ಝೀ ಸಂಸ್ಥೆಯ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸಲು ಸೆಬಿ ಸೂಚನೆ

Date:

ನಿರ್ವಹಣೆ, ಹೂಡಿಕೆದಾರರು ಮತ್ತು ಇತರ ಮಧ್ಯಸ್ಥಿಕೆದಾರರನ್ನು ರಕ್ಷಿಸಲು ಬಂಡವಾಳ ತಿರುವು ಪ್ರಕರಣದಲ್ಲಿ ಭಾಗಿಯಾಗಿರುವ ಝೀ ಸಂಸ್ಥೆಯ ಮುಖ್ಯಸ್ಥ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸುವಂತೆ ಮಾರುಕಟ್ಟೆ ನಿಯಂತ್ರಕ ಸೆಬಿ, ಷೇರು ಭದ್ರತೆಗಳು ಹಾಗೂ ಮೇಲ್ಮನವಿ ಮಂಡಳಿ (ಎಸ್‌ಎಟಿ)ಗೆ ನೀಡಿದ ಉತ್ತರದಲ್ಲಿ ತಿಳಿಸಿದೆ.

ಝೀ ಸಂಸ್ಥೆಯ ಅಧ್ಯಕ್ಷ ಸುಭಾಷ್ ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುಭಾಷ್ ಚಂದ್ರ ಅವರ ಪುತ್ರ ಪುನಿತ್ ಗೋಯೆಂಕಾ ಅವರ ಅರ್ಜಿಗಳನ್ನು ವಿಲೇವಾರಿ ಮಾಡಿದ ಸೆಬಿ ತನ್ನ ಅಫಿಡವಿಟ್‌ನಲ್ಲಿ ಎಸ್‌ಎಟಿಗೆ ಉತ್ತರ ನೀಡಿದೆ.

ಜುಲೈ 6, 2022 ರಂದು ಸಲ್ಲಿಸಿದ ಶೋಕಾಸ್ ನೋಟಿಸ್‌ನಲ್ಲಿ ಯಾವುದೇ ತುರ್ತು ಕ್ರಮ ಇರಲಿಲ್ಲ ಎಂಬ ವಿಷಯವು ಸಂಪೂರ್ಣ ತಪ್ಪು ಮತ್ತು ತಪ್ಪುದಾರಿಗೆಳೆಯುವಂತಿದೆ. ನಿಯಮ ಉಲ್ಲಂಘನೆ ಮಾತ್ರವಲ್ಲದೆ ಅನೇಕ ಸುಳ್ಳು ಮಾಹಿತಿ ಮತ್ತು ತಪ್ಪುಗಳನ್ನು ಮುಚ್ಚಿಹಾಕಲು ಝೀ ಸಂಸ್ಥೆಯು ಅನೇಕ ಹೇಳಿಕೆಗಳನ್ನು ನೀಡಿದೆ” ಎಂದು ಸೆಬಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೀತಾ ಪ್ರೆಸ್‍ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡುವುದು ಗೋಡ್ಸೆ, ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ: ಕಾಂಗ್ರೆಸ್ ಟೀಕೆ

ತಕ್ಷಣಕ್ಕೆ, ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರು ಅನೇಕ ವಿಭಿನ್ನ ಯೋಜನೆಗಳು ಮತ್ತು ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದು, ಈ ಮೂಲಕ ಪಟ್ಟಿ ಮಾಡಲಾದ ಕಂಪನಿಗಳಿಗೆ ಸಾರ್ವಜನಿಕ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ ಎಂದು ಸೆಬಿ ಹೇಳಿದೆ.

ಅವರು ವಿವಿಧ ಯೋಜನೆಗಳು ಮತ್ತು ವಹಿವಾಟುಗಳಲ್ಲಿ ಭಾಗಿಯಾಗಿರುವ ಎಲ್ಲ ಮಾಹಿತಿ ನಮಗೆ ಲಭ್ಯವಾಗಿದೆ. ಈ ಮೂಲಕ ಪಟ್ಟಿ ಮಾಡಿದ ಕಂಪನಿಗಳಿಗೆ ಸೇರಿದ ಅಪಾರ ಪ್ರಮಾಣದ ಸಾರ್ವಜನಿಕ ಹಣವನ್ನು ಈ ವ್ಯಕ್ತಿಗಳ ಒಡೆತನದ ಮತ್ತು ಅವರ ನಿಯಂತ್ರಣದ ಖಾಸಗಿ ಘಟಕಗಳಿಗೆ ತಿರುಗಿಸಲಾಗಿದೆ ಎಂದು ಸೆಬಿ ಎಸ್‌ಎಟಿಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಜೂನ್ 15 ರಂದು, ಸೆಬಿಯ ಸಲ್ಲಿಕೆಗೆ ಜೂನ್ 19 ರಂದು ಅಥವಾ ಅದಕ್ಕೂ ಮೊದಲು ಪ್ರತಿಕ್ರಿಯಿಸುವಂತೆ ಎಸ್‌ಎಟಿ ಅವರಿಗೆ ನಿರ್ದೇಶಿಸಿತ್ತು. ನ್ಯಾಯಮಂಡಳಿಯು ಅಂತಿಮ ವಿಲೇವಾರಿಗೆ ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತದೆ. ಎಸ್ಸೆಲ್ ಗ್ರೂಪ್ ಅಧ್ಯಕ್ಷ ಸುಭಾಷ್ ಚಂದ್ರ ಮತ್ತು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಎಂಡಿ ಮತ್ತು ಸಿಇಒ ಪುನಿತ್ ಗೋಯೆಂಕಾ ಅವರು ಸೆಬಿ ಆದೇಶಕ್ಕೆ ತಡೆ ಕೋರಿ ಎಸ್‌ಎಟಿಗೆ ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...