ರದ್ದಾದ ಖಾತೆಗಳಿಗೆ ತಡೆ ನೀಡುವ ಕಾಂಗ್ರೆಸ್ ಮನವಿ ನಿರಾಕರಿಸಿದ ಐಟಿ ಮೇಲ್ಮನವಿ ನ್ಯಾಯಮಂಡಳಿ

Date:

ಆದಾಯ ತೆರಿಗೆ ಇಲಾಖೆಯಿಂದ ರದ್ದುಗೊಳಿಸಲಾದ ತಮ್ಮ ಬ್ಯಾಂಕ್‌ ಖಾತೆಗಳಿಗೆ ತಡೆ ನೀಡಬೇಕೆಂದು ಸಲ್ಲಿಸಿದ ಕಾಂಗ್ರೆಸ್ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ವಜಾಗೊಳಿಸಿದೆ.

ಐಟಿ ಇಲಾಖೆ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 10 ದಿನಗಳ ಕಾಲ ಕಾಲಾವಕಾಶ ನೀಡಬೇಕೆಂದು ಕಾಂಗ್ರೆಸ್ ಮನವಿ ಮಾಡಿಕೊಂಡಿತ್ತು. ಆದಾಗ್ಯೂ ಪೀಠವು ತಮಗೆ ಅಧಿಕಾರವಿಲ್ಲವೆಂದು ಮನವಿಯನ್ನು ತಳ್ಳಿಹಾಕಿದೆ.

ಮೇಲ್ಮನವಿ ನ್ಯಾಯಮಂಡಳಿಯ ಆದೇಶದಿಂದ ಕಾಂಗ್ರೆಸ್ ಪಕ್ಷ 2018-19ರ ಮೌಲ್ಯಮಾಪನ ವರ್ಷದಲ್ಲಿಐಟಿ ಇಲಾಖೆ ಕೈಗೊಂಡಿರುವ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಕಟ್ಟಿಗೆ ಸಿಲುಕಿದೆ. 2018ರ ವರ್ಷದಲ್ಲಿ ಪಕ್ಷವು 103 ಕೋಟಿ ರೂ. ಐಟಿ ರಿಟರ್ನ್‌ ಸಲ್ಲಿಸಿತ್ತು. ಇದು ನಂತರದಲ್ಲಿ 105 ಕೋಟಿಗೆ ಪರಿಷ್ಕರಿಸಲಾಗಿತ್ತು. ಅನಂತರದಲ್ಲಿ ಬಡ್ಡಿ 130 ಕೋಟಿ  ರೂ. ಸೇರಿದಂತೆ 135 ಕೋಟಿ ರೂ.ಗೆ ಏರಿಕೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಬುಧವಾರ(ಮಾ.06) ಆದಾಯ ತೆರಿಗೆ ಇಲಾಖೆ ವಿರುದ್ಧ ಆದಾಯ ತೆರಿಗೆ ಮೇಲ್ಮನವಿ ಮಂಡಳಿಗೆ ವಿವಿಧ ಬ್ಯಾಂಕ್‌ಗಳಲ್ಲಿದ್ದ ತಮ್ಮ ಖಾತೆಯ 65 ಕೋಟಿ ಹಣವನ್ನು ವಾಪಸ್‌ ಪಡೆದಿರುವುದನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಮೇಲ್ಮನವಿ ಸಲ್ಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಫೆ.16ರಂದು ಕಾಂಗ್ರೆಸ್‌ನ ಮುಖ್ಯ ಕಚೇರಿಯ ಖಾತೆಗಳನ್ನು ರದ್ದುಗೊಳಿಸಲಾಗಿತ್ತು. ನಂತರದಲ್ಲಿ ಆದಾಯ ಇಲಾಖೆ ಮೇಲ್ಮನವಿ ನ್ಯಾಯಮಂಡಳಿಯು ಮುಂದಿನ ವಿಚಾರಣೆಯವರೆಗೂ ಬಾಕಿಯಿರುವ ಇತರ ಖಾತೆಗಳನ್ನು ನಿರ್ವಹಿಸಲು ಅನುಮತಿ ನೀಡಿತ್ತು.

“ನಾವು 100 ವರ್ಷದಿಂದ ನಿರಂತರವಾಗಿ ಐಟಿ ರಿಟರ್ನ್ಸ್‌ಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣೆಯಲ್ಲಿ ಪಾಲ್ಗೊಳ್ಳದಿರುವುದಕ್ಕಾಗಿ ಚುನಾವಣೆಗೂ ಮುನ್ನ ಈ ರೀತಿ ಮಾಡಲಾಗಿದೆ. ಇದರಿಂದ ನಮಗೆ ಉಸಿರು ಕಟ್ಟಿಸುವ ವಾತಾವರಣ ನಿರ್ಮಾಣವಾಗಿದೆ” ಎಂದು ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಕಾಂಗ್ರೆಸ್ ಪರವಾಗಿ ಹಾಜರಾಗಿದ್ದ ವಕೀಲರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ತೆರಿಗೆ ಇಲಾಖೆ ಮೇಲ್ಮನವಿ ನ್ಯಾಯಮಂಡಳಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿ ಮಾಡಿ ಪಕ್ಷವು ಸುಳ್ಳು ಸುದ್ದಿ ಹರಡುತ್ತಿದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...