ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

Date:

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು ಹತ್ತಿ 20 ಮೀಟರ್ ಎತ್ತರದ ಗೋಡೆಯನ್ನು ಹತ್ತಿ ಸಂಸತ್ತಿನೊಳಗೆ ಪ್ರವೇಶಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 6:30ರ ಆಸುಪಾಸಿನಲ್ಲಿ ಈ ಘಟನೆ ನಡೆದಿದೆ.

ಗೋಡೆ ಹತ್ತಿ ಆವರಣ ಪ್ರವೇಶಿಸಿದ ವ್ಯಕ್ತಿಯನ್ನು ರಾಮ (20) ಎಂದು ಗುರುತಿಸಲಾಗಿದೆ. ಈತ ರೈಲು ಭವನದ ಕಡೆಯಿಂದ ಗೋಡೆ ಹಾರಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ತಲುಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗರುಡ ಗೇಟ್ ಗೋಡೆಯಿಂದ ಸುಮಾರು 15 ಮೀಟರ್ ದೂರದಲ್ಲಿದೆ.

ಇದನ್ನು ಓದಿದ್ದೀರಾ? ಹೊಸ ಸಂಸತ್ ಭವನ ಉದ್ಘಾಟನೆ | ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಒಳನುಗ್ಗಿದ ಯುವಕನನ್ನು ಭದ್ರತಾ ಸಿಬ್ಬಂದಿ ಹಿಡಿದಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುವಕ ಮಾನಸಿಕ ಅಸ್ವಸ್ಥ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

“ಇಂದು ಸಿಐಎಸ್ಎಫ್ ಮತ್ತು ದೆಹಲಿ ಪೊಲೀಸ್ ಸಿಬ್ಬಂದಿ ಸಂಸತ್ತಿನ ಗಡಿ ಗೋಡೆಯ ಬಳಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತ ಒಳ ಹೋಗಲು ಪ್ರಯತ್ನಿಸುತ್ತಿದ್ದ. ಯುವಕ ಉತ್ತರ ಪ್ರದೇಶ ರಾಮ ಎಂದು ಗುರುತಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ 20ರ ಯುವಕನೋರ್ವ ಸಂಸತ್ತಿನ ಗೋಡೆಯನ್ನು ಹತ್ತಿ ಅನೆಕ್ಸ್ ಕಟ್ಟಡದ ಆವರಣದೊಳಗೆ ಹಾರಿದ್ದ. ಘಟನೆಯ ವಿಡಿಯೋ ಕೂಡಾ ಕಾಣಿಸಿಕೊಂಡಿತ್ತು. ಶೋಧದ ಸಮಯದಲ್ಲಿ ಆ ವ್ಯಕ್ತಿ ಯಾವುದೇ ಅಪರಾಧ ಹಿನ್ನೆಲೆ ಹೊಂದಿರುವುದು ಕಂಡುಬಂದಿರಲಿಲ್ಲ.

ಇನ್ನು 2023ರಲ್ಲಿ 2001ರ ಸಂಸತ್ತಿನ ಭಯೋತ್ಪಾದಕ ದಾಳಿಯ ದಿನದಂದೇ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭಾ ಸ್ಥಳಕ್ಕೆ ಹಾರಿದ್ದರು. ಹಳದಿ ಹೊಗೆ ಸೂಸುತ್ತಿದ್ದ ಡಬ್ಬಿ ಹಿಡಿದು ಕೆಲವು ಸಂಸದರು ಅವರನ್ನು ಹತ್ತಿಕ್ಕುವ ಮೊದಲು ಘೋಷಣೆಗಳನ್ನು ಕೂಗಿದ್ದರು.

ಅದೇ ಸಮಯದಲ್ಲಿ, ಇತರ ಇಬ್ಬರು ಆರೋಪಿಗಳಾದ ಅಮೋಲ್ ಶಿಂಧೆ ಮತ್ತು ನೀಲಮ್ ಆಜಾದ್ ಸಂಸತ್ತಿನ ಆವರಣದ ಹೊರಗೆ ಸರ್ವಾಧಿಕಾರದ ವಿರುದ್ಧ ಧಿಕ್ಕಾರ ಕೂಗಿ ಡಬ್ಬಿಯಿಂದ ಹಳದಿ ಹೊಗೆ ಹೊರಬಿಟ್ಟಿದ್ದರು. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಮಹೇಶ್ ಕುಮಾವತ್ ಮತ್ತು ಲಲಿತ್ ಝಾ ಎಂಬ ಇನ್ನಿಬ್ಬರನ್ನೂ ಬಂಧಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...