ಸಿಎಎ | ಸುಪ್ರೀಂ ಕೋರ್ಟ್‌ನಲ್ಲಿ ಇಂದು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆ

Date:

ವಿವಾದಾದ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಸುಪ್ರೀ ಕೋರ್ಟ್ ಇಂದು (ಮಂಗಳವಾರ) ಕೈಗೆತ್ತಿಕೊಳ್ಳಲಿದೆ. ಸಿಎಎ ಮತ್ತು ಪೌರತ್ವ ತಿದ್ದುಪಡಿ ನಿಯಮ 2024ಕ್ಕೆ ಜಾರಿಗೆ ತಡೆಯೊಡ್ಡಬೇಕೆಂದು ಈ ಅರ್ಜಿಗಳು ಕೋರಿವೆ.

ಮುಖ್ಯ ನ್ಯಾಯಾಧೀಶ ಡಿ ವೈ ಚಂದ್ರಚೂಡ ನೇತೃತ್ವದ ನ್ಯಾಯಾಧೀಶ ಜೆಬಿ ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾರನ್ನು ಒಳಗೊಂಡ ಪೀಠವು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಕಳೆದ ವಾರ, ಹಿರಿಯ ವಕೀಲ ಕಪಿಲ್ ಸಿಬಲ್ ಕೇರಳ ಮೂಲದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪ್ರಸ್ತಾಪವನ್ನು ಕೋರ್ಟ್‌ನಲ್ಲಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಕೇಂದ್ರ ಸರ್ಕಾರವು ವಿವಾದಾತ್ಮಕ ಸಿಎಎ ಕಾಯ್ದೆಯನ್ನು ಜಾರಿ ಮಾಡಿರುವುದು ಪ್ರಶ್ನಾರ್ಹವಾಗಿದೆ ಎಂದು ಕಪಿಲ್ ಸಿಬಲ್ ಹೇಳಿದರು. ಸಿಎಎ ಕಾಯ್ದೆ ಧಾರ್ಮಿಕ ತಾರತಮ್ಯವನ್ನು ಮಾಡುವ ಕಾಯ್ದೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನೂರಾರು ಅರ್ಜಿ: ವಿಚಾರಣೆಗೆ ಸಮ್ಮತಿ

ಸಿಎಎ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ 2014ರ ಡಿಸೆಂಬರ್‌ಗೂ ಮುನ್ನ ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ಹಿಂದೂ, ಕ್ರೈಸ್ತ, ಪಾರ್ಸಿ, ಬೌದ್ಧ, ಜೈನ, ಸಿಖ್‌ಗಳಿಗೆ ಪೌರತ್ವವನ್ನು ನೀಡುವ ಕಾಯ್ದೆಯಾಗಿದೆ. ಈ ಕಾಯ್ದೆಯಲ್ಲಿ ಮುಸ್ಲಿಮರನ್ನು ಹೊರಗಿಡಲಾಗಿದೆ.

ಐಯುಎಂಎಲ್ ಹೊರತುಪಡಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಅಸ್ಸಾಂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ, ಸಿಪಿಎಐಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಡಿವೈಎಫ್‌ಐ, ಎಸ್‌ಡಿಪಿಎಐ, ರಿಹಾಯ್ ಮಂಚ್, ಸಿಟಿಜನ್ ಅಗೆನ್ಸ್ಟ್ ಹೇಟ್ ಎನ್‌ಜಿಒ ಮೊದಲಾದವುಗಳು ಅರ್ಜಿಯನ್ನು ಸಲ್ಲಿಸಿದೆ.

2020ರಲ್ಲಿ ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಕದವನ್ನು ಮೊದಲ ಬಾರಿಗೆ ಕೇರಳ ತಟ್ಟಿದೆ. ಇದು ಭಾರತದ ಸಂವಿಧಾನಕ್ಕೆ ವಿರುದ್ದವಾದುದ್ದು, ತಾರತಮ್ಯದಿಂದ ಕೂಡಿದೆ ಎಂದು ಹೇಳಿದೆ. ಅದಾದ ಬಳಿಕ ಈವರೆಗೆ 200ಕ್ಕೂ ಅಧಿಕ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.

ಮಾರ್ಚ್ 11ರಂದು ಕೇಂದ್ರ ಸರ್ಕಾರವು ಸಿಎಎ ಜಾರಿ ಮಾಡಿದೆ. 2019ರಲ್ಲಿ ಅನುಮೋದನೆಗೊಂಡ ಈ ವಿವಾದಾದ್ಮಕ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನ ಜಾರಿ ಮಾಡಿರುವುದು ಟೀಕೆಗೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...