ಲೋಕಸಭೆ ಚುನಾವಣೆಗಾಗಿ ಮಾತ್ರ ರಚಿಸಿದ್ದರೆ ಇಂಡಿಯಾ ಒಕ್ಕೂಟ ವಿಸರ್ಜಿಸಿ: ಒಮರ್‌ ಅಬ್ದುಲ್ಲಾ

Date:

‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಿ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಗಾಗಿ ಮಾತ್ರ ‘ಇಂಡಿಯಾ’ ಮೈತ್ರಿಕೂಟವನ್ನು ರಚನೆ ಮಾಡಿದ್ದರೆ, ಅದನ್ನು ವಿಸರ್ಜಿಸುವುದು ಅನಿವಾರ್ಯ. ದೆಹಲಿ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ’ ಎಂದು ಅವರು ತಿಳಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ರಾಜಕೀಯ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅಬ್ದುಲ್ಲಾ, ‘ಈ ಬಗ್ಗೆ ನಾನು ಏನನ್ನೂ ಹೇಳಲಾರೆ, ಏಕೆಂದರೆ ನಮಗೂ ದೆಹಲಿ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಎಎಪಿ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಬಿಜೆಪಿಯನ್ನು ಹೇಗೆ ಎದುರಿಸಬೇಕೆಂದು ನಿರ್ಧರಿಸಬೇಕು. ಒಂದು ವೇಳೆ ‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

“ನನಗೆ ನೆನಪಿರುವಂತೆ ‘ಇಂಡಿಯಾ’ ಮೈತ್ರಿಕೂಟಕ್ಕೆ ಯಾವುದೇ ಕಾಲಮಿತಿ ಎಂಬುದು ಇರಲಿಲ್ಲ. ಆದರೆ, ಲೋಕಸಭೆ ಚುನಾವಣೆ ಬಳಿಕ ಇದುವರೆಗೆ ಯಾವುದೇ ಸಭೆ ನಡೆಯದಿರುವುದು ದುರದೃಷ್ಟಕರ. ಮೈತ್ರಿಕೂಟವನ್ನು ಯಾರು ಮುನ್ನಡೆಸುತ್ತಾರೆ? ಅಜೆಂಡಾ ಏನು? ಮೈತ್ರಿ ಹೇಗೆ ಮುಂದುವರಿಯುತ್ತದೆ? ನಾವು ಒಗ್ಗಟ್ಟಾಗಿ ಇರುತ್ತೇವೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ’ ಎಂದು ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದರು.

2024ರ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ –ಕಾಂಗ್ರೆಸ್ ಮೈತ್ರಿಕೂಟ ಸರಳ ಬಹುಮತ ಪಡೆದು ಸರ್ಕಾರ ರಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...