ನ್ಯಾಯದೇವತೆ ಪ್ರತಿಮೆ,ಸುಪ್ರೀಂ ಕೋರ್ಟ್ ಲಾಂಛನದಲ್ಲಿ ಏಕಪಕ್ಷೀಯ ಬದಲಾವಣೆ: ಎಸ್‌ಸಿಬಿಎ ಆಕ್ಷೇಪ

Date:

ವಕೀಲ ವರ್ಗದೊಂದಿಗೆ ಸಮಾಲೋಚಿಸದೆಯೇ ನ್ಯಾಯದೇವತೆಯ ಪ್ರತಿಮೆ ಮತ್ತು ಸುಪ್ರೀಂ ಕೋರ್ಟ್‌ ಲಾಂಛನದಲ್ಲಿ ಏಕಪಕ್ಷೀಯವಾಗಿ ಬದಲಾವಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ ವಕೀಲರ ಸಂಘದ (ಎಸ್‌ಸಿಬಿಎ) ಕಾರ್ಯಕಾರಿ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ಸಿಜೆಐ ಡಿ ವೈ ಚಂದ್ರಚೂಡ್‌ ನೇತೃತ್ವದ ಆಡಳಿತ ಏಕಪಕ್ಷೀಯವಾಗಿ ಬದಲಾವಣೆ ಮಾಡಿರುವುದಕ್ಕೆ ಸಂಘದ ಅಧ್ಯಕ್ಷ ಕಪಿಲ್ ಸಿಬಲ್ ನೇತೃತ್ವದ ಕಾರ್ಯಕಾರಿ ಸಮಿತಿ ಅಸಮಾಧಾನ ವ್ಯಕ್ತಪಡಿಸಿತು. ಈ ಬೆಳವಣಿಗೆಯನ್ನು ನ್ಯಾಯಿಕ ಆಡಳಿತದಲ್ಲಿ ಸಮಪಾಲು ಇರುವ ವಕೀಲ ವರ್ಗದ ಗಮನಕ್ಕೆ ತಂದಿಲ್ಲ. ಬದಲಾವಣೆಗಳ ಹಿಂದಿನ ತಾರ್ಕಿಕತೆ ಏನೆಂಬುದು ವಕೀಲ ವರ್ಗಕ್ಕೆ ಸ್ವಲ್ಪವೂ ಅರ್ಥವಾಗುತ್ತಿಲ್ಲ ಎಂದು ಅಕ್ಟೋಬರ್ 22 ರಂದು ಎಸ್‌ಸಿಬಿಎ ಕೈಗೊಂಡಿರುವ ನಿರ್ಣಯ ತಿಳಿಸಿದೆ.

ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ನಡೆದ ಜಿಲ್ಲಾ ನ್ಯಾಯಾಂಗದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಸುಪ್ರೀಂ ಕೋರ್ಟ್‌ನ ಹೊಸ ಧ್ವಜ ಮತ್ತು ಲಾಂಛನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅನಾವರಣಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಅಶೋಕ ಚಕ್ರ, ಸುಪ್ರೀಂ ಕೋರ್ಟ್ ಕಟ್ಟಡ ಮತ್ತು ಭಾರತದ ಸಂವಿಧಾನ ಹೀಗೆ ಹೊಸದಾಗಿ ಅನಾವರಣಗೊಂಡ ಧ್ವಜದಲ್ಲಿ ಭಾರತದ ಕಾನೂನು ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರಧಾನ ಚಿಹ್ನೆಗಳಿವೆ. ಹೊಸ ಸುಪ್ರೀಂ ಕೋರ್ಟ್ ಧ್ವಜ ನೀಲಿ ಬಣ್ಣದಲ್ಲಿದೆ. ಚಿಹ್ನೆಯ ಮೇಲೆ ‘ಭಾರತದ ಸರ್ವೋಚ್ಚ ನ್ಯಾಯಾಲಯ’ ಮತ್ತು ‘ಯತೋ ಧರ್ಮಸ್ತತೋ ಜಯಃ’ ಎಂದು (ದೇವನಾಗರಿ ಲಿಪಿಯಲ್ಲಿ) ಕೆತ್ತಲಾಗಿದೆ.

ಇತ್ತೀಚೆಗೆ ಸಿಜೆಐ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ಅಂಗಳದಲ್ಲಿ ಅನಾವರಣಗೊಳಸಿದ ಹೊಸ ನ್ಯಾಯದೇವತೆಯ ಪ್ರತಿಮೆ ಸೀರೆಯಿಂದ ಅಲಂಕೃತವಾಗಿದ್ದು ಆಕೆಯ ಕಣ್ಣಿಗೆ ಈ ಹಿಂದೆ ಕಟ್ಟಿರುತ್ತಿದ್ದ ಬಟ್ಟೆಯನ್ನು ತೆಗೆಯಲಾಗಿದೆ. ಒಂದು ಕೈಯಲ್ಲಿ ತಕ್ಕಡಿ ಮತ್ತೊಂದು ಕೈಯಲ್ಲಿ ದೇಶದ ಸಂವಿಧಾನ ಹಿಡಿದಿರುವಂತೆ ಮೂರ್ತಿಯನ್ನು ಕೆತ್ತಲಾಗಿದೆ.

ವಕೀಲ ವರ್ಗ ಮನವಿ ಮಾಡಿದಂತೆ ಕೆಫೆ ಮತ್ತು ಲೈಬ್ರರಿ ಬದಲಿಗೆ ಪೂರ್ವ ನ್ಯಾಯಮೂರ್ತಿಗಳ ಗ್ರಂಥಾಲಯದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸುವುದಕ್ಕೆ ಅದು ಆಕ್ಷೇಪ ವ್ಯಕ್ತಪಡಿಸಿದೆ. ಈಗಿನ ಕೆಫೆಟೇರಿಯಾ ವಕೀಲ ವರ್ಗದ ಅಗತ್ಯತೆ ಪೂರೈಸಲು ಅಸಮರ್ಪಕವಾಗಿರುವುದರಿಂದ ಗ್ರಂಥಾಲಯ ಮತ್ತು ಕೆಫೆ ಕಮ್‌ ಲಾಂಜ್‌ ಸೌಲಭ್ಯವನ್ನು ಅದು ಕೇಳಿತ್ತು. ಈಗಾಗಲೇ ವಸ್ತು ಸಂಗ್ರಹಾಲಯದ ವಿರುದ್ಧ ಧ್ವನಿ ಎತ್ತಿದ್ದರೂ ಅದರ ಕಾಮಗಾರಿ ಆರಂಭವಾಗಿರುವುದು ಕಳವಳಕಾರಿ ಎಂದು ಸಂಘ ತಿಳಿಸಿದೆ.

ಅತಿ ಭದ್ರತಾ ವಲಯದಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸುತ್ತಿರುವುದನ್ನು ಸರ್ವಾನುಮತದಿಂದ ಖಂಡಿಸಿರುವ ಸಂಘ ಗ್ರಂಥಾಲಯ ಮತ್ತು ಕೆಫೆ ಕಮ್‌ ಲಾಂಜ್‌ ಸ್ಥಾಪಿಸುವ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...