ತೆಲಂಗಾಣ | ಸರ್ಕಾರಿ ಉದ್ಯೋಗ ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ವಂಚನೆ

Date:

  • ಕೃತಕ ಬುದ್ಧಿಮತ್ತೆ ಚಾಟ್‌ಜಿಪಿಟಿ ಬಳಸಿ ಬ್ಲೂಟೂತ್ ಮೂಲಕ ಉತ್ತರ ರವಾನೆ
  • ಪ್ರತಿಯೊಬ್ಬ ಅಭ್ಯರ್ಥಿಗಳಿಂದ ರಮೇಶ್ ತಲಾ ₹40 ಲಕ್ಷ ಪಡೆದ ಆರೋಪಿ

ಕಳೆದ ಕೆಲವು ತಿಂಗಳಿನಿಂದ ಚಾಟ್‌ಜಿಪಿಟಿ ಎಂಬ ಕೃತಕ ಬುದ್ಧಿಮತ್ತೆಯ ಬುದ್ಧಿವಂತಿಕೆ ಜನಪ್ರಿಯವಾಗುತ್ತಿದೆ. ಆದರೆ, ಕೃತಕ ಬುದ್ಧಿಮತ್ತೆ ಇತ್ತೀಚೆಗೆ ಒಳಿತಿಗಿಂತ ಹೆಚ್ಚು ಕೆಡುಕಿಗೆ ಸುದ್ಧಿಯಾಗುತ್ತಿದೆ. ತೆಲಂಗಾಣದಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಸರ್ಕಾರಿ ಪರೀಕ್ಷೆಯೊಂದರಲ್ಲಿ ಅಕ್ರಮ ಎಸಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ತೆಲಂಗಾಣದಲ್ಲಿ ನಾಗರಿಕ ಸೇವೆ ಪರೀಕ್ಷೆ ಬರೆಯಲು ಚಾಟ್‌ಜಿಪಿಟಿ ನೆರವು ಪಡೆಯಲಾಗಿದೆ. ಭಾರತದಲ್ಲಿ ಈ ರೀತಿ ಪ್ರಕರಣ ನಡೆದಿರುವುದು ಇದೇ ಮೊದಲು.

ತೆಲಂಗಾಣ ರಾಜ್ಯ ನಾಗರಿಕ ಸೇವಾ ಆಯೋಗದ (ಟಿಎಸ್‌ಪಿಎಸ್‌ಸಿ) ಪರೀಕ್ಷೆಯಲ್ಲಿ ಬ್ಲೂಟೂತ್ ಮೂಲಕ ವಂಚನೆ ನಡೆದಿರುವ ಪ್ರಕರಣದಲ್ಲಿ ಚಾಟ್‌ಜಿಪಿಟಿಯ ಬಳಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಜಾಲವು ಹಣ ನೀಡಿರುವ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡುತ್ತಿತ್ತು. ಈ ರೀತಿ ಉತ್ತರ ಹುಡುಕಲು ಚಾಟ್‌ಜಿಪಿಟಿಯ ನೆರವು ಪಡೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ಮತ್ತು ಡಿವಿಷನಲ್ ಅಕೌಂಟ್ ಆಫೀಸರ್ ಹುದ್ದೆಗಳಿಗೆ ನಡೆದ ಪರೀಕ್ಷೆಗಳಿಗೆ ಉತ್ತರಗಳನ್ನು ಚಾಟ್‌ಜಿಪಿಟಿ ಮೂಲಕ ಕಂಡುಕೊಂಡು ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ರವಾನಿಸಲಾಗಿತ್ತು.

ಎಸ್ಐಟಿ ತನಿಖಾಧಿಕಾರಿಗಳು ಪೆದ್ದಪಲ್ಲಿಯಲ್ಲಿ ತೆಲಂಗಾಣ ರಾಜ್ಯ ಉತ್ತರ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್‌ನ ವಿಭಾಗೀಯ ಇಂಜಿನಿಯರ್ ಅನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.

ಆರೋಪಿ ಪೂಲಾ ರಮೇಶ್, ಈ ವರ್ಷದ ಆರಂಭದಲ್ಲಿ ನಡೆದ ಎರಡು ಪರೀಕ್ಷೆಗಳಲ್ಲಿ ಏಳು ಆಕಾಂಕ್ಷಿಗಳಿಗೆ ಉತ್ತರಗಳನ್ನು ನೀಡಲು ಚಾಟ್‌ಜಿಪಿಟಿ ಬಳಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ನವ್‌ಐಸಿ ಉಪಗ್ರಹ | ಪ್ರಾದೇಶಿಕ ನೇವಿಗೇಶನ್ ವ್ಯವಸ್ಥೆ ಪ್ರಬಲಗೊಳಿಸಿದ ಇಸ್ರೋ

ಸೋರಿಕೆಯಾದ ಪ್ರಶ್ನೆಪತ್ರಿಕೆ ನೋಡಿಕೊಂಡು ಪರೀಕ್ಷೆ ಆರಂಭವಾದ ಹತ್ತು ನಿಮಿಷದ ಬಳಿಕ ಉತ್ತರಗಳನ್ನು ನೀಡಲು ಆರಂಭಿಸಿದ್ದ. ಪ್ರತಿಯೊಬ್ಬ ಅಭ್ಯರ್ಥಿಗಳಿಂದ ರಮೇಶ್ ತಲಾ ₹40 ಲಕ್ಷ ಪಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...