ಅದಾನಿ ಹಿಂಡನ್‌ಬರ್ಗ್ ಪ್ರಕರಣ: ನ. 8ಕ್ಕೆ ಅಂತಿಮ ದಾಖಲೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ

Date:

ಅದಾನಿ ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸಂಬಂಧಿತ ಎಲ್ಲರೂ ಕೂಡ ಬುಧವಾರದೊಳಗೆ (ನ. 8) ಅಂತಿಮ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ.

ಅದಾನಿ ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟೂ ಬೇಗ ವಿಚಾರಣೆ ಆರಂಭಿಸುವಂತೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿದಾರರೊಬ್ಬರು ಸಲ್ಲಿಸಿದ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ರಿಜಿಸ್ಟ್ರಾರ್​ಗೆ ಇದನ್ನು ಗಮನಿಸಲು ಹೇಳುವುದಾಗಿ ತಿಳಿಸಿತು. ಹಾಗೆಯೇ, ನಾಳೆ ಇದನ್ನು ಮತ್ತೆ ಪ್ರಸ್ತಾಪಿಸುವಂತೆಯೂ ಅರ್ಜಿದಾರರಿಗೆ ಸೂಚಿಸಿತು.

ಅರ್ಜಿದಾರರ ಪರ ವಾದಿಸಿದ ಪ್ರಶಾಂತ್ ಭೂಷಣ್, ಈ ಪ್ರಕರಣವನ್ನು ಲಿಸ್ಟ್​ಗೆ ಹಾಕಿಸಲು ಅರ್ಜಿದಾರರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಸಾಧ್ಯವಾಗಿಲ್ಲ ಆಗಸ್ಟ್ 28ಕ್ಕೆ ವಿಚಾರಣೆ ನಡೆಯಲು ಲಿಸ್ಟ್ ಆಗಿತ್ತಾದರೂ ಅದು ಮುಂದಕ್ಕೆ ಹೋಗಿದೆ. ಈಗ ಮತ್ತೆ ಲಿಸ್ಟ್ ಆಗುತ್ತಿಲ್ಲ. ಆದಷ್ಟೂ ಬೇಗ ಪ್ರಕರಣವು ಲಿಸ್ಟ್ ಆಗಿ, ವಿಚಾರಣೆ ಶುರುವಾಗಲಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಅವರು, ಸರ್ಕಾರ ಈ ಪ್ರಕರಣದಲ್ಲಿ ಎರಡು ಪುಟಗಳ ದಾಖಲೆಯನ್ನು ಸಲ್ಲಿಸಬೇಕಿದೆ ಎಂಬ ವಿಚಾರವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಾದ್ಯಂತ ನೀರಾವರಿ ಪಂಪ್‍ಸೆಟ್‍ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್: ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ

ಅದಾನಿ ಸಮೂಹದ ಷೇರುಗಳ ಬೆಲೆಯನ್ನು ತಿರುಚಿದ ಆರೋಪಗಳಿಗೆ ಸಂಬಂಧಿಸಿದ ಪಿಐಎಲ್‌ಗಳ ವಿಚಾರಣೆಗೆ ಪಟ್ಟಿ ಮಾಡುವ ವಿಷಯವನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಪರಿಶೀಲಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ತಿಳಿಸಿದೆ.

ಜುಲೈ 11 ರಂದು, ಅದಾನಿ ಸಮೂಹದಿಂದ ಷೇರುಗಳ ಬೆಲೆ ತಿರುಚಿದ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಯ ಬಗ್ಗೆ ತಿಳಿಸುವಂತೆ ‘ಸೆಬಿ’ಗೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸೆಬಿಯಿಂದ ತನಿಖೆಗೆ ಆಗಸ್ಟ್ 14 ರವರೆಗೆ ಕಾಲಾವಕಾಶ ನೀಡಿದ್ದ ನ್ಯಾಯಾಲಯ, ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂದು ಹೇಳಿತ್ತು.

ಸೆಬಿ ಈ ಪ್ರಕರಣದಲ್ಲಿ 24 ಅಂಶಗಳನ್ನು ತನಿಖೆ ಮಾಡಿದೆ. ಇದರಲ್ಲಿ 22 ತನಿಖೆಗಳು ಅಂತಿಮಗೊಂಡಿವೆ. ಇನ್ನೆರಡು ತನಿಖೆಯಲ್ಲಿ ಮಧ್ಯಂತರ ವರದಿಗಳು ಸಿದ್ಧವಾಗಿವೆ. ನವೆಂಬರ್ 8ಕ್ಕೆ ದೂರುದಾರರು, ಅದಾನಿ ಪರ ವಕೀಲರು, ಸರ್ಕಾರ ಮತ್ತು ಸೆಬಿ ಎಲ್ಲರೂ ಕೂಡ ಅಂತಿಮ ದಾಖಲೆಗಳನ್ನು ಸುಪ್ರೀಂ ನ್ಯಾಯಪೀಠಕ್ಕೆ ಸಲ್ಲಿಸಬೇಕಾಗುತ್ತದೆ. ಅದಾದ ಬಳಿಕ ಮುಂದಿನ ವಿಚಾರಣೆಗೆ ನ್ಯಾಯಪೀಠ ದಿನ ನಿಗದಿ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...