ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ

Date:

ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525 ವಿಶೇಷ ಚೇತನ ಮಕ್ಕಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ, ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.

ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ ಸಂಪತ್ತಿನಲ್ಲಿ ಶೇ 90 ರಷ್ಟು ಕೇವಲ 10 ಜನರ ಕೈಯಲ್ಲಿದೆ. ಇದು ತಪ್ಪು. ಶ್ರಮಿಕರ ದುಡಿಮೆಯ ಸಂಪತ್ತು ಎಲ್ಲರಲ್ಲೂ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ದೃಷ್ಟಿಯಿಂದ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ನಾಡಿನ 4 ಕೋಟಿ ರೈತರು, ಕಾರ್ಮಿಕರು, ಬಡವರಿಗೆ ಅನುಕೂಲ ಆಗುತ್ತಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ, ಬಡತನಕ್ಕೆ ಮಿಡಿಯುವ ಹೃದಯ. ಈ ಕಾರಣಕ್ಕೇ ಇವರಿಗೆ ಕಾರ್ಮಿಕ ಇಲಾಖೆ ಸಚಿವರನ್ನಾಗಿ ಮಾಡಿದ್ದೇನೆ. ಸಂತೋಷ್ ಲಾಡ್ ಅವರ ಕಾಳಜಿಯಿಂದ CSR ನಿಧಿ ಮತ್ತು ಕಾರ್ಮಿಕ ಇಲಾಖೆ ಮೂಲಕ 525 ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದ್ದಾರೆ. ಇದು ನನಗೆ ಬಹಳ ಸಂತೋಷ ತಂದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಬಸವಾದಿ ಶರಣರು ಕಾಯಕ, ದಾಸೋಹ ಎಂದು ಕರೆದದ್ದು ಇದನ್ನೇ. ಉತ್ಪಾದನೆಯ ಸಮಾನ ಹಂಚಿಕೆಯೇ ಕಾಯಕ ಮತ್ತು ದಾಸೋಹ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಅಳಿಸಬಹುದು. ಅಂಬೇಡ್ಕರ್ ಅವರೂ ಆರ್ಥಿಕ, ಸಾಮಾಜಿಕ‌ ಅಸಮಾನತೆ ತೊಡೆಯಲು ಹೋರಾಡಿದ್ದರು. ಅಸಮಾನತೆಗೆ ಸಿಲುಕಿದವರು ಪ್ರಜಾಪ್ರಭುತ್ವದ ಸೌಧವನ್ನು ನಾಶಮಾಡಬಹುದು ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ನೀಡಿದ್ದರು ಎಂದು ಸಿದ್ದರಾಮಯ್ಯ ವಿವರಿಸಿದರು.

ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ದುಡಿಯುವ ಶ್ರಮಿಕರಿಗೆ ಅನುಕೂಲ ಕಲ್ಪಿಸಬೇಕು ಎನ್ನುವುದು ನಮ್ಮ ಸರ್ಕಾರದ ಧ್ಯೇಯ ಎಂದರು.

ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್. ಹೆಚ್ . ಕೋನರೆಡ್ಡಿ ಸೇರಿ ಹಲವು ಗಣ್ಯರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...