ಪ್ಯಾಲೆಸ್ತೀನ್‌ ಪರ ಪೋಸ್ಟ್‌ಗೆ ಲೈಕ್, ಕಾಮೆಂಟ್ ಮಾಡಿದ ಪ್ರಾಂಶುಪಾಲರಿಗೆ ರಾಜೀನಾಮೆ ನೀಡಲು ಸೂಚನೆ!

Date:

ಪ್ಯಾಲೆಸ್ತೀನ್‌ ಮತ್ತು ಹಮಾಸ್-ಇಸ್ರೇಲ್ ಸಂಘರ್ಷದ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟ್ಟರ್) ಪೋಸ್ಟ್‌ಗಳಿಗೆ ಲೈಕ್ ಮತ್ತು ಕಾಮೆಂಟ್ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್‌ ಅವರಿಗೆ ರಾಜೀನಾಮೆ ನೀಡುವಂತೆ ಶಾಲಾ ಆಡಳಿತ ಮಂಡಳಿಯು ಸೂಚಿಸಿದೆ ಎಂದು ವರದಿಯಾಗಿದೆ.

ವಿದ್ಯಾವಿಹಾರ್‌ನ ಸೋಮಯ್ಯ ಶಾಲೆಯಲ್ಲಿ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಮತ್ತು 7 ವರ್ಷಗಳ ಹಿಂದೆ ಅದರ ಪ್ರಾಂಶುಪಾಲರಾದ ಪರ್ವೀನ್ ಶೇಖ್ “ನಾನು ಸಂಸ್ಥೆಯ ಏಳಿಗಾಗಿ ಶೇಕಡ 100ರಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದು, ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಇದನ್ನು ಓದಿದ್ದೀರಾ?  ಕೇರಳ| ಪ್ಯಾಲೆಸ್ತೀನ್ ಪರ ಪೋಸ್ಟರ್‌ ಹರಿದ ಆರೋಪ; ಇಬ್ಬರು ಆಸ್ಟ್ರೇಲಿಯಾದ ಮಹಿಳೆಯರ ಮೇಲೆ ಪ್ರಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರ್ವೀನ್ ಶೇಖ್ ಅವರು ಪ್ಯಾಲೆಸ್ತೀನ್ ಪರ ಪೋಸ್ಟ್‌ಗಳಿಗೆ ಕಾಮೆಂಟ್ ಮತ್ತು ಲೈಕ್ ಮಾಡಿದ್ದನ್ನು ಹೈಲೈಟ್ ಮಾಡಿಕೊಂಡು ಹಿಂದುತ್ವಪರ ಪೋರ್ಟಲ್‌ OpIndia ಏಪ್ರಿಲ್ 24 ರಂದು ಒಂದು ವರದಿಯನ್ನು ಪ್ರಕಟಿಸಿತ್ತು. ಈ ವರದಿ ಪ್ರಕಟವಾದ ಬಳಿಕ ಶಾಲೆಯ ಆಡಳಿತ ಪರ್ವೀನ್ ಶೇಖ್ ಅವರಿಗೆ ರಾಜೀನಾಮೆ ನೀಡಲು ಸೂಚಿಸಿದೆ.

“ಏಪ್ರಿಲ್ 26 ರಂದು ನಡೆದ ಸಭೆಯಲ್ಲಿ ಶಾಲೆಯ ಆಡಳಿತ ನನ್ನನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದೆ, ಹಾಗೆಯೇ ಇದು ಶಾಲೆಯ ಆಡಳಿತಕ್ಕೆ ಒಂದು ಕಠಿಣ ನಿರ್ಧಾರ ಎಂದು ಹೇಳಿದೆ. ನಾನು ಕೆಲಸ ಮಾಡುವುದನ್ನು ಮುಂದುವರಿಸಿದೆ. ಆದರೆ ನ್ನ ಮೇಲೆ ರಾಜೀನಾಮೆ ನೀಡುವಂತೆ ಒತ್ತಡ ಹಾಕಲಾಗುತ್ತಿತ್ತು” ಎಂದು ಪರ್ವೀನ್ ಶೇಖ್ ಹೇಳಿದ್ದಾರೆ.

“ನಾನು ಪ್ರಜಾಸತ್ತಾತ್ಮಕ ಭಾರತದಲ್ಲಿ ವಾಸಿಸುತ್ತಿದ್ದೇನೆ. ನಾನು ವಾಕ್ ಸ್ವಾತಂತ್ರ್ಯದ ತತ್ವವನ್ನು ಹೆಚ್ಚು ಗೌರವಿಸುತ್ತೇನೆ. ಏಕೆಂದರೆ ಅದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನನ್ನ ಅಭಿವ್ಯಕ್ತಿಯು ಇಂತಹ ದುರುದ್ದೇಶಪೂರಿತ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ. ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...