ಸಾಬರಮತಿ ಆಶ್ರಮ ಪುನರಾಭಿವೃದ್ಧಿ ವಿರುದ್ಧ ಮಹಾತ್ಮ ಗಾಂಧಿ ಮರಿ ಮೊಮ್ಮಗ ಸುಪ್ರೀಂ ಕೋರ್ಟ್‌ ಮೊರೆ

Date:

ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆ ಎತ್ತಿಹಿಡಿದಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಒಟ್ಟು 1,200 ಕೋಟಿ ರೂ. ವೆಚ್ಚದ ಯೋಜನೆ ಆಶ್ರಮದ ಸರಳತೆಯನ್ನು ಅಳಿಸಿಹಾಕುತ್ತದೆ ಮತ್ತು ಅದನ್ನು ಗಾಂಧಿ ಮೌಲ್ಯಗಳಿಂದ ದೂರವಾದ ಸರ್ಕಾರಿ ನಿಯಂತ್ರಿತ ಸ್ಮಾರಕವಾಗಿ ಪರಿವರ್ತಿಸುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಯೋಜನೆ ಮಹಾತ್ಮ ಗಾಂಧಿ ಪರಂಪರೆಗೆ ಮಾಡಿದ ದ್ರೋಹವಾಗಿದೆ. ಮೂಲ ಆಶ್ರಮ ಇರುವ ಸ್ಥಳ ಬದಲಾಯಿಸುವುದು ಜೊತೆಗೆ ವಸ್ತುಸಂಗ್ರಹಾಲಯ, ಆಂಫಿಥಿಯೇಟರ್‌ ಹಾಗೂ ಆಹಾರ ಕೇಂದ್ರದೊಂದಿಗೆ ಆಧುನೀಕೃತ ಅಂಗಳವಾಗಿ ಮರುರೂಪಿಸಲು ಸರ್ಕಾರ ಯತ್ನಿಸುತ್ತಿದೆ. ಗಾಂಧಿವಾದಿ ಚಿಂತನೆಗೆ ಯೋಜನೆಯಲ್ಲಿ ಬೆಲೆ ನೀಡಲಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುನರಾಭಿವೃದ್ಧಿ ಪ್ರಶ್ನಿಸಿ ಈ ಹಿಂದೆ ತುಷಾರ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಸೆಪ್ಟೆಂಬರ್ 2022ರಲ್ಲಿ ತಿರಸ್ಕರಿಸಿತ್ತು. ಆದರೆ ಹೈಕೋರ್ಟ್‌ ತೀರ್ಪು ಆಶ್ರಮದ ಪರಂಪರೆಯನ್ನು ನಿರ್ಲಕ್ಷಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಿರುವ ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್ ಜನ್ಮದಿನ ಏ.14ರಂದು ಕೇಂದ್ರ ಸರಕಾರಿ ಕಚೇರಿಗಳಿಗೆ ರಜಾ ದಿನವಾಗಿ ಘೋಷಣೆ

ಹೈಕೋರ್ಟ್‌ ತೀರ್ಪನ್ನು ರದ್ದುಗೊಳಿಸಿ, ಪ್ರಕರಣದ ವಿಚಾರಣೆ ಮುಗಿಯುವವರೆಗೆ ಎಲ್ಲ ನಿರ್ಮಾಣ ಅಥವಾ ಪುನರಾಭಿವೃದ್ಧಿ ಚಟುವಟಿಕೆಗಳಿಗೆ ತಡೆ ನೀಡಬೇಕು. ಶತಮಾನದಷ್ಟು ಹಳೆಯದಾದ ಆಶ್ರಮದ ಸ್ಥಳಾಕೃತಿಯನ್ನು ಯೋಜನೆ ಬದಲಿಸುತ್ತದೆ ಜೊತೆಗೆ ಅದರ ಆಶಯಗಳಿಗೆ ಮಾರಕ. ಯೋಜನೆಯಡಿ 40 ಕಟ್ಟಡಗಳನ್ನು ಸಂರಕ್ಷಿಸಲಾಗುತ್ತಿದ್ದು ಉಳಿದ 200 ನಿರ್ಮಿತಿಗಳನ್ನು ನಾಶ ಅಥವಾ ಮರುನಿರ್ಮಾಣ ಮಾಡಲಾಗುತ್ತಿದೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಹರಿಜನ ಕುಟುಂಬಗಳನ್ನು ಸ್ಥಳಾಂತರಿಸಿ ಪ್ರಸ್ತುತ ಈ ಪ್ರದೇಶದ ಮೇಲ್ವಿಚಾರಣೆ ಮಾಡುತ್ತಿರುವ ಗಾಂಧಿವಾದಿ ಟ್ರಸ್ಟ್‌ಗಳನ್ನು ಮೂಲೆಗುಂಪಾಗಿಸುತ್ತದೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದ ಸರ್ಕಾರಿ ಪ್ರಾಬಲ್ಯದ ಸಂಸ್ಥೆಗೆ ಹಸ್ತಾಂತರಿಸುವ ಉದ್ದೇಶದಿಂದ ಯೋಜನೆ ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಸ್ಮಾರಕವನ್ನು ಸ್ವಾಧೀನಪಡಿಸಿಕೊಳ್ಳುವ ಕುತಂತ್ರ ರೂಪಿಸಿದೆ. ಸ್ವತಂತ್ರ ಗಾಂಧಿವಾದಿಗಳು, ಇತಿಹಾಸಕಾರರು ಮತ್ತು ಆಶ್ರಮದ ಪಾಲಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು. ಸರ್ಕಾರದ ನಿಯಂತ್ರಣ ಇರಬಾರದು ಸ್ವತಂತ್ರ ಗಾಂಧಿವಾದಿಗಳು, ಇತಿಹಾಸಕಾರರು ಮತ್ತು ಆಶ್ರಮದ ಪಾಲಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು ಹಾಗೂ ಸರ್ಕಾರದ ನಿಯಂತ್ರಣ ಇರಬಾರದು ಎಂದು ಅರ್ಜಿದಾರರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...