ಸಿಕ್ಕಿಂ ಮೇಘಸ್ಫೋಟ | ಸಾವಿನ ಸಂಖ್ಯೆ 27ಕ್ಕೆ ಏರಿಕೆ; 141 ಮಂದಿ ನಾಪತ್ತೆ

Date:

ಸಿಕ್ಕಿಂನಲ್ಲಿ ಮೇಘಸ್ಫೋಟಗೊಂಡು ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಇದುವರೆಗೂ 27 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 141 ಮಂದಿ ನಾಪತ್ತೆಯಾಗಿದ್ದಾರೆ. ಕಾಣೆಯಾಗಿರುವವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿದ್ದು, 141 ಮಂದಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಬುಧವಾರ ಹಠಾತ್ತನೆ ಸಂಭವಿಸಿದ ಮೇಘಸ್ಫೋಟವು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದೆ. ಅಂದಿನಿಂದ ಶನಿವಾರ ಬೆಳಗ್ಗೆಯವರೆಗೆ ಎಂಟು ಮಂದಿ ಸೇನಾ ಯೋಧರು ಸೇರಿದಂತೆ 27 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಮಂಗನ್, ಗ್ಯಾಂಗ್ಟಾಕ್, ಪಾಕ್ಯೊಂಗ್ ಮತ್ತು ನಾಮ್ಚಿ ಜಿಲ್ಲೆಯ 25,065ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1,200ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 13 ಸೇತುವೆಗಳು ಕೊಚ್ಚಿಹೋಗಿವೆ ಎಂದು ಭೂಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಶನಿವಾರ ಬೆಳಗ್ಗೆ ಮತ್ತೊಬ್ಬ ಸೇನಾ ಯೋಧನ ಮೃತದೇಹ ಪತ್ತೆಯಾಗಿದೆ. 27 ಸಾವುಗಳಲ್ಲಿ- ನಾಲ್ವರು ಮಂಗನ್ ಜಿಲ್ಲೆಯವರು, ಆರು ಗ್ಯಾಂಗ್ಟಾಕ್ ಜಿಲ್ಲೆಯಲ್ಲಿ, ಒಂಬತ್ತು ಪಾಕ್ಯೊಂಗ್ ಜಿಲ್ಲೆಯವರಾಗಿದ್ದಾರೆ. ಜೊತೆಗೆ, ಎಂಟು ಸೈನಿಕರು ಸೇರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿಯವರೆಗೆ, ವಿವಿಧ ಪ್ರದೇಶಗಳಿಂದ 2,413 ಜನರನ್ನು ರಕ್ಷಿಸಲಾಗಿದೆ. ರಾಜ್ಯದಾದ್ಯಂತ 22 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 6,875 ಜನರು ಆಶ್ರಯ ಪಡೆಯುತ್ತಿದ್ದಾರೆ ಎಂದು ಇಲಾಖೆ ಹೇಳಿದೆ.

ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ಮತ್ತು ಶಿಬಿರಗಳಲ್ಲಿ ಆಶ್ರಯ ಪಡೆದ ಎಲ್ಲರಿಗೂ ತಲಾ 2,000 ರೂಪಾಯಿಗಳ ತಕ್ಷಣದ ಪರಿಹಾರ ಘೋಷಿಸಿದ್ದಾರೆ.

“ಸಾವಿರಾರು ಕೋಟಿ ರೂಪಾಯಿ ಹಾನಿಯಾಗಿದೆ. ಹಾನಿಯ ಬಗ್ಗೆ ನಾವು ನಿಖರವಾದ ವಿವರಗಳನ್ನು ನೀಡಲು ತಕ್ಷಣದಲ್ಲಿ ಸಾಧ್ಯವಿಲ್ಲ. ಸಮಿತಿ ರಚಿಸಿ ಅದರ ವಿಶ್ಲೇಷಣೆ ಪೂರ್ಣಗೊಂಡ ನಂತರ ನಿಖರ ಮಾಹಿತಿ ಗೊತ್ತಾಗಲಿದೆ. ಸದ್ ಕ್ಕೆ, ಸಂಕಷ್ಟದಲ್ಲಿರುವವರನ್ನು ರಕ್ಷಿಸುವುದು ಮತ್ತು ತಕ್ಷಣ ಪರಿಹಾರಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...