ಅಮೃತ್‌ಪಾಲ್‌ ಆಪ್ತರ ಬಂಧನಕ್ಕೆ ಬ್ರಿಟಿಷ್‌ ಸಂಸದ ಮೃದು ಧೋರಣೆ; ಸಿಂಘ್ವಿ ಖಂಡನೆ

Date:

  • ಅಮೃತ್‌ಪಾಲ್‌ ಸಿಂಗ್‌ನ 112 ಬೆಂಬಲಿಗರ ಬಂಧನ
  • ಪೊಲೀಸರಿಂದ ತಲೆಮರೆಸಿಕೊಂಡಿರುವ ಅಮೃತ್‌ಪಾಲ್

ಪಂಜಾಬ್‌ನಲ್ಲಿ ಸಿಖ್‌ ಮೂಲಭೂತವಾದಿ ಮತ್ತು ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ ಆಪ್ತರ ಬಂಧನದ ಬಗ್ಗೆ ಬ್ರಿಟಿಷ್‌ ಸಂಸತ್‌ನ ಲೇಬರ್‌ ಪಕ್ಷದ ಸಿಖ್‌ ಸಂಸದ ತನ್‌ಮನ್ಜೀತ್‌ ಸಿಂಗ್‌ ದೇಸಾಯಿ ಭಾನುವಾರ (ಮಾರ್ಚ್ 19) ಮೃದು ಧೋರಣೆ ತಾಳಿದ್ದಾರೆ. ಇದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಭಾರತದ ಪಂಜಾಬ್‌ ರಾಜ್ಯದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಂಡಿರುವುದು, ಖಲಿಸ್ತಾನ್‌ ಸಂಬಂಧಿತ ಬಂಧನಗಳು, ಗುಂಪು ಸೇರದಂತೆ ವಿಧಿಸಿರುವ ನಿರ್ಬಂಧಗಳಂತಹ ಕಳವಳಕಾರಿ ವರದಿಗಳು ಬರುತ್ತಿವೆ. ಈ ಉದ್ವಿಗ್ನ ಪರಿಸ್ಥಿತಿ ಶೀಘ್ರ ಕೊನೆಗೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಖ್ ಸಮುದಾಯದ ಬ್ರಿಟಿಷ್‌ ಸಂಸದನ ಈ ಹೇಳಿಕೆಯನ್ನು ಕಾಂಗ್ರೆಸ್‌ ವಕ್ತಾರ ಹಾಗೂ ಹಿರಿಯ ನ್ಯಾಯವಾದಿ ಅಭಿಷೇಕ್‌ ಮನು ಸಿಂಘ್ವಿ ಖಂಡಿಸಿದ್ದಾರೆ.

“ಖಲಿಸ್ತಾನಿಗಳ ಪರವಾದ ಬ್ರಿಟಿಷ್‌ ಸಂಸದನ ಈ ಮಾತುಗಳಿಂದ ಅವರಿಗೆ ಹೆಚ್ಚು ಮತಗಳು ದೊರೆಯುವುದಿಲ್ಲ. ಈ ಮೂಲಕ ಅವರು ಇಂಗ್ಲೆಂಡ್‌ನಲ್ಲಿ ಹೊಸ ಖಲಿಸ್ತಾನ್ ರೂಪಿಸಲು ಹೊರಟಿದಿದ್ದಾರೆ? ನೀವು ಇಂಗ್ಲೆಂಡ್‌ನಲ್ಲಿ ಖಾಲಿಸ್ತಾನಿಗಳ ಪರ ಭಾವನೆಗಳನ್ನು ಪೋಷಿಸಲು ಮುಂದಾಗಿದ್ದೀರಿ” ಎಂದು ಅಣಕವಾಡಿದ್ದಾರೆ.

ಪಂಜಾಬ್‌ನಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ, ಪೊಲೀಸರು ಕೈಗೊಂಡ ಕಾರ್ಯಾಚರಣೆಯಲ್ಲಿ ಅಮೃತ್‌ಪಾಲ್‌ ಸಿಂಗ್‌ನ 112 ಬೆಂಬಲಿಗರನ್ನು ಭಾನುವಾರ (ಮಾರ್ಚ್‌ 19) ತಡರಾತ್ರಿ ಬಂಧಿಸಿದ್ದಾರೆ. ಆ ನಂತರದಲ್ಲಿ ಬ್ರಿಟಿಷ್‌ ಸಂಸದ ಈ ಟ್ವೀಟ್‌ ಮಾಡಿದ್ದಾರೆ.

ಅಮೃತ್‌ಪಾಲ್‌ ಸಿಂಗ್‌ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 45 ದಿನಗಳ ನಂತರ ಈಗೇಕೆ ನೋಟಿಸ್? ಕೇಂದ್ರದ ನಡೆಗೆ ಕಾಂಗ್ರೆಸ್ ಆಕ್ರೋಶ

ಇತ್ತೀಚಿನ ತಿಂಗಳುಗಳಲ್ಲಿ ಸಿಖ್ಖರಿಗಾಗಿ ಪ್ರತ್ಯೇಕ ರಾಜ್ಯ ಖಲಿಸ್ತಾನ ರಚನೆಗೆ ಸಿಖ್‌ ಮೂಲಭೂತವಾದಿ ಅಮೃತ್‌ಪಾಲ್‌ ಸಿಂಗ್‌ ತನ್ನ ಬೆಂಬಲಿಗರ ನೇತೃತ್ವದಲ್ಲಿ ಪಂಜಾಬ್‌ನಲ್ಲಿ ಚಳವಳಿ ಆರಂಭಿಸಿದ್ದಾನೆ.

ಪ್ರತ್ಯೇಕತಾವಾದಿ ಅಂಶಗಳ ಆಧಾರದಲ್ಲಿ ಪೊಲೀಸರು ಅಮೃತ್‌ಪಾಲ್‌ ಸಿಂಗ್‌ ಪರ ಬೆಂಬಲಿಗರ ಬಂಧಿಸಿದ ನಂತರ ಇಂಗ್ಲೆಂಡ್‌ನಲ್ಲಿಯ ಖಲಿಸ್ತಾನಿ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಕೆಲವರು ಲಂಡನ್‌ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗೆ ಎಳೆದರು. ಇದು ಮತ್ತಷ್ಟು ವಿವಾದಕ್ಕೆ ಕಾರಣವಾಯಿತು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...