ಲೈಂಗಿಕ ಕಿರುಕುಳ ಪ್ರಕರಣ | ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋದ ನಿರ್ಮಾಪಕ ರಂಜಿತ್

Date:

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಯಾಳಂ ಚಲನಚಿತ್ರ ನಿರ್ಮಾಪಕ ಮತ್ತು ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ರಂಜಿತ್ ವಿರುದ್ಧ ಬಂಗಾಳಿ ನಟಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ರಂಜಿತ್ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋಗಿದ್ದಾರೆ.

ನಟಿ ನೀಡಿರುವ ದೂರಿನ ಆಧಾರದ ಮೇಲೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸರು ಐಪಿಸಿಯ ಸೆಕ್ಷನ್ 354 ರ ಅಡಿಯಲ್ಲಿ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿ ರಂಜಿತ್ 2009ರಲ್ಲಿ ಸಿನಿಮಾ ಬಗ್ಗೆ ಚರ್ಚಿಸಲು ನಟಿಯನ್ನು ತನ್ನ ಫ್ಲಾಟ್‌ಗೆ ಕರೆಸಿದ್ದರು. ಈ ವೇಳೆ, ನಟಿಯೊಂದಿಗೆ ರಂಜಿತ್ ಅನುಚಿತವಾಗಿ ವರ್ತಿಸಿದ್ದಾರೆ. ಅಸಭ್ಯವಾಗಿ ಆಕೆಯ ಕೈಯನ್ನು ಹಿಡಿದಿದ್ದರು. ಲೈಂಗಿಕ ಉದ್ದೇಶದಿಂದ ಆಕೆಯ ದೇಹದ ಇತರ ಭಾಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದರು.

ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿರುವ ರಂಜಿತ್ ಹೈಕೋರ್ಟ್‌ ಮೊರೆಹೋಗಿದ್ದಾರೆ. ದೌರ್ಜನ್ಯ ನಡೆದಿದೆ ಎನ್ನಲಾದ 15 ವರ್ಷಗಳ ಬಳಿಕ ನಟಿ ದೂರು ದಾಖಲಿಸಿರುವ ಬಗ್ಗೆ ಅವರು ಪಶ್ನಿಸಿದ್ದಾರೆ.

ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ತನ್ನನ್ನು ತೆಗೆದುಹಾಕಬೇಕೆಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಯಸಿವೆ. ಅಲ್ಲದೆ, ಆ ಚಿತ್ರದಲ್ಲಿ ನಟಿಸಲು ಆಯ್ಕೆಯಾಗದ ನಿರಾಶೆಯಿಂದ ನಟಿ ದೂರು ನೀಡಿದ್ದಾರೆ ಎಂದು ರಂಜಿತ್ ಪ್ರತ್ಯಾರೋಪ ಮಾಡಿದ್ದಾರೆ.

ಸಿನಿಮಾ ಬಗ್ಗೆ ಚರ್ಚಿಸುವ ವೇಳೆ ನಟಿಯೊಂದಿಗೆ ಸಹ ನಿರ್ದೇಶಕರಾದ ಶಂಕರ್ ರಾಮಕೃಷ್ಣನ್ ಮತ್ತು ಗಿರೀಶ್ ದಾಮೋದರನ್ ಹಾಗೂ ನಿರ್ಮಾಪಕ ಸುಬೈರ್ ಮತ್ತು ಕಚೇರಿ ಸಹಾಯಕ ಬಿಜು ಸೇರಿದಂತೆ ಇತರರು ಫ್ಲಾಟ್‌ನಲ್ಲಿದ್ದರು. ಸಿನಿಮಾ ಬಗ್ಗೆ ಶಂಕರ್ ರಾಮಕೃಷ್ಣನ್ ಅವರೊಂದಿಗೂ ಚರ್ಚೆ ನಡೆದಿತ್ತು. ಆದರೆ, ದೂರಿನಲ್ಲಿ ಅವರ ಉಪಸ್ಥಿತಿಯನ್ನು ಕೈಬಿಟ್ಟಿರುವುದು ದುರುದ್ದೇಶಪೂರಿತ ಉದ್ದೇಶಗಳನ್ನು ಸೂಚಿಸುತ್ತದೆ ಎಂದು ರಂಜಿತ್ ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮಲಯಾಳಂ ಚಿತ್ರರಂಗದಲ್ಲಿ ಮತ್ತೆ ಸಂಚಲನ; ನಟ ಜಯಸೂರ್ಯ ವಿರುದ್ಧ ನಟಿ ಸೋನಿಯಾ #MeToo ಆರೋಪ

ಸದ್ಯ, ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 354ನೇ ಸೆಕ್ಷನ್ ಅಡಿಯಲ್ಲಿ ಅಪರಾಧ ಸಾಬೀತಾದರೆ, ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.

ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ರಂಜಿತ್, ತಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಅವರು ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದು, ಇತ್ತೀಚೆಗೆ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸೆಗೂ ಒಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ. ತಮಗೆ ಸರಿಯಾದ ವೈದ್ಯಕೀಯ ಆರೈಕೆಯ ಅಗತ್ಯವಿದ್ದು, ಜಾಮೀನು ನೀಡಬೇಕೆಂದು ಕೋರಿದ್ದಾರೆ. ಆಪಾದಿತ ಘಟನೆಯು 15 ವರ್ಷಗಳ ಹಿಂದೆ ನಡೆದಿದ್ದು, ಕಸ್ಟಡಿ ವಿಚಾರಣೆ ಅನಗತ್ಯವಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...