ಅದಾನಿ ಪರ ಮಾತನಾಡಿ ಮಿತ್ರ ಪಕ್ಷಗಳಿಗೆ ಅಚ್ಚರಿ ಮೂಡಿಸಿದ ಶರದ್‌ ಪವಾರ್‌

Date:

ಹಿಂಡನ್‌ ಬರ್ಗ್‌ ವರದಿಯನ್ನು ಆಧರಿಸಿ ಕಾಂಗ್ರೆಸ್‌ ಸೇರಿದಂತೆ 19 ವಿಪಕ್ಷಗಳು ಅದಾನಿ ಸಮೂಹದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಜಂಟಿ ಸದನ ಸಮಿತಿಯನ್ನು ರಚಿಸುವಂತೆ ಪಟ್ಟು ಹಿಡಿದಿವೆ. ಇದೇ ವೇಳೆ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ಎನ್‌ಸಿಪಿಯ ಮುಖ್ಯಸ್ಥ ಶರದ್‌ ಪವಾರ್‌, ಉದ್ಯಮಿ ಗೌತಮ್‌ ಅದಾನಿಯನ್ನು ಟಾರ್ಗೇಟ್‌ ಮಾಡಲಾಗುತ್ತಿದೆ ಎನ್ನುವ ಮೂಲಕ ತಮ್ಮ ಮಿತ್ರ ಪಕ್ಷಗಳಿಗೆ ಅಚ್ಚರಿ ಮೂಡಿಸಿದ್ದಾರೆ.

ಶುಕ್ರವಾರ ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಹಿಂಡನ್‌ ಬರ್ಗ್‌ ವರದಿ ಮತ್ತು ಅದಾನಿ ಸಮೂಹದ ಮೇಲಿನ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಶರದ್‌ ಪವಾರ್‌, “ಅದಾನಿ ಸಮೂಹದಲ್ಲಿ ಅವ್ಯವಹಾರ ನಡೆದಿದೆ ಎಂದು ವರದಿ ಪ್ರಕಟಿಸಿರುವ ಸಂಸ್ಥೆಯ ಹಿನ್ನೆಲೆ ಏನು? ವರದಿಯ ಹಿಂದಿನ ಉದ್ದೇಶವೇನು ಎಂಬುದನ್ನು ಅರಿಯುವ ಅಗತ್ಯವಿದೆ. ಆ ವರದಿಯನ್ನು ಆಧರಿಸಿ ವಿರೋಧ ಪಕ್ಷಗಳು ಉದ್ಯಮಿ ಅದಾನಿಯವರನ್ನು ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಅದಾನಿ ಮತ್ತು ಅಂಬಾನಿ ಇಬ್ಬರೂ ದೇಶದ ಇಂಧನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆಡಳಿತರೂಢ ಸರ್ಕಾರವನ್ನು ಟೀಕಿಸುವ ಉದ್ದೇಶದಿಂದ ಅದಾನಿಯನ್ನು ಗುರಿಯಾಗಿಸುವುದು ಸರಿಯಲ್ಲ. ಅದಾನಿ ಸಮೂಹದ ವಿರುದ್ಧ ತನಿಖೆ ನಡೆಸಲು ವಿಪಕ್ಷಗಳು ಸದನ ಸಮಿತಿ ರಚಿಸುವಂತೆ ಆಗ್ರಹಿಸುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಲ ಮುಡಿದ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರದ್‌ ಪವಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಎನ್‌ಸಿಪಿ ನಾಯಕರು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಮಾನ ಮನಸ್ಕರಿರುವ 19 ವಿರೋಧ ಪಕ್ಷಗಳಿಗೆ ಅದಾನಿ ಸಂಸ್ಥೆ ನಡೆಸಿದ ಅವ್ಯವಹಾರದ ಬಗ್ಗೆ ಯಾವುದೇ ಸಂಶಯವಿಲ್ಲ. ಬಿಜೆಪಿಯ ದಾಳಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಎನ್‌ಸಿಪಿಯನ್ನು ಒಳಗೊಂಡಂತೆ 20 ವಿಪಕ್ಷಗಳೂ ಒಗ್ಗೂಡಿ ಕೆಲಸ ಮಾಡಲಿವೆ” ಎಂದಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...