ಅದಾನಿ ಸಮೂಹ ವಹಿವಾಟಿನಲ್ಲಿ ನಿಯಮಗಳ ಉಲ್ಲಂಘನೆ; ಸೆಬಿ ತನಿಖೆ

Date:

  • ಅದಾನಿ ಸಮೂಹ ಕುರಿತು ಸುಪ್ರೀಂ ಕೋರ್ಟ್‌ ಸೆಬಿ ತನಿಖೆಗೆ ಸೂಚನೆ
  • ಅದಾನಿ ಕಂಪನಿಯ ಷೇರು ವ್ಯವಹಾರದ ಬಗ್ಗೆ ಹಿಂಡನ್‌ಬರ್ಗ್‌ ವರದಿ

ಅದಾನಿ ಸಮೂಹ ಕಂಪನಿಯು ತನ್ನ ಕನಿಷ್ಠ ಮೂರು ವಿದೇಶಿ ಕಂಪನಿಗಳಲ್ಲಿ ನಡೆಸಿದ ವಹಿವಾಟಿನ ನಿಯಮಗಳ ಉಲ್ಲಂಘನೆ ಸಾಧ್ಯತೆಯ ಬಗ್ಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ತನಿಖೆ ನಡೆಸುತ್ತಿದೆ ಎಂದು ಶನಿವಾರ (ಏಪ್ರಿಲ್‌ 1) ವರದಿಯಾಗಿದೆ.

ಕಳೆದ 13 ವರ್ಷಗಳಲ್ಲಿ ಉದ್ಯಮಿ ಗೌತಮ್‌ ಅದಾನಿ ಸ್ಥಾಪಿಸಿರುವ ಬಂದರಿನಿಂದ ಆರಂಭಿಸಿ ವಿದ್ಯುತ್ ಘಟಕಗಳೂ ಸೇರಿರುವ ಉದ್ಯಮ ಸಮೂಹವು ಶೆಲ್ ಕಂಪನಿಗಳ ಜೊತೆಗೆ ವಿದೇಶಿ ಹೂಡಿಕೆಯ ವಹಿವಾಟು ನಡೆಸಿವೆ ಎಂದು ಹೂಡಿಕೆದಾರರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಅದಾನಿ ಸಮೂಹ ಮಾಲೀಕ ಗೌತಮ್‌ ಅದಾನಿ ಸಹೋದರ ವಿನೋದ್‌ ಅದಾನಿ ವಿದೇಶಿ ಶೆಲ್ ಕಂಪನಿಗಳ ಒಡೆತನದ ಲಾಭ, ನಿರ್ದೇಶಕ ಅಥವಾ ಇತರ ಸಂಪರ್ಕ ಹೊಂದಿದ್ದಾರೆ. ಈ ಶೆಲ್ ಕಂಪನಿಗಳಿಗೆ ಸಂಬಂಧಿತ ಪಾರದರ್ಶಕ ವಹಿವಾಟು ನಿಯಮಗಳನ್ನು ಉಲ್ಲಂಘಿಸಿರುವ ಸಾಧ್ಯತೆ ಬಗ್ಗೆ ಮಾರುಕಟ್ಟೆ ನಿಯಂತ್ರಕ, ಭದ್ರತೆ ಮತ್ತು ಸೆಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದೇಶಿ ಶೆಲ್ ಕಂಪನಿಗಳ ನೇರ ಸಂಬಂಧಿಗಳು, ಪ್ರಾಯೋಜಕ ಸಮೂಹಗಳು ಹಾಗೂ ಉಪ ಸಹಭಾಗಿ ಕಂಪನಿಗಳನ್ನು ಭಾರತೀಯ ಕಾನೂನಿನಡಿ ಅವುಗಳ ಸಹಭಾಗಿಗಳೆಂದು ಪರಿಗಣಿಸಲಾಗುತ್ತದೆ.

ಷೇರುಪಟ್ಟಿಯಲ್ಲಿರುವ ಕಂಪನಿಗಳಲ್ಲಿ ಅತಿದೊಡ್ಡ ಪ್ರಮಾಣದ ಷೇರುಗಳನ್ನು ಹೊಂದಿರುವ ಮತ್ತು ಕಂಪನಿಗಳ ನೀತಿಯ ಮೇಲೆ ಪ್ರಭಾವ ಬೀರುವ ಕಂಪನಿ ಎಂದು ಪ್ರಾಯೋಜಕ ಸಮೂಹವನ್ನು ವ್ಯಾಖ್ಯಾನಿಸಲಾಗಿದೆ.

ಅಂತಹ ಘಟಕಗಳ ನಡುವಿನ ವಹಿವಾಟುಗಳ ಬಗ್ಗೆ ನಿಯಂತ್ರಕ ಸಂಸ್ಥೆಗಳಿಗೆ ವಿವರ ನೀಡಬೇಕು ಮತ್ತು ಸಾರ್ವಜನಿಕವಾಗಿ ವರದಿ ಸಲ್ಲಿಸುವ ಮೂಲಕ ಮಾಹಿತಿ ಬಹಿರಂಗಪಡಿಸಬೇಕು. ನಿಗದಿತ ಮಿತಿಗಿಂತ ಹೆಚ್ಚಿನ ವಹಿವಾಟಿಗೆ ಷೇರುದಾರರ ಅನುಮೋದನೆಯ ಅಗತ್ಯವಿರುತ್ತದೆ. ವಹಿವಾಟಿನಲ್ಲಿ ನಿಯಮಗಳ ಉಲ್ಲಂಘನೆ ಕಂಡು ಬಂದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ತನಿಖೆಯ ವಿವರ ನೀಡಲು ಸೆಬಿ ನಿರಾಕರಿಸಿದೆ. ಅದಾನಿ ಸಮೂಹ ಕಂಪನಿಯ ವಿದೇಶಿ ಶೆಲ್ ಕಂಪನಿಗಳ ತನಿಖೆಯ ವಿವರ ನೀಡುವಂತೆ ಮಾಧ್ಯಮಗಳ ಬೇಡಿಕೆಯನ್ನು ಬುಧವಾರದ ಪತ್ರಿಕಾಗೋಷ್ಠಿಯಲ್ಲಿ ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ತಿರಸ್ಕರಿಸಿದ್ದಾರೆ.

ವಿನೋದ್‌ ಅದಾನಿ ಅವರು ಅದಾನಿ ಕುಟುಂಬದ ಸದಸ್ಯರಾಗಿದ್ದಾರೆ. ಅಲ್ಲದೆ ಅವರು ಪ್ರಾಯೋಜಕ ಸಮೂಹದ ಭಾಗವಾಗಿದ್ದಾರೆ. ಆದರೆ ವಿನೋದ್‌ ಅವರು ಷೇರುಪಟ್ಟಿಯಲ್ಲಿರುವ ಯಾವುದೇ ಅದಾನಿ ಕಂಪನಿ ಅಥವಾ ಅವುಗಳ ಅಂಗಸಂಸ್ಥೆಗಳಲ್ಲಿ ಭಾಗಿಯಾಗಿಲ್ಲ ಎಂದು ಸೆಬಿ ವಕ್ತಾರರೊಬ್ಬರು ಹೇಳಿದ್ದಾರೆ.

ಅದಾನಿ ಕಂಪನಿಯ ವ್ಯವಹಾರದಲ್ಲಿಯ ಲೋಪದೋಷಗಳ ಕುರಿತು ಅಮೆರಿಕದ ಹಿಂಡನ್‌ಬರ್ಗ್‌ ಸಂಶೋಧನಾ ವರದಿ ಪ್ರಕಟವಾದ ನಂತರ ಸೆಬಿ ತನಿಖೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

ಅದಾನಿ ಕಂಪನಿ ಷೇರುಗಳ ಮೌಲ್ಯದಲ್ಲಿ ಭಾರೀ ಪ್ರಮಾಣದ ಅವ್ಯವಹಾರವಾಗಿದೆ ಎಂದು ವರದಿ ಹೇಳಿದೆ. ಇದು ಇತ್ತೀಚೆಗೆ ನಡೆದ ಸಂಸತ್ತು ಬಜೆಟ್‌ ಅಧಿವೇಶನದ ಮೊದಲೆರಡು ಅವಧಿಯಲ್ಲಿ ಪ್ರತಿಪಕ್ಷಗಳ ಗದ್ದಲಕ್ಕೆ ಕಾರಣವಾಯಿತು.

ಸಾರ್ವಜನಿಕ ಷೇರು ಹೂಡಿಕೆ, ನಿಯಂತ್ರಕರಿಗೆ ವಿವರ ಬಹಿರಂಗಪಡಿಸುವಲ್ಲಿ ಆಗಿರುವ ಲೋಪದೋಷಗಳಿಗಾಗಿ ಅದಾನಿ ಸಮೂಹ ವಿರುದ್ಧ ತನಿಖೆ ಮಾಡಲು ಕಳೆದ ಮಾರ್ಚ್‌ನಲ್ಲಿ ಸುಪ್ರೀಂಕೋರ್ಟ್‌ ಸೆಬಿಗೆ ನಿರ್ದೇಶನ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...