ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

Date:

  • ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ಹೇಳಿಕೆ
  • ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಗುರುಗಳ ಉಲ್ಲೇಖ

ಜಗತ್ತಿನಾದ್ಯಂತ ಆಚರಿಸುವ ಗುಡ್‌ ಫ್ರೈಡೇ (ಶುಭ ಶುಕ್ರವಾರ) ದಿನವೇ ಕ್ರೈಸ್ತ್ರ ಮಿಷನರಿಗಳ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಗಂಭೀರ ಹೇಳಿಕೆ ನೀಡಿದ್ದಾರೆ. ಮಿಷನರಿಗಳಿಗಿಂತಲೂ ಹಿಂದೂ ಗುರುಗಳು ಹೆಚ್ಚಿನ ಸೇವೆ ನೀಡಿದ್ದಾರೆ ಎಂಬುದು ಅವರ ಅಭಿಪ್ರಾಯವಾಗಿದೆ.

ಆರ್‌ಎಸ್‌ಎಸ್ ವತಿಯಿಂದ ಜೈಪುರದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದಾರೆ.

“ದೇಶದ ಬುದ್ಧಿಜೀವಿಗಳು ಮಿಷನರಿಗಳನ್ನು ಅವುಗಳ ಸೇವೆಗಾಗಿ ಗುರುತಿಸುತ್ತಾರೆ. ಆದರೆ, ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಆಧ್ಯಾತ್ಮಿಕ ಗುರುಗಳು, ಮಿಷನರಿಗಳು ನೀಡಿರುವುದಕ್ಕಿಂತಲೂ ಹೆಚ್ಚಿನ ಸೇವೆ ನೀಡಿದ್ದಾರೆ” ಎಂದು ಮೋಹನ್‌ ಭಾಗವತ್ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚೆನ್ನೈನಲ್ಲಿ ಹಿಂದೂ ಸೇವಾ ಮೇಳ ಆಯೋಜಿಸಿದ್ದ ವೇಳೆ ಕನ್ನಡ, ತೆಲುಗು, ಮಲಯಾಳಂ, ತಮಿಳು ಭಾಷೆ ಮಾತನಾಡುವ ಪ್ರಾಂತ್ಯಗಳ ಹಿಂದೂ ಮುನಿಗಳು, ಆಚಾರ್ಯರು, ಸನ್ಯಾಸಿಗಳ ಸಮಾಜ ಸೇವೆ ಮಿಷನರಿಗಳಿಂತ ಹಲವು ಪಟ್ಟು ಹೆಚ್ಚಿದೆ ಎಂಬುದು ತಿಳಿದು ಬಂದಿದೆ” ಎಂದಿದ್ದಾರೆ.

“ಆದರೆ, ಅವರು ಹೆಚ್ಚು, ಇವರು ಹೆಚ್ಚು ಎಂದು ನಾನು ಯಾವುದೇ ಸ್ಪರ್ಧೆಯ ಬಗ್ಗೆ ಮಾತನಾಡುತ್ತಿಲ್ಲ. ಇದು ಸೇವೆಯ ಅಳತೆಗೋಲಾಗದು. ಸೇವೆ ಎಂಬುದು ಸೇವೆ. ಸೇವೆ ಯಾವುದೇ ಸ್ಪರ್ಧೆಯ ವಿಷಯವಲ್ಲ. ಸೇವೆ ಎಂಬುದು ಮನುಷ್ಯನ ನೈಸರ್ಗಿಕ ಭಾವನೆಯಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣದಲ್ಲಿ ಮೋದಿ : ಕಾರ್ಯಕ್ರಮದಿಂದ ದೂರ ಉಳಿದ ಕೆಸಿಆರ್‌

“ಸೇವೆಗಳ ಬಗ್ಗೆ ಮಾತನಾಡುವಾಗ, ಸಾಮಾನ್ಯ ಜನರು ಪ್ರಪಂಚದಾದ್ಯಂತ ಶಾಲೆಗಳು ಮತ್ತು ಅನೇಕ ಸಂಸ್ಥೆಗಳನ್ನು ನಡೆಸುವ ಮಿಷನರಿಗಳ ಹೆಸರನ್ನು ಉಲ್ಲೇಖಿಸುತ್ತಾರೆ. ಆದರೆ, ಹಿಂದೂ ಸಂತರು ಸಲ್ಲಿಸಿದ ಸೇವೆ ಕಡಿಮೆಯೇನಿಲ್ಲ” ಎಂದಿದ್ದಾರೆ.

“ಸೇವೆಗೆ ಯಾವುದೇ ಅಳತೆ ಇರಬಾರದು, ಇದು ಸ್ಪರ್ಧೆಯ ವಿಷಯವಲ್ಲ. ಇದು ಮನುಷ್ಯನ ಸಹಜ ಅಭಿವ್ಯಕ್ತಿಯಾಗಿದೆ. ಭಾರತವು ಬೆಳೆಯಬೇಕಾದರೆ ಭಾರತದ ಪ್ರತಿಯೊಬ್ಬ ವ್ಯಕ್ತಿಯೂ ನಗುಮೊಗದಿಂದ ಸೇವೆ ಸಲ್ಲಿಸಲು ತನ್ನನ್ನು ತಾನು ತೊಡಗಿಸಿಕೊಳ್ಳಬೇಕು” ಎಂದು ಸಲಹೆ ನೀಡಿದ್ದಾರೆ.

ಕ್ರೈಸ್ತರನ್ನು ಗುರಿಯಾಗಿಸಿ ಅವರ ಮೇಲೆ ಪದೇಪದೆ ದಾಳಿ ಮಾಡುವ ಸಂಘ ಪರಿವಾರವು, ಈಗ ಅವರ ಮಿಷನರಿಗಳ ವಿಷಯದ ಕುರಿತು ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಅಧಿಕಾರದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಜಗತ್ತಿನಾದ್ಯಂತ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಾರ್ವಜನಿಕ ಸೇವೆ ನೀಡುತ್ತಿರುವ ಕ್ರೈಸ್ತ ಮಿಷನರಿಗಳ ಸೇವೆಯ ಕುರಿತು ಭಾಗವತ್ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...