ವೀಲ್ ಚೇರ್ ಅಭಾವ; ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್​ನಲ್ಲೇ ಕರೆದೊಯ್ದ ತಂದೆ!

Date:

ವೀಲ್‌ ಚೇರ್‌ ಸಿಗದ ಕಾರಣ ಕೋಪಗೊಂಡ ತಂದೆ, ಕಾಲು ಮುರಿತಕ್ಕೊಳಗಾಗಿದ್ದ ಮಗನನ್ನು ಸ್ಕೂಟಿಯಲ್ಲೇ ಆಸ್ಪತ್ರೆಯ ಮೂರನೇ ಮಹಡಿಗೆ ಚಿಕಿತ್ಸೆಗೆ ಕರೆದುಕೊಂಡ ಹೋದ ಅಪರೂಪದ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ.

ಕೋಟಾದ ಅತಿದೊಡ್ಡ ಎಂಬಿಎಸ್‌ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಆಗಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೃತ್ತಿಯಲ್ಲಿ ವಕೀಲರಾಗಿರುವ ಮನೋಜ್ ಜೈನ್ ಎಂಬುವವರು, ಎಡಗಾಲು ಮುರಿತಕ್ಕೆ ಒಳಗಾಗಿ ಪ್ಲಾಸ್ಟರ್‌ ಹಾಕಿಸಿಕೊಂಡಿದ್ದ ತನ್ನ ಮಗನನ್ನು ಚಿಕಿತ್ಸೆಗಾಗಿ ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಎಂಬಿಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯ ಮಂಭಾಗದಲ್ಲಿ ವೀಲ್‌ ಚೇರ್‌ ಅಥವಾ ಸ್ಟ್ರೆಚರ್‌ ಒದಗಿಸುವಂತೆ ಕೇಳಿದ್ದಾರೆ. ಆದರೆ ಈ ವೇಳೆ ಸಿಬ್ಬಂದಿ ಉಡಾಫೆಯಿಂದ ಉತ್ತರಿಸಿದ್ದು, ಮನೋಜ್ ಜೈನ್‌ರನ್ನು ಸಿಟ್ಟಿಗೇಳುವಂತೆ ಮಾಡಿತ್ತು.

ತುಂಬಾ ಹೊತ್ತು ಕಾದ ಬಳಿಕ, ತಾನು ಬಂದಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ನಲ್ಲೇ ನೇರವಾಗಿ ಆಸ್ಪತ್ರೆಯ ಒಳಗೆ ತೆರಳಿದ ಜೈನ್‌, ಬಳಿಕ ಮೂರನೇ ಮಹಡಿಯಲ್ಲಿರುವ ಒಪಿಡಿ ವಿಭಾಗಕ್ಕೆ ಲಿಫ್ಟ್‌ನಲ್ಲಿ ಸ್ಕೂಟರ್‌ನಲ್ಲೇ ತೆರಳಿ ಚಿಕಿತ್ಸೆ ಕೊಡಿಸಿದ್ದಾರೆ.

ವಾಗ್ವಾದ

ಚಿಕಿತ್ಸೆ ಪಡೆದು ಮತ್ತೆ ಸ್ಕೂಟರ್‌ನಲ್ಲೇ ಲಿಫ್ಟ್‌ ಬಳಿ ತೆರಳುತ್ತಿದ್ದ ಅಪ್ಪ-ಮಗನನ್ನು ಆಸ್ಪತ್ರೆಯ ಒಪಿಡಿ ವಿಭಾಗದ ವಾರ್ಡ್ ಉಸ್ತುವಾರಿ ದೇವಕಿನಂದ್ ತಡೆದಿದ್ದು,  ಸ್ಕೂಟಿಯ ಕೀಯನ್ನು ಕಿತ್ತುಕೊಂಡಿದ್ದಾರೆ.  ಈ ವೇಳೆ ಮನೋಜ್ ಜೈನ್ ಮತ್ತು ದೇವಕಿನಂದ್ ನಡುವೆ ಮಾತಿನ ಚಕಮಕಿ ನಡೆದಿದೆ.

ʻನಾನು ಯಾವುದೇ ತಪ್ಪು ಮಾಡಿಲ್ಲ, ಗಾಲಿಕುರ್ಚಿ ಇಲ್ಲದ ಕಾರಣ, ಮೂರನೇ ಮಹಡಿಗೆ ಸ್ಕೂಟರ್‌ನಲ್ಲಿ ತೆರಳಲು ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಅನುಮತಿ ಪಡೆದಿದ್ದೆʼ ಎಂದು ಜೈನ್‌ ಹೇಳಿದ್ದಾರೆ.  ಆಸ್ಪತ್ರೆಯ ಅಸಮರ್ಪಕ ನಿರ್ವಹಣೆ ಮತ್ತು ಅವ್ಯವಸ್ಥೆಗಳಿಂದಾಗಿ ಈ ಘಟನೆ ನಡೆದಿದೆ ಎಂದಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ದೇವಕಿನಂದ್ ʻಆಸ್ಪತ್ರೆಯಲ್ಲಿ ಒಪಿಡಿ ವಿಭಾಗವನ್ನು ವಿಸ್ತರಿಸಲಾಗಿದ್ದು, ಪ್ರತಿನಿತ್ಯ ಸುಮಾರು ಮೂರ ಸಾವಿರ ರೋಗಿಗಳು ಇಲ್ಲಿಗೆ ಬರುತ್ತಾರೆ. ಆದರೆ ಸಾಕಷ್ಟು ಸಂಖ್ಯೆಯ ಗಾಲಿಕುರ್ಚಿಗಳು ಇಲ್ಲಿಲ್ಲ. ಶೀಘ್ರದಲ್ಲೇ ವ್ಯವಸ್ಥೆಗೊಳಿಸಲಾಗುವುದುʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...