ದೆಹಲಿ ಲೋಕಸಭಾ ಸೀಟು ಹಂಚಿಕೆ: ಕಾಂಗ್ರೆಸ್ 3, ಎಎಪಿ 4ರಲ್ಲಿ ಸ್ಪರ್ಧೆ!

Date:

ಹಲವು ಸುತ್ತುಗಳ ಮಾತುಕತೆಯ ಬಳಿಕ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೋಕಸಭೆ ಕ್ಷೇತ್ರಗಳ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಹಾಗೂ ಅಮ್‌ ಆದ್ಮಿ ಪಕ್ಷಗಳು ಅಂತಿಮ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಉಭಯ ಪಕ್ಷಗಳು ನಾಲ್ಕು – ಮೂರು ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ. ಎಎಪಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎನ್ನಲಾಗಿದೆ.

“ಎರಡು ಪಕ್ಷಗಳ ನಡುವಣ ದೆಹಲಿಯ ಸೀಟು ಹಂಚಿಕೆ ಒಪ್ಪಂದ ಅಂತಿಮ ಹಂತ ತಲುಪಿದೆ. ಯಾವ ಕ್ಷೇತ್ರಗಳಲ್ಲಿ ಉಭಯ ಪಕ್ಷಗಳು ಸ್ಪರ್ಧಿಸಲಿವೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗೊಳಿಸುತ್ತೇವೆ” ಎಂದು ಎಎಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಈ ವಾರ ಎರಡು ಪಕ್ಷಗಳ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದವು. ದೆಹಲಿಯಲ್ಲಿ ಉತ್ತರ, ಪೂರ್ವ ಹಾಗೂ ಪಶ್ಚಿಮ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

ನಿನ್ನೆಯಷ್ಟೆ(ಫೆ.21) ಎಸ್‌ಪಿ ಹಾಗೂ ಕಾಂಗ್ರೆಸ್ ನಡುವೆ ಉತ್ತರ ಪ್ರದೇಶದ ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿದಿತ್ತು. 80 ಲೋಕಸಭಾ ಸದಸ್ಯರಿರುವ ರಾಜ್ಯದಲ್ಲಿ ಕಾಂಗ್ರೆಸ್ 17 ಹಾಗೂ ಎಸ್‌ಪಿ 62 ಕ್ಷೇತ್ರಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಪಂಜಾಬ್‌ ರಾಜ್ಯದ ಎಲ್ಲ 13 ಸ್ಥಾನಗಳಲ್ಲೂ ಎಎಪಿ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರೀವಾಲ್ ಕಳೆದ ವಾರ ತಿಳಿಸಿದ್ದರು.

ಪಂಜಾಬ್‌ನಲ್ಲಿ ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 8, ಎಸ್‌ಎಡಿ 2, ಬಿಜೆಪಿ 2 ಹಾಗೂ ಎಎಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿತ್ತು. ಅದೇ ರೀತಿ ದೆಹಲಿಯಲ್ಲಿ ಎಲ್ಲ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...