ಭೀಮಾ ಕೋರೆಗಾಂವ್‌ ಪ್ರಕರಣ: ಸಾಮಾಜಿಕ ಹೋರಾಟಗಾರರಾದ ಗೊನ್ಸಾಲ್ವಸ್, ಫೆರೇರಾಗೆ ಜಾಮೀನು

Date:

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷದಿಂದ ಬಂಧನದಲ್ಲಿದ್ದ ಸಾಮಾಜಿಕ ಹೋರಾಟಗಾರರಾದ ವರ್ನಾನ್ ಗೊನ್ಸಾಲ್ವಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ಜುಲೈ 28) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಇಬ್ಬರು ಮಹಾರಾಷ್ಟ್ರ ತೊರೆಯಬಾರದು ಹಾಗೂ ಪಾಸ್‌ಪೋರ್ಟ್‌ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇಬ್ಬರಿಗೂ ತಲಾ ಒಂದು ಮೊಬೈಲ್ ಬಳಸಲು ಅನುಮತಿಸಲಾಗಿದ್ದು, ಅವರು ಉಳಿದುಕೊಳ್ಳುವ ವಿಳಾಸದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಬೇಕು. ಇಬ್ಬರ ಫೋನ್ ಲೋಕೇಷನ್ ನಿತ್ಯವೂ ಆನ್ ಇರಬೇಕು, ವಾರಕ್ಕೊಮ್ಮೆ ತನಿಖಾಧಿಕಾರಿಗೆ ವರದಿ ನೀಡಬೇಕೆಂಬ ಷರತ್ತುಗಳನ್ನು ನ್ಯಾಯಾಧೀಶರು ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮಾ ಕೋರೆಗಾಂವ್ – ಎಲ್ಗರ್ ಪರಿಷದ್ ಆರೋಪಿಗಳಾದ ವರ್ನಾನ್ ಗೊನ್ಸಾಲ್ವಸ್ ಮತ್ತು ಅರುಣ್ ಫೆರೇರಾ ಅವರು ಆಗಸ್ಟ್ 2018 ರಿಂದ ಐದು ವರ್ಷ ಸೆರೆವಾಸವನ್ನು ಅನುಭವಿಸಿದ್ದಾರೆ. ಇದನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಇಬ್ಬರ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ ದಾಖಲಾಗಿದೆ.

ಇಬ್ಬರ ಜಾಮೀನನ್ನು ಈ ಹಿಂದೆ ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಕಾರ್ಯಕರ್ತರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೇಲ್ಜಾತಿ ಬಿಗಿಮುಷ್ಟಿ’ಯಲ್ಲಿ ಹೈಕೋರ್ಟುಗಳು-ಬಹುಜನರೇಕೆ ದೂರ ದೂರ?

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಮಾವೋವಾದಿಗಳು ಹಣಕಾಸಿನ ಬೆಂಬಲ ನೀಡಿದ್ದಾರೆ ಎಂದು ಪುಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಅಲ್ಲದೆ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಾಕಾರಿ ಭಾಷಣಗಳು ಮರುದಿನ ಪುಣೆಯ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...