ಹದಿಹರೆಯದ ಒಪ್ಪಿತ ಲೈಂಗಿಕತೆಯನ್ನು ಅಪರಾಧ ಎನ್ನಬೇಕೇ? ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Date:

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಒಪ್ಪಿತ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಬೇಕೇ? ಈ ವಿಚಾರದಲ್ಲಿ ಭಾರತಕ್ಕೆ ರೋಮಿಯೋ-ಜೂಲಿಯೆಟ್ ಕಾನೂನಿನ ಅನ್ವಯ ಮಾಡಬಹುದೇ? ಎಂಬುದರ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಹದಿಹರೆಯದ ಲಕ್ಷಾಂತರ ಹುಡುಗಿಯರು ಮತ್ತು ಹುಡುಗರು ಸಮ್ಮತಿಯ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಹೀಗಾಗಿ, ಇಂತಹ ಪ್ರಕರಣವನ್ನು ಅಪರಾಧವೆಂದು ಪರಿಗಣಿಸಬಾರದು. ಅನೇಕ ದೇಶಗಳಲ್ಲಿ ರೋಮಿಯೋ-ಜೂಲಿಯೆಟ್ ಕಾನೂನು ಜಾರಿಯಲ್ಲಿದ್ದು, ಆ ಕಾನೂನನ್ನು ದೇಶಕ್ಕೂ ಅನ್ವಯ ಮಾಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿದೆ.

ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದೆ. ಪೀಠದ ಮುಂದೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಹರ್ಷ ವಿಭೋರ್ ಸಿಂಘಾಲ್, “ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದರೆ, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರೆ, ಅದನ್ನು ಅತ್ಯಾಚಾರವೆಂದು ಪರಿಗಣಿಸಿ ಹುಡುಗನನ್ನು ಬಂಧಿಸಲಾಗುತ್ತದೆ. ಅಲ್ಲದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012ರ ಅಡಿಯಲ್ಲಿ ಲೈಂಗಿಕ ಕ್ರಿಯೆಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಒಪ್ಪಿಗೆ ಅಪ್ರಸ್ತುತವಾಗಿದೆ. ಅಂತಹ ಅಪ್ರಾಪ್ತೆಯೊಂದಿಗೆ ಲೈಂಗಿಕ ಚಟುವಟಿಕೆಗೆ ಪ್ರಯತ್ನಿಸುವ ಯಾವುದೇ ವ್ಯಕ್ತಿ ತಪ್ಪಿತಸ್ಥನಾಗುತ್ತಾನೆ. ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯೊಂದಿಗೆ ಲೈಂಗಿಕತೆ ನಡೆಸುವುದು (ಆಕೆ ಒಪ್ಪಿಗೆ ನೀಡಿದ್ದರೂ ಸಹ) ಅತ್ಯಾಚಾರವೇ ಆಗಿರುತ್ತದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನೇಕ ವಿದೇಶಗಳಲ್ಲಿ ಜಾರಿಯಲ್ಲಿರುವ ರೋಮಿಯೋ-ಜೂಲಿಯೆಟ್ ಕಾನೂನು ಜಾರಿಯಾಗುವ ಮೊದಲು, ಹದಿಹರೆಯದ ಲೈಂಗಿಕತೆ ಪ್ರಕರಣಗಳಲ್ಲಿ ಹುಡುಗ ವಯಸ್ಕನಾಗಿದ್ದರೆ ಮಾತ್ರ ಅತ್ಯಾಚಾರವೆಂದು ಪರಿಗಣಿಸಲಾಗುತ್ತಿತ್ತು. ಆದರೆ, 2007ರಲ್ಲಿ ಅನೇಕ ದೇಶಗಳು ರೋಮಿಯೋ-ಜೂಲಿಯೆಟ್ ಕಾನೂನನ್ನು ಅಳವಡಿಸಿಕೊಂಡವು. ಈ ಕಾನೂನಿನ ಅಡಿಯಲ್ಲಿ ಅಪ್ತಾಪ್ತೆಯ ವಯಸ್ಸಿಗಿಂತ ಹುಡುಗನ ವಯಸ್ಸು ನಾಲ್ಕು ವರ್ಷಕ್ಕಿಂತ ಹೆಚ್ಚಿಲ್ಲದಿದ್ದರೆ, ಅದನ್ನು ರೋಮಿಯೋ-ಜೂಲಿಯೆಟ್ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಹುಡುಗರನ್ನು ಬಂಧನದಿಂದ ಪಾರುಮಾಡುತ್ತದೆ” ಎಂದು ತಿಳಿಸಿದ್ದಾರೆ.

“18 ವರ್ಷಕ್ಕಿಂತ ಮೇಲ್ಪಟ್ಟ ಅನೇಕ ಹುಡುಗರನ್ನು 16-18 ನಡುವಿನ ವಯೋಮಾನದ ಹುಡುಗಿಯರೊಂದಿಗೆ ಸಮ್ಮತಿಯ ಲೈಂಗಿಕತೆಯಲ್ಲಿ ತೊಡಗಿದ್ದಕ್ಕಾಗಿ ಬಂಧಿಸಲಾಗಿದೆ. 16 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 16-20 ವರ್ಷ ವಯಸ್ಸಿನ ಹುಡುಗರ ನಡುವಿನ ಸಮ್ಮತಿಯ ಲೈಂಗಿಕತೆಯನ್ನು ಅಪರಾಧವಲ್ಲ ಎಂದು ಪರಿಗಣಿಸಬೇಕು” ಎಂದು ಮನವಿ ಮಾಡಿದರು.

ಸಿಜೆಐ ನೇತೃತ್ವದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, 18-19 ವರ್ಷ ವಯಸ್ಸಿನ ಹುಡುಗರು ಮತ್ತು 16-18ರ ವಯಸ್ಸಿನ ಹುಡುಗಿಯರು ಸಮ್ಮತಿಯಿಂದ ಲೈಂಗಿಕತೆಯಲ್ಲಿ ತೊಡಗಿದರೆ, ಅದನ್ನು ಅಪರಾಧಿಕರಿಸಬಹುದೇ ಅಥವಾ ರೋಮಿಯೋ-ಜೂಲಿಯೆಟ್ ಕಾನೂನನ್ನು ಭಾರತಕ್ಕೆ ಅನ್ವಯಿಸಬಹುದೇ? ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬೆಂಕಿ ಅವಘಡ| ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

ಪಿಐಎಲ್ ಅರ್ಜಿದಾರರು ಕೇಂದ್ರ ಆರೋಗ್ಯ ಸಚಿವಾಲಯದ ಪರವಾಗಿ ನಡೆದ ಅಧ್ಯಯನವನ್ನು ಉಲ್ಲೇಖಿಸಿದ್ದಾರೆ. ಅದರ ಪ್ರಕಾರ, 25-49 ವರ್ಷ ವಯಸ್ಸಿನ 10% ಮಹಿಳೆಯರು ತಮಗೆ 15 ವರ್ಷ ವಯಸ್ಸಾಗುವ ಮೊದಲೇ ಲೈಂಗಿಕತೆಯನ್ನು ಹೊಂದಿದ್ದರು. 39% ರಷ್ಟು ಮಹಿಳೆಯರು ತಮ್ಮ 18 ವರ್ಷ ವಯಸ್ಸಿನಲ್ಲಿ ಮೊದಲ ಬಾರಿಗೆ ಲೈಂಗಿಕ ಚಟುವಟಿಕೆ ನಡೆಸಿದ್ದಾರೆ.

“ಭಾರತದಲ್ಲಿ ಅಪ್ರಾಪ್ತ ವಯಸ್ಸಿನ ಲೈಂಗಿಕತೆಯು ಪ್ರಚಲಿತವಾಗಿದೆ ಎಂಬುದು ಸ್ಪಷ್ಟವಾಗಿದೆ. ಸಿಕ್ಕಿಬಿದ್ದವರು ಅತ್ಯಾಚಾರ ಪ್ರಕರಣದಡಿ ಆರೋಪಿಗಳಾಗುತ್ತಿದ್ದಾರೆ. ಲಕ್ಷಾಂತರ ಜನರು 18 ವರ್ಷ ತುಂಬುವ ಮೊದಲು ಸಮ್ಮತಿಯ ಲೈಂಗಿಕತೆಯನ್ನು ಹೊಂದಿರುತ್ತಾರೆ. ಗರ್ಭನಿರೋಧಕಗಳನ್ನು ಬಳಸಿದ ಒಪ್ಪಿಗೆಯ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಲಾಗಿದೆ ಎಂಬುದು ವಿಪರ್ಯಾಸವಾಗಿದೆ” ಎಂದು ಅರ್ಜಿದಾರರು ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...