ಕೇರಳ ಮಾಜಿ ಸಿಎಂ ಪುತ್ರ ಅನಿಲ್‌ ಆ್ಯಂಟನಿ ಬಿಜೆಪಿ ಸೇರ್ಪಡೆ; ತಪ್ಪು ನಿರ್ಧಾರವೆಂದ ತಂದೆ

Date:

  • ದೆಹಲಿ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸೇರಿದ ಅನಿಲ್‌ ಆ್ಯಂಟನಿ
  • ಪುತ್ರ ಅನಿಲ್‌ ಆ್ಯಂಟನಿ ನಿರ್ಧಾರ ತಪ್ಪು ಎಂದ ಕೇರಳದ ಮಾಜಿ ಸಿಎಂ

ಹಿರಿಯ ಕಾಂಗ್ರೆಸ್ ನಾಯಕ, ಕೇರಳ ಮಾಜಿ ಮುಖ್ಯಮಂತ್ರಿ ಎ ಕೆ ಆ್ಯಂಟನಿ ಅವರ ಪುತ್ರ ಅನಿಲ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್‌ ಅವರ ಸಮ್ಮುಖದಲ್ಲಿ ಅನಿಲ್‌ ಆ್ಯಂಟನಿ ಕಮಲ ಪಕ್ಷ ಸೇರಿದ್ದಾರೆ.

2002ರ ಗುಜರಾತ್‌ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರವಿರುವ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಕಾರಣ ಅನಿಲ್ ಆ್ಯಂಟನಿ ಪಕ್ಷದ ನಾಯಕರಿಂದ ಟೀಕೆಗೊಳಗಾಗಿದ್ದರು. ಈ ಹಿನ್ನಲೆಯಲ್ಲಿ ಅವರು ಜನವರಿಯಲ್ಲಿ ಕಾಂಗ್ರೆಸ್‌ ತ್ಯಜಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಿಲ್‌ ದೆಹಲಿಯ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರಾದ ಪಿಯೂಶ್ ಗೋಯಲ್, ವಿ ಮುರಳೀಧರನ್ ಹಾಗೂ ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಭಾಗಿಯಾಗಿದ್ದರು.

ತಪ್ಪು ನಿರ್ಧಾರವೆಂದ ಎ ಕೆ ಆ್ಯಂಟನಿ

ಪುತ್ರ ಅನಿಲ್‌ ಆ್ಯಂಟನಿ ಬಿಜೆಪಿ ಸೇರ್ಪಡೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಎ ಕೆ ಆ್ಯಂಟನಿ, “ಅನಿಲ್‌ನ ತಪ್ಪು ನಿರ್ಧಾರದಿಂದ ನನಗೆ ಬಹಳ ನೋವಾಗಿದೆ. ವಿವಿಧತೆಯಲ್ಲಿ ಏಕತೆ ಮತ್ತು ಧಾರ್ಮಿಕ ಸಾಮರಸ್ಯವು ಭಾರತದ ಪರಂಪರೆಯಾಗಿದೆ. 2014ರಲ್ಲಿ ಮೋದಿ ಸರ್ಕಾರ ಬಂದ ನಂತರ ವ್ಯವಸ್ಥಿತವಾಗಿ ಏಕತೆ ಮತ್ತು ಜಾತ್ಯಾತೀತ ತತ್ವವನ್ನು ಹಾಳುಮಾಡುತ್ತಿದ್ದಾರೆ. ಬಿಜೆಪಿಯು ಏಕರೂಪತೆಯ ಮೇಲೆ ನಂಬಿಕೆಯಿರಿಸಿದೆ. ಅವರು ದೇಶದ ಸಂವಿಧಾನ ಮೌಲ್ಯಗಳನ್ನು ಹಾಳುಮಾಡುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ತಾಜ್‌ಮಹಲ್‌ ಧ್ವಂಸಗೊಳಿಸಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿ ಶಾಸಕನ ಒತ್ತಾಯ

ಬಿಬಿಸಿ ಪ್ರಾಯೋಜಿತ ಚಾನಲ್‌ ಎಂದಿದ್ದ ಅನಿಲ್‌ ಆ್ಯಂಟನಿ

ಬಿಬಿಸಿಯು ಭಾರತದ ವಿರುದ್ಧ ಪೂರ್ವಾಗ್ರಹಗಳ ಇತಿಹಾಸ ಹೊಂದಿರುವ ಪ್ರಾಯೋಜಿತ ಚಾನಲ್ ಆಗಿದ್ದು, ದೇಶದ ಸಾರ್ವಭೌಮತೆಯನ್ನು ಹಾಳು ಮಾಡುತ್ತಿದೆ. ಭಾರತದ ಜನರು ಭಾರತೀಯ ಸಂಸ್ಥೆಗಳ ಮೇಲೆ ಬಿಬಿಸಿಯ ಅಭಿಪ್ರಾಯಗಳಿಗೆ ಆದ್ಯತೆ ನೀಡಿ ದೇಶವನ್ನು ದುರ್ಬಲಗೊಳಿಸುವುದು ಅಪಾಯಕಾರಿ ಎಂದುಅನಿಲ್ ಟ್ವೀಟ್ ಮಾಡಿದ್ದರು.

ಅನಿಲ್ ಹಲವು ಬಾರಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಲೇ ಬಂದಿದ್ದರು. 2024ರ ಸಾರ್ವತ್ರಿಕ ಚುನಾವಣೆ ಸಂದರ್ಭ, “ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಹಾಕಲು ದೇಶದ ಜನತೆಗೆ ಉತ್ತಮ ಅವಕಾಶ” ಎಂದು ಹೇಳಿದ್ದರು. ಇದಾದ ಬಳಿಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಬಹಿರಂಗವಾಗಿ ಬೆಂಬಲ ನೀಡಿದ್ದರು.

ವಾಹಿನಿಯೊಂದರ ಚರ್ಚೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹೇಳಿಕೆಯನ್ನು ಟೀಕಿಸಿದ್ದ ಅನಿಲ್ ಆ್ಯಂಟನಿ, “ಸ್ಮೃತಿ ಅವರು ಸ್ವತಃ ಪ್ರತಿಭೆಯಿಂದ ಮೇಲೆ ಬಂದ ಮಹಿಳಾ ನಾಯಕಿ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...