ನಮ್ಮ ಜೀವನದ ಜೊತೆ ಆಟವಾಡುತ್ತಿರುವ ಶೆಟ್ಟಿಗಳು; ಹಲ್ಲೆ ನಡೆಸಿದ ಶಾಸಕನ ಮತ್ತೊಂದು ವಿವಾದಾತ್ಮಕ ಹೇಳಿಕೆ

Date:

ಆಹಾರ ಸರಿಯಿಲ್ಲವೆಂದು ಮುಂಬೈನಲ್ಲಿ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ದ ಏಕನಾಥ್‌ ಶಿಂಧೆ ಬಣದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಕರ್ನಾಟಕದ (ಶೆಟ್ಟಿ)ಬಂಟರ ಸಮುದಾಯದ ವಿರುದ್ಧ ಹೇಳಿಕೆ ನೀಡಿ ಮತ್ತೊಮ್ಮೆ ವಿವಾದ ಹುಟ್ಟು ಹಾಕಿದ್ದಾರೆ.

ಹಲ್ಲೆ ನಡೆಸಿದ ವಿಚಾರವಾಗಿ ಸುದ್ದಿಗಾರರ ಜೊತೆ ಮಾತನಾಡಿದ ಸಂಜಯ್ ಗಾಯಕ್ವಾಡ್, “ಈ ಶೆಟ್ಟಿಗಳು ಬಹಳ ಸಮಯದಿಂದ ನಮ್ಮ ಜೀವನದ ಜೊತೆ ಆಟವಾಡುತ್ತಿದ್ದಾರೆ. ಇಂದು ಅವರು ನನ್ನ ಜೀವದ ಜೊತೆ ಆಟವಾಡಲು ಪ್ರಯತ್ನಿಸಿದರು. ನನ್ನ ಆರೋಗ್ಯ ಸರಿಯಿಲ್ಲ, ಕಳೆದ 20 ವರ್ಷಗಳಿಂದ ನಾನು ಅದರ ಬಗ್ಗೆ ಚಿಂತೆ ಮಾಡುತ್ತಿದ್ದೇನೆ. ಸಣ್ಣದೊಂದು ತಪ್ಪು ಕೂಡ ನನಗೆ ಆರೋಗ್ಯಕ್ಕೆ ತೊಂದರೆಯುಂಟು ಮಾಡುತ್ತದೆ” ಎಂದು ಹೇಳಿದ್ದಾರೆ.

“ವಿರೋಧ ಪಕ್ಷಗಳು ಅವರ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ದಕ್ಷಿಣದ ಈ ಶೆಟ್ಟಿಗಳು ಮಹಾರಾಷ್ಟ್ರದ ಸಂಸ್ಕೃತಿಯನ್ನು ಅಪಖ್ಯಾತಿಗೊಳಿಸಿದ್ದಾರೆಂದು ಅವರಿಗೆ ತಿಳಿದಿಲ್ಲವೇ, ಅದು ಡ್ಯಾನ್ಸ್ ಬಾರ್‌ಗಳಾಗಲಿ ಅಥವಾ ಲೇಡೀಸ್ ಬಾರ್‌ಗಳಾಗಲಿ. ಈ ವಿಷಯಗಳು ಮಹಾರಾಷ್ಟ್ರದಲ್ಲಿ ಬಹಳ ಹಿಂದಿನಿಂದಲೂ ನಡೆಯುತ್ತಿವೆ. ಇವೆಲ್ಲವನ್ನು ಶೆಟ್ಟಿ ಸಮುದಾಯ ನಿರ್ವಹಿಸುತ್ತಿದೆ. ಶೆಟ್ಟಿ ಎಂದು ಹಣೆಯಲ್ಲಿ ಬರೆಯದಿದ್ದರೂ ಹೋಟೆಲ್‌ಗಳನ್ನೆಲ್ಲ ಅವರು ನೆಡೆಸುತ್ತಿದ್ದಾರೆ ” ಎಂದು ಕರ್ನಾಟಕ ಬಂಟರ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಂಟೀನ್ ಉದ್ಯೋಗಿ ಮರಾಠಿಯಾಗಿದ್ದರೆ ನೀವು ಅವರ ಮೇಲೆ ಹಲ್ಲೆ ನಡೆಸುತ್ತಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಗಾಯಕ್ವಾಡ್, “ಇದು ಮರಾಠಿಗಳ ಬಗ್ಗೆ ಪ್ರಶ್ನೆಯಲ್ಲ. ಮೊದಲನೆಯದಾಗಿ, ಮರಾಠಿಗಳು ಅಂತಹ ತಪ್ಪನ್ನು ಮಾಡುತ್ತಿರಲಿಲ್ಲ. ಮಹಾರಾಷ್ಟ್ರದ ಜನರು ಎಂದಿಗೂ ಡ್ಯಾನ್ಸ್ ಬಾರ್ ಅಥವಾ ಲೇಡೀಸ್ ಬಾರ್ ಅನ್ನು ನಡೆಸುತ್ತಿರಲಿಲ್ಲ, ಅವರು ಎಂದಿಗೂ ಅಂತಹ ಕೃತ್ಯಗಳನ್ನು ಮಾಡಿಲ್ಲ. ಹೊರಗಿನವರು ಮಾತ್ರ ಅಂತಹ ಕೃತ್ಯಗಳನ್ನು ಮಾಡುತ್ತಾರೆ. ಈ ಹಿಂದೆ ಬಾಳಾಸಾಹೇಬ್ ಕೂಡ ಇವುಗಳ ವಿರುದ್ಧ ಪ್ರತಿಭಟಿದ್ದರು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಚರ್ಚ್‌ಗೇಟ್‌ನಲ್ಲಿರುವ ಆಕಾಶವಾಣಿ ಶಾಸಕರ ಕ್ಯಾಂಟೀನ್‌ ಉದ್ಯೋಗಿ ಯೋಗೇಶ್ ಕುತ್ರನ್ ಅವರಿಗೆ ಬುಲ್ದಾನ ಕ್ಷೇತ್ರದ ಏಕ್‌ನಾಥ್‌ ಶಿಂಧೆ ಬಣದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಭಾರಿ ವಿವಾದಕ್ಕೆ ಕಾರಣವಾಯಿತು. ಗಾಯಕ್ವಾಡ್ ಮಂಗಳವಾರ ರಾತ್ರಿ ಕ್ಯಾಂಟೀನ್‌ನಿಂದ ಭೋಜನಕ್ಕೆ ಆರ್ಡರ್ ಮಾಡಿದ್ದರು. ಆದರೆ ಅವರ ಕೋಣೆಯಲ್ಲಿ ವಿತರಿಸಲಾದ ಬೇಳೆ ಮತ್ತು ಅಕ್ಕಿ ಹಳಸಿ ದುರ್ವಾಸನೆ ಬೀರುತ್ತಿರುವುದು ಕಂಡುಬಂದಿದೆ. ಇದರಿಂದ ಕೋಪಗೊಂಡ ಶಾಸಕರು ಕ್ಯಾಂಟೀನ್‌ಗೆ ನುಗ್ಗಿ ಉದ್ಯೋಗಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವಿಡಿಯೋ ರಾಜಕೀಯ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಶಾಸಕರೊಬ್ಬರ ಇಂತಹ ವರ್ತನೆ ಸದನದ ಗೌರವಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದರು.

“ನಾವು ಜನರ ಪ್ರತಿನಿಧಿಗಳು ಮತ್ತು ನಮಗೆ ಕೆಲವು ಜವಾಬ್ದಾರಿಗಳಿವೆ. ಗಾಯಕ್ವಾಡ್ ಅವರ ಕ್ರಮವನ್ನು ನಾನು ಖಂಡಿಸುತ್ತೇನೆ. ಯಾರನ್ನಾದರೂ ಕಪಾಳಮೋಕ್ಷ ಮಾಡುವುದು ತಪ್ಪು ಎಂದು ನಾನು ಅವರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಏಕನಾಥ್‌ ಶಿಂಧೆ ಹೇಳಿದ್ದರು. ಆದಾಗ್ಯೂ, ಗಾಯಕ್ವಾಡ್ ಅವರು ತಮ್ಮನ್ನು ತಾವು ಸಮರ್ಥಿಸಿಕೊಳ್ಳುವುದನ್ನು ಮುಂದುವರೆಸಿದ್ದಾರೆ.

ಸಂಜಯ್‌ ಗಾಯಕ್ವಾಡ್ ಅವರಿಗೆ ವಿವಾದಗಳಿಗೆ ಹೊಸದೇನಲ್ಲ . ಕಳೆದ ವರ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿ ವಿವಾದವನ್ನು ಹುಟ್ಟುಹಾಕಿದ್ದರು.
ಪೊಲೀಸ್‌ ಸಿಬ್ಬಂದಿ ಕೈಯಲ್ಲಿ ತಮ್ಮ ವಾಹನವನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ಕಳೆದ ವರ್ಷದ ಫೆಬ್ರವರಿಯಲ್ಲಿ, ಶಾಸಕರು 1987 ರಲ್ಲಿ ಹುಲಿಯನ್ನು ಬೇಟೆಯಾಡಿದ್ದಾಗಿ ಹೇಳಿಕೊಂಡು ಅದರ ಹಲ್ಲನ್ನು ಕುತ್ತಿಗೆಗೆ ಕಟ್ಟಿಕೊಂಡಿರುವುದಾಗಿ ಹೇಳಿಕೊಂಡಿದ್ದರು. ನಂತರ ಶಾಸಕರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...