ಹೊಂದಿದೆ. ಆದರೆ ತಿರಸ್ಕರಿಸುವುದು ಸರಿಯಾದ ಕ್ರಮವಲ್ಲ ಎಂದು ಕೋರ್ಟ್ ಹೇಳಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಇದೇ ವಿಷಯವಾಗಿ ಬಹಿರಂಗವಾಗಿ ವಾಗ್ದಾಳಿ ನಡೆಸುವುದನ್ನು ಕಡಿಮೆ ಮಾಡುವಂತೆ ಎರಡು ಕಡೆಯ ಅರ್ಜಿದಾರರಿಗೆ ಕೋರ್ಟ್ ಸೂಚಿಸಿದೆ.13,609 ಕೋಟಿ ರೂ. ಹೆಚ್ಚುವರಿ ಸಾಲದಲ್ಲಿ, ವಿದ್ಯುತ್ ವಲಯದ ಸುಧಾರಣೆಗಳಿಗಾಗಿ 4323 ಕೋಟಿ ರೂ. ಹಾಗೂ 1877 ಕೋಟಿ ರೂ. ಹಣವನ್ನು ಹಿಂದಿನ ವರ್ಷದ ಯೋಜನೆಗಳನ್ನು ಮುಂದುವರಿಸಲು ಹಾಗೂ 2543 ಕೋಟಿ ರೂ. ಹಣವನ್ನು ಸಾಲ ಮರುಪಾವತಿಗಾಗಿ ಬಿಡುಗಡೆ ಮಾಡಲಾಗಿದೆ.

ಬಿಡುಗಡೆಯಾಗಿರುವ ಹಣವು ರಾಜ್ಯದ ಸಂಪೂರ್ಣ ವೇತನ ಪಾವತಿಸಲು ಹಾಗೂ ಇತರ ನಿಗದಿತ ವೆಚ್ಚಗಳಿಗೆ ಸಹಾಯವಾಗಲಿದೆ. ಆದಾಗ್ಯೂ ರಾಜ್ಯವು ತಿಂಗಳ ಕೊನೆಯಲ್ಲಿ ಹೆಚ್ಚು ಹಣವನ್ನು ಪಾವತಿಸಲು ಸಜ್ಜುಗೊಳಿಸಬೇಕಿದೆ. ಕಳೆದ ತಿಂಗಳ ಅಂತ್ಯದ ವೇಳೆಗೆ ಖಾಜನೆಯಿಂದ 22,000 ಕೋಟಿ ರೂ. ಹಣವನ್ನು ಪಾವತಿಸಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...