ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
“ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲರ ಮೂಲಕ ನಡೆಸಬೇಕೆಂದು ನಾವು ಒತ್ತಾಯಿಸಿದ ನಮ್ಮ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಅನುಮೋದಿಸಿದೆ. ಡಿಸೆಂಬರ್ 18 ರಂದು ವಿಧಾನಗಳನ್ನು ನಿರ್ಧರಿಸಲಾಗುವುದು” ಎಂದು ಹಿಂದೂ ಒಕ್ಕೂಟಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದರು.
ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಅವರು ಹೇಳಿದರು.
ಈ ಸುದ್ದಿ ಓದಿದ್ದೀರಾ? ಅಶಿಸ್ತಿನ ವರ್ತನೆ: ಐವರು ಲೋಕಸಭಾ ಸದಸ್ಯರ ಅಮಾನತು
“ಶಾಹಿ ಈದ್ಗಾ ಮಸೀದಿಯು ಹಿಂದೂ ದೇವಾಲಯದ ಹಲವು ಚಿಹ್ನೆಗಳು ಮತ್ತು ಕುರುಹುಗಳನ್ನು ಹೊಂದಿದೆ ಎಂಬುದು ನನ್ನ ಬೇಡಿಕೆಯಾಗಿತ್ತು. ನಿಜವಾದ ಸ್ಥಾನವನ್ನು ಖಚಿತಪಡಿಸಿಕೊಳ್ಳಲು, ಅಡ್ವೋಕೇಟ್ ಕಮಿಷನರ್ ಅವರ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು” ಎಂದು ಜೈನ್ ಒತ್ತಿ ಹೇಳಿದರು.
ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬ್ ಭಗವಾನ್ ಕೃಷ್ಣನ ಜನ್ಮಸ್ಥಳದ 13.37 ಎಕರೆಯಲ್ಲಿ ದೇವಾಲಯವನ್ನು ಕೆಡವಿ ನಿರ್ಮಿಸಿದ ಎಂದು ಹಿಂದೂ ಸಂಘಟನೆಗಳ ವಾದವಾಗಿದೆ.





