ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನೂ ಕಾಡಿದ ‘ಸುಳ್ಳು ಸುದ್ದಿ’ : ಕಾನೂನು ಕ್ರಮದ ಎಚ್ಚರಿಕೆ

Date:

  • ಸಿಜೆಐ ಡಿವೈ ಚಂದ್ರಚೂಡ್ ಫೋಟೋ ಬಳಸಿ ‘ಇದು ಸರ್ವಾಧಿಕಾರಿ ಸರ್ಕಾರ’ ಹೇಳಿಕೆ ಪೋಸ್ಟರ್ ವೈರಲ್
  • ‘ಆ ರೀತಿಯ ಹೇಳಿಕೆ ಮುಖ್ಯ ನ್ಯಾಯಮೂರ್ತಿ ನೀಡಿಲ್ಲ, ಅದು ಸುಳ್ಳು’ ಎಂದ ಸುಪ್ರೀಂ ಕೋರ್ಟ್

ಇದುವರೆಗೆ ಜನಪ್ರತಿನಿಧಿಗಳು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳನ್ನು ಕಾಡುತ್ತಿದ್ದ ‘ಸುಳ್ಳು ಸುದ್ದಿ’ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೆ ತಲುಪಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಫೋಟೋ ಬಳಸಿ ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯಲ್ಲಿ ಪೋಸ್ಟರ್ ಒಂದನ್ನು ವೈರಲ್ ಮಾಡಲಾಗಿದ್ದು, ಅದರಲ್ಲಿ ಕೇಂದ್ರ ಸರ್ಕಾರವನ್ನು ‘ಇದು ಸರ್ವಾಧಿಕಾರಿ ಸರ್ಕಾರ. ಜನರು ಈ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕು’ ಎಂದು ಉಲ್ಲೇಖಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಿ ಸ್ಪಷ್ಟೀಕರಣ ನೀಡಿರುವ ಸುಪ್ರೀಂ ಕೋರ್ಟ್, ‘ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆನ್ನಲಾದ ಹೇಳಿಕೆಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ. ಆದರೆ ಮುಖ್ಯ ನ್ಯಾಯಮೂರ್ತಿಯವರು ಅಂತಹ ಹೇಳಿಕೆ ನೀಡಿಲ್ಲ. ಅದು ಸುಳ್ಳು ಸುದ್ದಿ. ಸುಳ್ಳು ಹರಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇವೆ’ ಎಂದು ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈರಲ್ ಮಾಡಲಾಗಿದ್ದ ಪೋಸ್ಟರ್‌ನಲ್ಲಿ, ‘ನಾವು ಭಾರತದ ಸಂವಿಧಾನವನ್ನು, ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಆದರೆ ನಿಮ್ಮ ಸಹಕಾರ ಕೂಡ ಇದಕ್ಕೆ ಬಹಳ ಮುಖ್ಯ. ಎಲ್ಲ ಜನರು ಒಗ್ಗೂಡಿ ಬೀದಿಗಿಳಿದು ತಮ್ಮ ಹಕ್ಕುಗಳ ಬಗ್ಗೆ ಸರ್ಕಾರದ ಬಳಿ ಕೇಳಬೇಕು. ಇದು ಸರ್ವಾಧಿಕಾರಿ ಸರ್ಕಾರ. ಜನರನ್ನು ಹೆದರಿಸುತ್ತಾರೆ, ಬೆದರಿಕೆ ಹಾಕುತ್ತಾರೆ. ಆದರೆ ನೀವು ಭಯಪಡಬೇಕಾಗಿಲ್ಲ, ಧೈರ್ಯವಾಗಿರಿ ಮತ್ತು ಸರ್ಕಾರವನ್ನು ಪ್ರಶ್ನಿಸಿ. ನಾನು ನಿಮ್ಮೊಂದಿಗಿದ್ದೇನೆ’ ಎಂದು ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾಗಿ ಬರೆಯಲಾಗಿತ್ತು.

WhatsApp Image 2023 08 14 at 4.26.40 PM

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಸಾರ್ವಜನಿಕ ಸಂಪರ್ಕಾಧಿಕಾರಿಯವರ ಕಾರ್ಯಾಲಯವು ‘ಇದು ಸುಳ್ಳು’ ಎಂದು ಹೇಳಿದೆ. ಜೊತೆಗೆ, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...