ಶಿರೂರು ದುರಂತ | ಭಾರೀ ಜನಸ್ತೋಮದೊಂದಿಗೆ ತವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಅಂತ್ಯಸಂಸ್ಕಾರ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹದ ಅಂತ್ಯಸಂಸ್ಕಾರವು ಇಂದು ಭಾರೀ ಜನಸ್ತೋಮದೊಂದಿಗೆ ಅವರ ಊರಾದ ಕೋಝಿಕ್ಕೋಡ್‌ನ ಕನ್ನಾಡಿಕ್ಕಲ್‌ನಲ್ಲಿ ನೆರವೇರಿತು.

ಕಳೆದ ಜುಲೈ 16ರಂದು ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಎರಡು ತಿಂಗಳ ಬಳಿಕ ನಡೆಸಿದ ಡ್ರಜ್ಜಿಂಗ್ ಕಾರ್ಯಾಚರಣೆಯ ವೇಳೆ ಗಂಗಾವಳಿ ನದಿಯಲ್ಲಿ ಲಾರಿ ಸಹಿತ ಚಾಲಕ ಅರ್ಜುನ್ ಶವವು ಸೆ.25ರಂದು ಪತ್ತೆಯಾಗಿತ್ತು. ಡಿಎನ್‌ಎ ಪರೀಕ್ಷೆಯಲ್ಲಿ ಶವ ಅರ್ಜುನ್‌ನದ್ದೇ ಎಂದು ದೃಢೀಕರಿಸಿದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತವು ಶವವನ್ನು ಪೊಲೀಸ್‌ ಸೂಕ್ತ ಬೆಂಗಾವಲಿನೊಂದಿಗೆ ಕೇರಳದ ಕೋಝಿಕ್ಕೂಡ್‌ನ ಅರ್ಜುನ್‌ನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು.

ಬಳಿಕ ಚಾಲಕ ಶಂಶುದ್ದೀನ್ ಅವರ ಜನತಾ ಆ್ಯಂಬುಲೆನ್ಸ್‌ ಮೂಲಕ ಶುಕ್ರವಾರ ತಡರಾತ್ರಿ ಮೃತದೇಹವನ್ನು ಕಳುಹಿಸಿಕೊಡಲಾಗಿತ್ತು. ಈ ವೇಳೆ ಶೋಧ ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಂಡಿದ್ದ ಕಾರವಾರ ಶಾಸಕ ಸತೀಶ್ ಸೈಲ್, ಸಾಮಾಜಿಕ ಕಾರ್ಯಕರ್ತ, ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಕೂಡ ಜೊತೆಗೆ ತೆರಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಬೆಳಗ್ಗೆ ಕೋಝಿಕ್ಕೋಡ್‌ನ ಕನ್ನಡಿಕ್ಕಲ್‌ನಲ್ಲಿರುವ ಅರ್ಜುನ್ ಅವರ ಮನೆಗೆ ಮೃತದೇಹ ತಲುಪಿದ್ದು ಈ ಸುದ್ದಿ ತಿಳಿಯುತ್ತಿದ್ದಂತೆಯೇ ಭಾರೀ ಜನಸ್ತೋಮ ನೆರೆದಿತ್ತು. ಬಂದಿದ್ದ ಅನೇಕರಲ್ಲಿ ಅರ್ಜುನ್ ಅವರು ಪರಿಚಯ ಇಲ್ಲದಿದ್ದರೂ ಅವರ ಮೃತದೇಹದ ಮುಂದೆ ಕಣ್ಣೀರು ಸುರಿಸುತ್ತಾ ನಿಂತಿದ್ದ ದೃಶ್ಯ ಕಂಡುಬಂತು.

ಬೆಳಿಗ್ಗೆ 11 ಗಂಟೆಯವರೆಗೆ ಸಾರ್ವಜನಿಕ ದರ್ಶನವನ್ನು ನಿಗದಿಪಡಿಸಲಾಗಿತ್ತು. ಆದಾಗ್ಯೂ, ಮತ್ತಷ್ಟು ಜನರು ಬಂದಿದ್ದರಿಂದ ಮಧ್ಯಾಹ್ನದ ವೇಳೆಗೆ ಅರ್ಜುನ್ ಅವರ ಸಹೋದರನ ನೇತೃತ್ವದಲ್ಲಿ ಅಂತಿಮ ವಿಧಿಗಳನ್ನು ನಡೆಸಲಾಯಿತು. ಅರ್ಜುನ್ ಅವರ ಮಗ ಅಯಾನ್ ಅವರನ್ನು ಕೊನೆಯ ಕ್ಷಣದಲ್ಲಿ ಸ್ಥಳಕ್ಕೆ ಕರೆತರಲಾಯಿತು. ಅಪ್ಪನನ್ನು ನೆನೆದು ಕಣ್ಣೀರಿಡುತ್ತಿದ್ದ ಮಗ, ಪತಿಯನ್ನು ನೆನೆದು ಪತ್ನಿ, ಮಗನನ್ನು ನೆನೆದು ಅರ್ಜುನ್ ಪೋಷಕರು ಕಣ್ಣೀರಿಡುತ್ತಿದ್ದ ದೃಶ್ಯ ಅಲ್ಲಿ ನೆರೆದಿದ್ದವರ ಕಣ್ಣುಗಳನ್ನು ತೇವಗೊಳಿಸಿತು.

ಅಂತಿಮವಾಗಿ ಅರ್ಜುನ್ ಮೃತದೇಹವನನ್ನು ಅವರು ನಿರ್ಮಿಸಲು ಬಯಸಿದ್ದ ಮನೆಯ ಬಳಿಯಲ್ಲಿಯೇ ದಹನ ಮಾಡಲಾಯಿತು. ಕೇರಳದ ಸಚಿವರಾದ ಎ.ಕೆ.ಶಶೀಂದ್ರನ್, ಕೆ.ಬಿ.ಗಣೇಶ್ ಕುಮಾರ್, ಸಂಸದ ಎಂ.ಕೆ.ರಾಘವನ್, ಕಾರವಾರ ಶಾಸಕ ಸತೀಶ್ ಸೈಲ್, ಈಶ್ವರ್ ಮಲ್ಪೆ, ಅರ್ಜುನ್ ಅವರ ಲಾರಿ ಮಾಲೀಕ ಮನಾಫ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಶಿರೂರು ದುರಂತ | ಎರಡು ತಿಂಗಳ ಬಳಿಕ ಲಾರಿ ಸಹಿತ ಚಾಲಕ ಅರ್ಜುನ್ ಶವ ಪತ್ತೆ

ಕರ್ನಾಟಕ ಸರ್ಕಾರದಿಂದ ಅರ್ಜುನ್ ಕುಟುಂಬಕ್ಕೆ 5 ಲಕ್ಷ ಪರಿಹಾರ

ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತದಲ್ಲಿ ಮೃತನಾದ ಕೇರಳದ ಲಾರಿ ಚಾಲಕ ಅರ್ಜುನ್ ಇವರ ಕುಟುಂಬಕ್ಕೆ ಕರ್ನಾಟಕ ರಾಜ್ಯ ಸರ್ಕಾರ ವಿಪತ್ತು ನಿಧಿಯಿಂದ 5 ಲಕ್ಷ ರೂ ಪರಿಹಾರವನ್ನು ಉತ್ತರ ಕನ್ನಡ ಜಿಲ್ಲಾಡಳಿತದಿಂದ ಮಂಜೂರು ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...