ಶಾಕಿಂಗ್: 1,500 ಜನಸಂಖ್ಯೆಯ ಗ್ರಾಮದಲ್ಲಿ 3 ತಿಂಗಳಲ್ಲೇ 27,000 ಜನನಗಳು ದಾಖಲು! ಬೃಹತ್ ಸೈಬರ್ ವಂಚನೆ?

Date:

1,500 ಜನಸಂಖ್ಯೆ ಇರುವ ಗ್ರಾಮವೊಂದರಲ್ಲಿ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗಿನ ಮೂರು ತಿಂಗಳಲ್ಲಿ ಬರೋಬ್ಬರಿ 27,397 ಜನನಗಳಾಗಿವೆ (ಹೆರಿಗೆ) ಎಂದು ನಾಗರಿಕ ನೋಂದಣಿ ವ್ಯವಸ್ಥೆಯಲ್ಲಿ (ಸಿಆರ್‌ಎಸ್) ದಾಖಲಿಸಲಾಗಿದೆ. ಇದು, ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಮಾತ್ರವಲ್ಲದೆ, ಬೃಹತ್ ಸೈಬರ್ ವಂಚನೆ ಕುರಿತು ಎಚ್ಚರಿಕೆಯನ್ನೂ ನೀಡುತ್ತಿದೆ.

ಈ ಆಘಾತಕಾರಿ ಪ್ರಹಸನವು ಮಹಾರಾಷ್ಟ್ರದ ಯತ್ಮಲ್ ಜಿಲ್ಲೆಯ ಅರ್ನಿ ತಾಲೂಕಿನ ಶೆಂಡುರ್ಸಾನಿ ಗ್ರಾಮ ಪಂಚಾಯತಿಯ ದಾಖಲೆಗಳು ಕಂಡುಬಂದಿದೆ. ಕಳವಳಕಾರಿಯಾಗಿ, ಶೆಂಡುರ್ಸಾನಿ ಗ್ರಾಮ ಪಂಚಾಯತಿಯ ಸಿಆರ್‌ಎಸ್ ಐಡಿಯನ್ನು (MH18241RE) ಮುಂಬೈನಲ್ಲಿ ಆಪರೇಟ್ ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಇದೊಂದು ಸೈಬರ್ ಅಪರಾಧಿದ ಕೃತ್ಯವೆಂದು ಹೇಳಲಾಗಿದೆ.

ಅಸಂಗತ ದತ್ತಾಂಶ ಬೆಳಕಿಗೆ ಬಂದ ಬಳಿಕ, ಯತ್ಮಲ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ಯವತ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯತಿಯ ಕಂಪ್ಯೂಟರ್ ಆಪರೇಟರ್‌ ಐಡಿಯನ್ನು ಯಾರೋ ದುರುಪಯೋಗ ಮಾಡಿಕೊಂಡಿದ್ದಾರೆ. ಈ ದಾಖಲೆಗಳಲ್ಲಿ ಕಂಡುಬರುವ ಹೆಸರುಗಳಲ್ಲಿ 99.99% ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಹಾಗೂ ಇತರ ಪ್ರದೇಶಗಳ ಜನರಿಗೆ ಸೇರಿವೆ. ಈ ಎಲ್ಲ ಜನನ ನೋಂದಣಿ ಮತ್ತು ನಮೂದುಗಳನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ತಮ್ಮದೇ ಸರ್ಕಾರವನ್ನು ಒತ್ತಾಯಿಸಿದೆ.

ಸರ್ಕಾರದ ನಿರ್ದೇಶನಗಳ ಪ್ರಕಾರ, ಅಕ್ರಮ ಜನನ ಮತ್ತು ಮರಣ ನೋಂದಣಿಗಳನ್ನು ಗುರುತಿಸಲು ಮತ್ತು ರದ್ದುಗೊಳಿಸಲು ಪರಿಶೀಲನಾ ಅಭಿಯಾನ ನಡೆಯುತ್ತಿದೆ. ಈ ಕಾರ್ಯದ ಸಮಯದಲ್ಲಿ, ಅರ್ನಿ ತಾಲೂಕು ಆರೋಗ್ಯ ಅಧಿಕಾರಿಗಳು CRS ಸಾಫ್ಟ್‌ವೇರ್‌ನಲ್ಲಿ ಸೆಪ್ಟೆಂಬರ್ ಮತ್ತು ನವೆಂಬರ್ 2025ರ ನಡುವೆ ದಾಖಲಾದ 27,397 ಜನನ ನಮೂದುಗಳು ಮತ್ತು ಏಳು ಮರಣ ನಮೂದುಗಳನ್ನು ಕಂಡುಹಿಡಿದಿದ್ದಾರೆ. ಇವುಗಳಲ್ಲಿ ಬಹುತೇಕ ಎಲ್ಲವೂ ಗ್ರಾಮದ ಹೊರಗಿನ ಅಂಕಿಅಂಶಗಳಾಗಿವೆ.

ಈ ಲೇಖನ ಓದಿದ್ದೀರಾ?: ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

ಜಿಲ್ಲಾ ಪರಿಷತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂದರ್ ಪಟ್ಕಿ ಅವರು ಪಂಚಾಯತ್ ಇಲಾಖೆಯ ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಿದ್ದಾರೆ. ಸಮಿತಿ ತನಿಖೆ ನಡೆಸಿದ್ದು, ದಾಖಲಾಗಿರುವ ಒಟ್ಟು ಜನನ-ಮರಣ ದಾಖಲೆಗಳಲ್ಲಿ 27,397 ಜನನ ದಾಖಲೆಗಳು ಮತ್ತು ಏಳು ಮರಣ ದಾಖಲೆಗಳು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುವುದಿಲ್ಲ. ಅವುಗಳನ್ನು ಅನುಮಾನಾಸ್ಪದವೆಂದು ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣವನ್ನು ನವದೆಹಲಿಯ ಭಾರತದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕಚೇರಿ ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರದ ಗಮನಕ್ಕೆ ತರಲಾಗಿದೆ. ತನಿಖೆಯು ಸೈಬರ್ ವಂಚನೆಯ ಮೂಲಕ ನಮೂದುಗಳನ್ನು ಸೃಷ್ಟಿಸಲಾಗಿರುವ ಸಾಧ್ಯತೆಯನ್ನು ತೋರಿಸಿದೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ನಂದಕಿಶೋರ್ ಕಾಳೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...