ಕೋಚಿಂಗ್ ಸೆಂಟರ್‌ಗಳ ಸೇವಾ ನ್ಯೂನತೆ; ಬಿಸಿ ಮುಟ್ಟಿಸಿದ NCH

Date:

ಕೋಚಿಂಗ್ ಸೆಂಟರ್ ತೆರೆದು ಅಭ್ಯರ್ಥಿಗಳಿಗೆ ಸರಿಯಾಗಿ ಸ್ಪಂದಿಸದೆ ಇರುವಂಥ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಬಿಸಿ ಮುಟ್ಟಿಸಿದೆ. ವಂಚನೆಗೆ ಒಳಗಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೊರೆ ಹೋದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ.

ಇತ್ತೀಚಿನ ದಿನಗಳಲ್ಲಿ ನಾಗರಿಕ ಸೇವೆ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (ಕೋಚಿಂಗ್ ಸೆಂಟರ್ ) ತೆರೆದು ಶುಲ್ಕ ಪಾವತಿಸಿಕೊಂಡು ಬಳಿಕ ಸೀಟ್ ಇಲ್ಲವೆಂದು ವಂಚಿಸುವುದು ಮತ್ತು ಸೂಕ್ತ, ಸಮರ್ಪಕ ಅಭ್ಯಾಸ ಪರಿಕರ, ತರಗತಿ ನೀಡದೇ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಲೇ ಇದ್ದವು.

ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಸೂಚನೆಯಂತೆ ಸಚಿವಾಲಯವು, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ(NCH) ಮೂಲಕ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ನೇರವಾಗಿ ದೂರು ಸಲ್ಲಿಸಲು ಅವಕಾಶ ಒದಗಿಸಿದೆ. ದೂರುಗಳಿಗೆ ತಕ್ಷಣವೇ ಪರಿಹಾರ ಸಹ ಕಲ್ಪಿಸಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

600ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಿದ NCH

ದೇಶದ ವಿವಿಧೆಡೆಯಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ NCH ಗೆ ದೂರು ಸಲ್ಲಿಸಿದ ನಾಗರಿಕ ಸೇವೆಗಳು, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಕಾರ್ಯಕ್ರಮಗಳ 600ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿದೆ. ಶಿಕ್ಷಣ ಸೇವೆಯಲ್ಲಿ ನ್ಯೂನತೆ ವೆಸಗಿದ ಕೋಚಿಂಗ್ ಸೆಂಟರ್ ಗಳಿಂದಲೇ ಒಟ್ಟು ₹1.56 ಕೋಟಿ ಪರಿಹಾರ ರೂಪದಲ್ಲಿ ಮರುಪಾವತಿ ಮಾಡಿಸಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ನಾಗರಿಕ ಸೇವೆಗಳು, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಕಾರ್ಯಕ್ರಮಗಳಿಗೆ ತರಬೇತಿ ಕೇಂದ್ರಗಳಲ್ಲಿ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ, ತರಬೇತಿ ಸಂಸ್ಥೆಗಳು ನಿಯಮಾನುಸಾರ ಮರುಪಾವತಿಗೆ ನಿರಾಕರಿಸುದ್ದವು. ಹೀಗಾಗಿ ಅಭ್ಯರ್ಥಿಗಳು ಅಂತಿಮವಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ ನ್ಯಾಯಕ್ಕೆ ಮೊರೆ ಹೋಗಿದ್ದರು. ಗ್ರಾಹಕ ಇಲಾಖೆ ಎಲ್ಲವನ್ನೂ ಕೂಲಂಕುಷ ರೀತಿಯಲ್ಲಿ ಪರಿಶೀಲಿಸಿ ಅಗತ್ಯ ಸೇವೆ ಪೂರೈಸದ, ತರಗತಿ ವಿಳಂಬ ಮತ್ತು ರದ್ದಾದ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ತ್ವರಿತ ನ್ಯಾಯ ಕಲ್ಪಿಸುವ ಮೂಲಕ ನೆರವಾಗಿದೆ.

ಕೋಚಿಂಗ್ ಸೆಂಟರ್ ಗಳಿಗೆ ನಿರ್ದೇಶನ

ತರಬೇತಿ ಕೇಂದ್ರಗಳು ಕೇವಲ ವ್ಯಾವಹಾರಿಕ ದೃಷ್ಟಿಯಿಂದ ನೋಡದೇ, ವಿದ್ಯಾರ್ಥಿ ಕೇಂದ್ರಿತ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಂದ ಮರುಪಾವತಿ ಹಕ್ಕುಗಳನ್ನು ನಿರಾಕರಿಸುವಂತಹ ವಂಚನೆಗೆ ಅಂತ್ಯ ಹಾಡಬೇಕು ಎಂದು ಗ್ರಾಹಕ ವ್ಯವಹಾರಗಳ ಇಲಾಖೆ (DoCA) ನಿರ್ದೇಶಿಸಿದೆ.

ಮರುಪಾವತಿ ನಿರಾಕರಿಸಿದರೆ ಸಹಿಸಲ್ಲ

ಎಲ್ಲ ತರಬೇತಿ ಕೇಂದ್ರಗಳು ವಿದ್ಯಾರ್ಥಿ ಕೇಂದ್ರಿತ ವಿಧಾನ ಅಳವಡಿಸಿಕೊಳ್ಳುವ ಜತೆಗೆ ವಿದ್ಯಾರ್ಥಿಗಳ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಸ್ಪಷ್ಟ, ಪಾರದರ್ಶಕ ಮರುಪಾವತಿ ನೀತಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಕಾನೂನುಬದ್ಧ ಮರುಪಾವತಿ ಹಕ್ಕುಗಳನ್ನು ನಿರಾಕರಿಸುವ ಇಂಥ ವಂಚನೆಯನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಶಿಕ್ಷಣ ಸಂಸ್ಥೆಗಳು ಗ್ರಾಹಕರ ಹಕ್ಕುಗಳನ್ನು ಎತ್ತಿ ಹಿಡಿಯಬೇಕು ಎಂದೂ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಿವಿಧ ರಾಜ್ಯಗಳಿಂದ ಬಂದ ದೂರುಗಳೇನು?

  • ನಿರಂತರ ಅಧ್ಯಯನಕ್ಕಾಗಿ ಹಾಸ್ಟೆಲ್ ಸೌಲಭ್ಯ ಪಡೆದಿದ್ದರೂ ಸರಿಯಾದ ಸೇವೆ ನೀಡುವಲ್ಲಿ ಬಹು ನ್ಯೂನತೆಗಳಿವೆ ಎಂದು ಚೆನ್ನೈ, ತಮಿಳುನಾಡು ಭಾಗದ ವಿದ್ಯಾರ್ಥಿಗಳು NCH ಮೊರೆ ಹೋಗಿದ್ದರು.
  • ಕೆಲವೇ ಸೀಟುಗಳು ಉಳಿದಿವೆ ಎಂದು ಮನೋವಿಜ್ಞಾನ ಕಾರ್ಯಾಗಾರಕ್ಕೆ ಸೆಳೆದ ಸಂಸ್ಥೆಯೊಂದು ಪಾವತಿ ಮಾಡಿದ ನಂತರ ಸೀಟು ನಿರಾಕರಿಸಿತು ಮತ್ತು ಶುಲ್ಕ ಮರುಪಾವತಿಗೂ ನಿರಾಕರಿಸಿದೆ ಎಂದು ರಾಜ್‌ಕೋಟ್, ಗುಜರಾತ್ ಅಭ್ಯರ್ಥಿಗಳು ಆರೋಪಿಸಿದ್ದರು.
  • JEE ಕೋರ್ಸ್ ಖರೀದಿಸಿದ್ದು, ಪಾವತಿಯ ಪುರಾವೆಯನ್ನು ಒದಗಿಸಿದರೂ ಸಂಸ್ಥೆ ಖರೀದಿಯನ್ನು ನಿರಾಕರಿಸಿತ್ತು. NCH ಮಧ್ಯಸ್ಥಿಕೆಯಿಂದ ಮರುಪಾವತಿ ಸುಲಭವಾಯಿತು ಎಂದಿವೆ ಜಮ್ಶೆಡ್ಪುರ, ಜಾರ್ಖಂಡ್.

ಹೀಗೆ ದೇಶದ ವಿವಿಧೆಡೆಯ ವೆಲ್ಲೂರು, ತಮಿಳುನಾಡು, ಕೋಟಾ, ರಾಜಸ್ಥಾನ, ಕೊರ್ಬಾ, ಛತ್ತೀಸ್‌ಗಢ, ಔರಂಗಾಬಾದ್ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಅನ್ಯಾಯಕ್ಕೆ ಒಳಗಾದವರು NCH ಮೊರೆ ಹೋಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...