ಚುನಾವಣಾ ಬಾಂಡ್ | ಎಸ್‌ಬಿಐ ಸಲ್ಲಿಸಿದ ಅರ್ಜಿ ವಜಾ, ನಾಳೆಯೇ ಮಾಹಿತಿ ನೀಡಿ ಎಂದ ಸುಪ್ರೀಂ

Date:

ಚುನಾವಣಾ ಬಾಂಡ್‌ ಮಾಹಿತಿಯನ್ನು ನೀಡಲು ಅಧಿಕ ಸಮಯವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ನಾಳೆಯೇ ಸಂಪೂರ್ಣ ಮಾಹಿತಿ ನೀಡಲು ಆದೇಶಿಸಿದೆ.

ಎಸ್‌ಬಿಐ ತನ್ನ ಅರ್ಜಿಯಲ್ಲಿ ಸ್ವತಃ ಎಲ್ಲಾ ವಿವರಗಳು ಪ್ರತ್ಯೇಕವಾಗಿ ಲಭ್ಯವಿದೆ ಎಂದು ಉಲ್ಲೇಖಿಸಿದೆ. ಹಾಗಿರುವಾಗ ಹೆಚ್ಚುವರಿ ಸಮಯ ಯಾಕೆ ನೀಡಬೇಕು ಎಂದು ಪ್ರಶ್ನಿಸಿರುವ ಸುಪ್ರೀಂ ಎಸ್‌ಬಿಐಯನ್ನು ತರಾಟೆಗೆ ತೆಗೆದುಕೊಂಡು, ಮಾಹಿತಿ ನೀಡಲು ಒಂದು ದಿನದ ಅವಕಾಶ ನೀಡಿದೆ. ಅಲ್ಲದೆ ಎಲ್ಲ ಮಾಹಿತಿಯನ್ನು ಒಟ್ಟುಗೂಡಿಸಿ ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್‌ 15 ಸಂಜೆ 5 ಗಂಟೆಯೊಳಗೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಆದೇಶಿಸಿದೆ.

ಕಳೆದ ತಿಂಗಳು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದ್ದು, ಎಸ್‌ಬಿಐಗೆ ಚುನಾವಣಾ ಬಾಂಡ್‌ನ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲು ಮಾರ್ಚ್‌ 6ರವರೆಗೆ ಸಮಯ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ ಅಂತ್ಯದವರೆಗೂ ಅಂದರೆ ನಾಲ್ಕು ತಿಂಗಳುಗಳ ಕಾಲಾವಕಾಶವನ್ನು ಕೋರಿ ಎಸ್‌ಬಿಐ ಅರ್ಜಿ ಸಲ್ಲಿಸಿತ್ತು. ಲೋಕಸಭೆ ಚುನಾವಣೆ ಮುಗಿಯುವವರೆಗೂ ಎಸ್‌ಬಿಐ ಅವಕಾಶ ಕೇಳಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು.

ಇನ್ನು ಸುಪ್ರೀಂ ಕೋರ್ಟ್ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ (ಎಡಿಆರ್) ಎನ್‌ಜಿಒ ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಎಸ್‌ಬಿಐ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ವೇಳೆ ಉಲ್ಲೇಖಿಸಿದೆ.

ಅರ್ಜಿ ವಿಚಾರಣೆಯ ಆರಂಭದಲ್ಲೇ “ನೀವು 26 ದಿನಗಳ ಕಾಲ ಏನು ಮಾಡಿದ್ದೀರಿ?” ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್, “ಮೂರು ವಾರ ಕಾಲಾವಕಾಶ ನೀಡಿದರೆ ಯಾವ ಪಕ್ಷಕ್ಕೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಹೊರತುಪಡಿಸಿ ಉಳಿದ ಮಾಹಿತಿಯನ್ನು ನೀಡಬಹುದು” ಎಂದ ಎಸ್‌ಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ.

“ಈಗಾಗಲೇ ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ಲಭಿಸಿದೆ ಎಂಬ ಮಾಹಿತಿಯನ್ನು ರಾಜಕೀಯ ಪಕ್ಷಗಳೇ ನೀಡಿದೆ. ಮತ್ತೆ ಅದೇ ಮಾಹಿತಿ ನೀಡಲು ನಿಮಗೆ ಮೂರು ವಾರಗಳ ಸಮಯ ಯಾಕೆ?” ಎಂದು ಸುಪ್ರೀಂ ಕೋರ್ಟ್ ಎಸ್‌ಬಿಐ ಪರ ವಕೀಲ ಹರೀಶ್ ಸಾಳ್ವೆರನ್ನು ಪ್ರಶ್ನಿಸಿದೆ.

ಚುನಾವಣಾ ಬಾಂಡ್‌ಗಳ ಬಗ್ಗೆ ಫೆ.15 ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಪ್ರಕ್ರಿಯೆ ಅಸಂವಿಧಾನಿಕ ಹಾಗೂ ನಾಗರಿಕರ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...