ಉತ್ತರ ಪ್ರದೇಶ: ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಧರ್ಮ ದಾಖಲಿಸಲು ಸರ್ಕಾರದ ಹೈಟೆಕ್ ತಂತ್ರ

Date:

ಕನ್ವರ್ ಯಾತ್ರೆ ನಡೆಯುವ ಮಾರ್ಗದ ಬದಿಯ ಎಲ್ಲ ಅಂಗಡಿ ಮತ್ತು ಡಾಬಾ ಮಾಲೀಕರು ತಮ್ಮ ಹೆಸರು ಹಾಗೂ ಆ ಮೂಲಕ ಧರ್ಮವನ್ನು ವಿವರಿಸುವ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಯೋಗಿ ಆದಿತ್ಯನಾಥ್ ಸರ್ಕಾರದ ಸೂಚನೆಗೆ ಕಳೆದ ವರ್ಷ ಸುಪ್ರೀಂಕೋರ್ಟ್ ತಡೆಯಾಜ್ಞೆ ವಿಧಿಸಿತ್ತು. ಆದ್ದರಿಂದ ಈ ಬಾರಿ ರಾಜ್ಯ ಸರ್ಕಾರ ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಪಕ್ಕಕ್ಕಿಟ್ಟು ತಮ್ಮ ಗುರಿ ಸಾಧನೆಗೆ ತಂತ್ರಜ್ಞಾನದ ಮೊರೆ ಹೋಗಿದೆ.

ಉತ್ತರ ಪ್ರದೇಶ ಸರ್ಕಾರದ ಆಹಾರ ಸುರಕ್ಷೆ ಮತ್ತು ಔಷಧ ನಿರ್ವಹಣಾ ಇಲಾಖೆ, ಕನ್ವರ್ ಯಾತ್ರೆಯ ಮಾರ್ಗದ ಎಲ್ಲ ಡಾಬಾ ಮತ್ತು ಅಂಗಡಿಗಳ ಮಾಲೀಕರು ಮಂಡಳಿಯಲ್ಲಿ ನೋಂದಾಯಿಸಿರುವ ತಮ್ಮ ಹೆಸರುಗಳನ್ನು ಮತ್ತು ಅವರಿಗೆ ಹಂಚಿಕೆ ಮಾಡಿರುವ ಕ್ಯೂಆರ್ ಕೋಡ್ ಪ್ರದರ್ಶಿಸಬೇಕು ಎಂದು ಕಡ್ಡಾಯಪಡಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಲ್ನೋಟಕ್ಕೆ ಈ ವಿನೂತನ ಕ್ಯೂಆರ್ ಕೋಡ್ ಗುಣಮಟ್ಟ ನಿಯಂತ್ರಣದ ಉದ್ದೇಶ ಹೊಂದಿದೆ. ಗ್ರಾಹಕರು ಈ ಕ್ಯೂಆರ್ ಕೋಡ್ ಬಳಸಿ ಅಲ್ಲಿನ ಆಹಾರ ಅಥವಾ ಸೇವೆಗಳ ಬಗ್ಗೆ ಪುರಾವೆಗಳ ಚಿತ್ರಗಳನ್ನು ಅಪ್ಲೋಡ್ ಮಾಡಿ ಅಭಿಪ್ರಾಯಗಳನ್ನು ತಿಳಿಸಲು ಅಥವಾ ದೂರುಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಆದರೆ ಈ ಕ್ಯೂಆರ್ ಕೋಡ್, ಮಾಲೀಕರ ಹೆಸರು ಹಾಗೂ ಅವರ ಧರ್ಮವನ್ನು ಬಹಿರಂಗಪಡಿಸುತ್ತದೆ.

“ಅಂಗಡಿ ಮತ್ತು ಡಾಬಾ ಮಾಲೀಕರ ವಿವರಗಳನ್ನು ತಿಳಿಯಬಯಸುವವರು ಇಲಾಖೆಯ ಡಿಜಿಟಲ್ ಅಪ್ಲಿಕೇಶನ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಲೀಕರ ಗುರುತನ್ನು ತಿಳಿದುಕೊಳ್ಳಬಹುದು” ಎಂದು ಇಲಾಖೆಯ ಆದೇಶ ಸ್ಪಷ್ಟಪಡಿಸಿದೆ. “ಅಂಗಡಿ ಮತ್ತು ಹೋಟಲ್ ಮಾಲೀಕರು ನೋಂದಾಯಿತ ಹೆಸರು ಮತ್ತು ಸಂಖ್ಯೆಯನ್ನು ಹೊಂದಿರುತ್ತಾರೆ. ನಾವು ಕ್ಯೂಆರ್ ಕೋಡ್ ನೀಡುವ ಮೂಲಕ ಪ್ರತಿಯೊಬ್ಬರು ತಮ್ಮ ಫಲಕಗಳಲ್ಲಿ ಈ ಕ್ಯೂಆರ್ ಕೋರ್ಡ್ ಮುದ್ರಿಸುವುದನ್ನು ಕಡ್ಡಾಯಪಡಿಸಿದ್ದೇವೆ” ಎಂದು ಇಲಾಖೆ ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...