ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಆರೋಪಿ ತಂದೆ ಬಂಧನ; ಶ್ರೀಮಂತರಿಗಷ್ಟೆ ನ್ಯಾಯ ಎಂದ ಸಂತ್ರಸ್ತೆಯ ಪತಿ

Date:

ಮುಂಬೈ ನ ವರ್ಲಿಯಲ್ಲಿ ನಿನ್ನೆ(ಜುಲೈ 7) ಬೆಳಗ್ಗೆ ಬಿಎಂಡಬ್ಲ್ಯು ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದ ಮೇಲೆ ಆರೋಪಿ 24 ವರ್ಷದ ಮಿಹಿರ್ ಷಾ ಅವರ ತಂದೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಹಿರಿಯ ನಾಯಕ ರಾಜೇಶ್ ಶಾ ಮತ್ತು ಅವರ ಚಾಲಕ ರಾಜೇಂದ್ರ ಸಿಂಗ್ ಬಿಜಾವತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವೇಳೆ ಮಿಹಿರ್‌ ಶಾ ಪಾನಮತ್ತನಾಗಿ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ರಕ್ತ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಇಂದು ರಾಜೇಶ್ ಶಾ ಮತ್ತು ಅವರ ಚಾಲಕ ರಾಜೇಂದ್ರ ಸಿಂಗ್ ಬಿಜಾವತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನೂತನ ಅಪರಾಧ ಸಂಹಿತೆ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಕೊಲೆಗೆ ಸಮನಾದ ಅಪರಾಧಿ ನರಹತ್ಯೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ದುಡುಕಿನ ಚಾಲನೆ ಮತ್ತು ಸಾಕ್ಷ್ಯ ನಾಶಪಡಿಸುವಿಕೆ ಹಾಗೂ ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳನ್ನು ಸಹ ಪ್ರಕರಣದಲ್ಲಿ ಅನ್ವಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಪೊಲೀಸ್ ಮೂಲಗಳ ಪ್ರಕಾರ, ಅಪಘಾತದ ಸಮಯದಲ್ಲಿ, ಶಿವಸೇನಾ ನಾಯಕನ ಪುತ್ರ ಮತ್ತು ಅವರ ಚಾಲಕ ಐಷಾರಾಮಿ ಕಾರಿನಲ್ಲಿದ್ದರು. ಮಿಹಿರ್ ಶಾ ನಿನ್ನೆ ರಾತ್ರಿ ಜುಹುವಿನ ಬಾರ್‌ನಲ್ಲಿ ಮದ್ಯ ಸೇವಿಸಿದ್ದಾರೆ. ಮನೆಗೆ ಹೋಗುವಾಗ, ಆತ ತಾನು ಕಾರು ಚಲಾಯಿಸುವುದಾಗಿ ಚಾಲಕನಿಗೆ ಹೇಳಿದ್ದು, ವರ್ಲಿಯಲ್ಲಿ ಹೋಗುತ್ತಿದ್ದಾಗ ಅದೇ ಮಾರ್ಗದಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವರ್ಲಿಯ ಕೋಳಿವಾಡ ಪ್ರದೇಶದ ನಿವಾಸಿಗಳಾದ ಕಾವೇರಿ ನಕ್ವಾ ಮತ್ತು ಅವರ ಪತಿ ಪ್ರದಿಕ್ ನಕ್ವಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಕಾವೇರಿ ನಕ್ವಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಮಗೆ ನ್ಯಾಯ ಸಿಗುವುದಿಲ್ಲ ಎಂದ ಸಂತ್ರಸ್ತೆಯ ಪತಿ

ಅಪಘಾತದ ನಂತರ ಮಾಧ್ಯಮಗಳ ಜೊತೆ ನೋವಿನಿಂದ ಮಾತನಾಡಿರುವ ಸಂತ್ರಸ್ತೆ ಕಾವೇರಿ ನಕ್ವಾ  ಅವರ ಪತಿ ಪ್ರದಿಕ್ ನಕ್ವಾ, ರಸ್ತೆ ಅಪಘಾತದಲ್ಲಿ ನನ್ನ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅವರು ದೊಡ್ಡವರು. ಅವರನ್ನು ಏನು ಮಾಡುವುದಕ್ಕೆ ಆಗುವುದಿಲ್ಲ. ನಮಗೆ ನ್ಯಾಯ ಸಿಗುವುದಿಲ್ಲ. ನಾವು ಮಾತ್ರ ತೊಂದರೆ ಅನುಭವಿಸಬೇಕು. ನನಗೆ ಇಬ್ಬರು ಮಕ್ಕಳಿದ್ದಾರೆ, ನಾನು ಈಗ ಏನು ಮಾಡಬೇಕು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...