ಅಜಿತ್‌ ಪವಾರ್‌ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಸರ್ಕಾರದಿಂದ ಹೊರಕ್ಕೆ; ಬಿಜೆಪಿಗೆ ಏಕನಾಥ್ ಶಿಂಧೆ ಬಣ ಎಚ್ಚರಿಕೆ

Date:

  • 2019ರಲ್ಲಿ ದೇವೇಂದ್ರ ಫಡ್ನವಿಸ್ ಜೊತೆ ರಹಸ್ಯವಾಗಿ ಸರ್ಕಾರ ರಚಿಸಲು ಯತ್ನಿಸಿದ್ದಅಜಿತ್‌ ಪವಾರ್‌
  • ಎನ್ಸಿಪಿ ದ್ರೋಹ ಮಾಡುವ ಪಕ್ಷ ಎಂದ ಏಕನಾಥ್ ಶಿಂಧೆ ಬಣದ ವಕ್ತಾರ ಸಂಜಯ್ ಶಿರ್ಸಾತ್

ಅಜಿತ್ ಪವಾರ್ ಎನ್‌ಸಿಪಿ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದ ಭಾಗವಾಗುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಾತ್ ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಸಿಪಿಯಲ್ಲಿ ಅಜಿತ್‌ ಪವಾರ್‌ಗೆ ಸ್ವತಂತ್ರವಿಲ್ಲ. ಹಾಗಾಗಿ ಅವರು ಎನ್‌ಸಿಪಿ ತೊರೆದರೆ ಸ್ವಾಗತಿಸುತ್ತೇವೆ. ಅವರು ಗುಂಪಿನೊಂದಿಗೆ ಬಂದರೆ, ನಾವು ಸರ್ಕಾರದಲ್ಲಿ ಇರುವುದಿಲ್ಲ. ಅವರು ಏನನ್ನೂ ಹೇಳಿಲ್ಲ ಎಂದರೆ ಅವರು ಎನ್‌ಸಿಪಿಯಲ್ಲಿ ಇರಲು ಬಯಸುತ್ತಿಲ್ಲ. ಅಜಿತ್ ಪವಾರ್ ಅಸಮಾಧಾನಕ್ಕೆ ಕಾರಣ ಅವರ ಪುತ್ರ ಪಾರ್ಥ್ ಪವಾರ್ ಈ ಹಿಂದೆ ಚುನಾವಣೆಯಲ್ಲಿ ಸೋತಿರುವುದು. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಶಿವಸೇನೆಯ 16 ಶಾಸಕರ ಅನರ್ಹತೆ ಅರ್ಜಿಯ ವಿಷಯಕ್ಕೂ ಅವರ ಅಸಮಾಧಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

“ಎನ್‌ಸಿಪಿ ಬಿಜೆಪಿಯೊಂದಿಗೆ ನೇರವಾಗಿ ಹೋಗುವುದಿಲ್ಲ ಎಂದು ನಾವು ಭಾವಿಸಿದ್ದೇವೆ. ಈ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಎನ್‌ಸಿಪಿ ದ್ರೋಹ ಮಾಡುವ ಪಕ್ಷ. ನಾವು ಅಧಿಕಾರದಲ್ಲಿದ್ದರೂ ಎನ್‌ಸಿಪಿ ಜೊತೆ ಇರುವುದಿಲ್ಲ. ಬಿಜೆಪಿ ತನ್ನೊಂದಿಗೆ ಎನ್‌ಸಿಪಿಯನ್ನು ಬರಮಾಡಿಕೊಂಡರೆ ಮಹಾರಾಷ್ಟ್ರ ಜನತೆಗೆ ಇಷ್ಟವಾಗುವುದಿಲ್ಲ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಹೋಗುವುದನ್ನು ಜನರು ಇಷ್ಟಪಟ್ಟಿಲ್ಲ” ಎಂದು ಸಂಜಯ್ ಶಿರ್ಸಾತ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

“ಅಜಿತ್ ಪವಾರ್ ಅವರೊಂದಿಗೆ ಬಿಜೆಪಿ ಸಂಪರ್ಕದಲ್ಲಿ ಇಲ್ಲದಿರುವುದು ಹೊಸ ವಿಷಯವೇನಲ್ಲ, ಆದರೆ ಮಾಧ್ಯಮಗಳು ತೋರಿಸುತ್ತಿರುವ ಅವರ ಅಸಮಾಧಾನಕ್ಕೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಮ್ಮ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಶಿರ್ಸತ್ ಹೇಳಿದರು.

“2019ರ ನವೆಂಬರ್‌ನಲ್ಲಿ ಅಜಿತ್‌ ಪವಾರ್‌ ಅವರು ದೇವೇಂದ್ರ ಫಡ್ನವಿಸ್ ಅವರೊಂದಿಗೆ ರಹಸ್ಯವಾಗಿ ಸರ್ಕಾರ ರಚಿಸುವ ಯತ್ನ ಮಾಡಿದ್ದರು. ಅವರು ದೊಡ್ಡ ನಾಯಕರಾಗಿದ್ದು, ಅವರ ಮನಸ್ಸಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅಷ್ಟು ಸುಲಭವಾಗಿ ಹೇಳುವುದಿಲ್ಲ” ಎಂದು ಶಿರ್ಸತ್ ತಿಳಿಸಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ವಕ್ತಾರರಾಗಿ ಶಿರ್ಸತ್ ಅವರನ್ನು ಇತ್ತೀಚೆಗೆ ನೇಮಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...