ಸುದ್ದಿ ವಾಹಿನಿಗಳ ಸ್ವಯಂ ನಿಯಂತ್ರಣವನ್ನು ಬಿಗಿಗೊಳಿಸಬೇಕು: ಸುಪ್ರೀಂ ಕೋರ್ಟ್‌

Date:

ಟಿವಿ ಸುದ್ದಿ ವಾಹಿನಿಗಳ ಸ್ವಯಂ-ನಿಯಂತ್ರಣ ಮತ್ತು ಮೇಲ್ವಿಚಾರಣೆಯ ಕಾರ್ಯವಿಧಾನವನ್ನು ಮತ್ತಷ್ಟು ‘ಬಿಗಿಗೊಳಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅದಕ್ಕಾಗಿ, ಹೊಸ ಮಾರ್ಗಸೂಚಿಗಳನ್ನು ಸಿದ್ದಪಡಿಸಲು ನ್ಯೂಸ್ ಬ್ರಾಡ್‌ಕಾಸ್ಟರ್‌ ಅಂಡ್ ಡಿಜಿಟಲ್ ಅಸೋಸಿಯೇಷನ್‌ಗೆ (ಎನ್‌ಬಿಡಿಎ) ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಟಿವಿ ಚಾನೆಲ್‌ಗಳ ಸ್ವಯಂ ನಿಯಂತ್ರಣದ ಕುರಿತು ಅವಲೋಕನ ಮಾಡಬೇಕೆಂದು ಮಹಾರಾಷ್ಟ್ರ ಬಾಂಬೆ ಹೈಕೋರ್ಟ್‌ ಹೇಳಿತ್ತು. ಆ ಆದೇಶದ ವಿರುದ್ಧ ಎನ್‌ಬಿಡಿಎ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ, ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಎನ್‌ಬಿಡಿಎ ತನ್ನ ಮಾಜಿ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿಗಳಾದ ಎ.ಕೆ ಸಿಕ್ರಿ ಮತ್ತು ಆರ್.ವಿ ರವೀಂದ್ರನ್ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂಬ ಎನ್‌ಬಿಡಿಎ ಹೇಳಿಕೆಯನ್ನು ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕೆ ಸಿಕ್ರಿ ಮತ್ತು ಆರ್‌ವಿ ರವೀಂದ್ರನ್ ಅವರೊಂದಿಗೆ ಎನ್‌ಬಿಡಿಎ ನಡೆಸಿದ ಸಭೆಗಳ ಬಗ್ಗೆ ಎನ್‌ಬಿಡಿಎ ಪರ ವಾದ ಮಂಡಿಸಿದ ವಕೀಲ ಅರವಿಂದ್ ದಾತರ್, “ಸಂಪೂರ್ಣ ಮಾರ್ಗಸೂಚಿಗಳನ್ನು ಮರುಪರಿಶೀಲಿಸಲಾಗುತ್ತಿದೆ” ಎಂದು ಹೇಳಿದರು.

ನಿಯಮಗಳ ಅಡಿಯಲ್ಲಿ ನೋಂದಾಯಿಸಲು ಎನ್‌ಬಿಡಿಎ ವಿಫಲವಾದ ಬಗ್ಗೆ ಕೇಂದ್ರವು ನ್ಯಾಯಾಲಯದಲ್ಲಿ ಗಮನಸೆಳೆದಿತ್ತು. ಹೀಗಾಗಿ, ನ್ಯೂಸ್ ಬ್ರಾಡ್‌ಕಾಸ್ಟರ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಬಿಎಫ್‌ಐ) ಪರವಾಗಿ ಹಾಜರಾದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, “2022ರ ನಿಯಮಗಳ ಪ್ರಕಾರ ಕೇಂದ್ರದಲ್ಲಿ ನೋಂದಾಯಿಸಲಾದ ಏಕೈಕ ನಿಯಂತ್ರಣ ಸಂಸ್ಥೆ ಎನ್‌ಬಿಡಿಎ” ಎಂದು ಹೇಳಿದರು.

ವಾದವನ್ನು ಆಲಿಸಿದ ನ್ಯಾಯಾಲಯ, ಪೂರ್ಣ ಪ್ರಮಾಣದ ಹೊಸ ಮಾರ್ಗಸೂಚಿಗಳನ್ನು ರಚಿಸಲು ನಾಲ್ಕು ವಾರಗಳ ಅವಕಾಶ ನೀಡಿದ್ದು, ವಿಚಾರಣೆಯಲ್ಲಿ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...