ಮಣಿಪುರ | ಪ್ರತ್ಯೇಕ ಆಡಳಿತ ಕೋರಿದ್ದ 10 ಶಾಸಕರಿಗೆ ಶೋಕಾಸ್‌ ನೋಟಿಸ್

Date:

  • ರಾಜ್ಯ ವಿಧಾನಸಭೆಯ ಸವಲತ್ತುಗಳು ಮತ್ತು ನೀತಿ ಸಮಿತಿ ಶಾಸಕರಿಗೆ ಶೋಕಾಸ್‌ ನೋಟಿಸ್
  • ಕುಕಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸುವಂತೆ ಶಾಸಕರ ಬೇಡಿಕೆ

ಮಣಿಪುರ ರಾಜ್ಯದಲ್ಲಿ ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ಕಲ್ಪಿಸುವಂತೆ ಕೋರಿ 10 ಮಂದಿ ಶಾಸಕರಿಗೆ ರಾಜ್ಯ ಸರ್ಕಾರ ಗುರುವಾರ (ಜೂನ್ 8) ಶೋಕಾಸ್‌ ನೋಟಿಸ್‌ ನೀಡಿದೆ.

ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತಕ್ಕಾಗಿ ಕುಕಿ-ಝೋಮಿ ಸಮುದಾಯದ 10 ಮಂದಿ ಶಾಸಕರು ಕೋರಿದ್ದಾರೆ.

ಈ ಬೇಡಿಕೆಯನ್ನು ಏಕೆ ಮುಂದಿಟ್ಟಿದ್ದೀರಿ ಎಂದು ಪ್ರಶ್ನಿಸಿ ಶೋಕಾಸ್‌ ನೋಟಿಸ್ ಅನ್ನು ರಾಜ್ಯ ವಿಧಾನಸಭೆಯ ಸವಲತ್ತುಗಳು ಮತ್ತು ನೀತಿ ಸಮಿತಿಯು ನೀಡಿದೆ. ಜೂನ್‌ 16ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಡಿಕೆ ಮುಂದಿಟ್ಟಿರುವ 10 ಮಂದಿ ಶಾಸಕರಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕರು ಹಾಗೂ ಬಿರೇನ್‌ ಸಿಂಗ್‌ ಸರ್ಕಾರದ ಇಬ್ಬರು ಸಚಿವರೂ ಸೇರಿದ್ದಾರೆ.

ಭಾರತೀಯ ಸಂವಿಧಾನದಡಿ ಪ್ರತ್ಯೇಕ ಆಡಳಿತ ರಚಿಸಿ ತಮ್ಮ ಸಮುದಾಯದ ಜನರು ಶಾಂತಿಯುತವಾಗಿ ಮಣಿಪುರದ ಜನರ ಜೊತೆ ಬಾಳಲು ಅವಕಾಶ ಕಲ್ಪಿಸಬೇಕೆಂದು ಈ ಶಾಸಕರು ಕೇಂದ್ರ ಸರ್ಕಾರವನ್ನು ಕೋರಿದ್ದರು.

ಶಾಸಕರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆ ಕುರಿತು ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಸಹಜೀವನ ಸಂಗಾತಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ!

ಶೋಕಾಸ್‌ ನೋಟಿಸ್‌ ಅನ್ನು ಹಾಕ್ಹೋಲೆಟ್‌ ಕಿಪ್ಟೆನ್‌ (ಸ್ವತಂತ್ರ ಶಾಸಕ), ಕಿಮ್ನಿಯೋ ಹಾಕಿಪ್‌ ಹ್ಯಾಂಗ್‌ಶಿಂಗ್‌ (ಕೆಪಿಎ), ಎಲ್‌.ಎಂ.ಕೌಟೆ (ಬಿಜೆಪಿ), ಚಿನ್ಲುಂಗ್ಥಾಂಗ್‌ (ಕೆಪಿಎ), ನಮ್ಚಾ ಕಿಕಿಪ್ಗೆನ್ (ಬಿಜೆಪಿ), ನ್ಗುಂರ್ಸಂಗ್ಲೂರ್‌ ಸನತೆ (ಬಿಜೆಪಿ), ಲೆಟ್ಟಾವೊ ಹಾಕಿಪ್‌ (ಬಿಜೆಪಿ), ಲೆಟ್ಟಮಾಂಗ್‌ ಹಾಕಿಪ್‌ (ಬಿಜೆಪಿ), ಪಾವೊಲಿಯನ್‌ಲಾಲ್‌ ಹಾಕಿಪ್‌ (ಬಿಜೆಪಿ) ಮತ್ತು ವುಂಗ್‌ಜಗಿನ್‌ ವಾಲ್ಟೆ (ಬಿಜೆಪಿ) ಶಾಸಕರಿಗೆ ನೀಡಲಾಗಿದೆ.

ಈ ಶಾಸಕರುಗಳ ಪೈಕಿ ವುಂಗ್‌ಜಗಿನ್‌ ವಾಲ್ಟೆ ಅವರು ಮೇ 3 ರಂದು ನಡೆದ ಹಿಂಸಾಚಾರದಲ್ಲಿ ಗಾಯಗೊಂಡಿದ್ದರು.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಮೇಟಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಇದು ಹಿಂಸಾರೂಪ ಪಡೆದಿದ್ದು ಅನೇಕ ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹಿಂಸಾಚಾರ ತಡೆಗಟ್ಟಲು ಕೆಲವು ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...