ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿಮೀರಿದೆ : ನಟಿ ಕುಟ್ಟಿ ಪದ್ಮಿನಿ

Date:

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಅತ್ಯಾಚಾರದ ಬಗ್ಗೆ ಹಲವಾರು ನಟಿಯರು ದೂರು ನೀಡುತ್ತಿರುವ ಬೆನ್ನಲ್ಲೇ ತಮಿಳು ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ನಡೆಯತ್ತಿರುವ ಬಗ್ಗೆ ಖ್ಯಾತ ನಟಿಯೊಬ್ಬರು ಪ್ರಸ್ತಾಪಿಸಿದ್ದಾರೆ.

ಎನ್‌ಡಿಟಿವಿ ಸಂದರ್ಶನದಲ್ಲಿ ಮಾತನಾಡಿದ ಜನಪ್ರಿಯ ತಮಿಳು ನಟಿ ಮತ್ತು ಧಾರಾವಾಹಿ ನಿರ್ಮಾಪಕಿ ಕುಟ್ಟಿ ಪದ್ಮಿನಿ, “ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ವಿಪರೀತವಾಗಿದೆ” ಎಂದು ಹೇಳಿದ್ದಾರೆ.

ಕೇರಳದಲ್ಲಿ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯ ಬೆನ್ನಲ್ಲೇ ಮಲಯಾಳಂ ಚಿತ್ರರಂಗವೇ ತಲ್ಲಣಿಸಿದೆ. ಮಲಯಾಳಂ ಕಲಾವಿದರ ಚಲನಚಿತ್ರ ಸಂಸ್ಥೆಯನ್ನೇ (ಅಮ್ಮ) ಸಂಪೂರ್ಣವಾಗಿ ವಿಸರ್ಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ತಮಿಳು ಚಿತ್ರರಂಗದ ಬಗ್ಗೆ ಕುಟ್ಟಿ ಪದ್ಮಿನಿ ಪ್ರಸ್ತಾಪಿಸಿದ್ದಾರೆ. “ತಮಿಳು ಟೆಲಿವಿಷನ್ ಶೋ ಉದ್ಯಮದಲ್ಲಿ ಅತಿರೇಕದ ಲೈಂಗಿಕ ಕಿರುಕುಳ ನಡೆಯುತ್ತಿದೆ. ಇದರಿಂದಾಗಿ ಅನೇಕ ಮಹಿಳೆಯರು ‘ಆತ್ಮಹತ್ಯೆ’ ಮಾಡಿಕೊಂಡಿದ್ದಾರೆ” ಎಂದು ಕುಟ್ಟಿ ಪದ್ಮಿನಿ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ | ಮಲಯಾಳಂ ನಟ, ಶಾಸಕ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಹಾಗೆಯೇ ಸಂದರ್ಶನದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳದ ಆರೋಪ ಮಾಡಿದ ಗಾಯಕಿ ಚಿನ್ಮಯಿ ಮತ್ತು ನಟಿ ಶ್ರೀರೆಡ್ಡಿ ಮೇಲೆ ತಮಿಳು ಚಲನಚಿತ್ರೋದ್ಯಮ ವಿಧಿಸಿದ ನಿಷೇಧದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಗೀತರಚನೆಕಾರ ವೈರಮುತ್ತು ವಿರುದ್ಧ ಗಾಯಕಿ ಚಿನ್ಮಯಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು.

“ನಿರ್ದೇಶಕರು ಮತ್ತು ತಂತ್ರಜ್ಞರು ಟಿವಿ ಧಾರಾವಾಹಿಗಳಲ್ಲಿನ ಮಹಿಳಾ ಕಲಾವಿದರಿಂದ ಲೈಂಗಿಕವಾಗಿ ಸಹಕರಿಸುವಂತೆ ಕೇಳುತ್ತಾರೆ. ಲೈಂಗಿಕ ಕಿರುಕುಳವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅನೇಕ ಮಹಿಳೆಯರು ದೂರು ನೀಡುವುದಿಲ್ಲ. ಕೆಲವು ಮಹಿಳೆಯರು ಹಣ ಹೆಚ್ಚಾಗಿ ಗಳಿಸಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಈ ಕಿರುಕುಳವನ್ನು ಸಹಿಸಿಕೊಳ್ಳುತ್ತಾರೆ” ಎಂದು ದೂರಿದ್ದಾರೆ.

“ಕೇರಳದ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ದೂರುಗಳು ದಾಖಲಾದಂತೆ ತಮಿಳುನಾಡಿನಲ್ಲಿ ಯಾವುದೇ ದೂರುಗಳು ದಾಖಲಾಗಿಲ್ಲ. ದೂರು ದಾಖಲಾದರೆ ನಾವು ಸೂಕ್ತ ಕ್ರಮವನ್ನು ಕೈಗೊಳ್ಳುತ್ತೇವೆ” ಎಂದು ತಮಿಳುನಾಡು ಸಚಿವ ಸ್ವಾಮಿನಾಥನ್ ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...