ಮಧ್ಯಪ್ರದೇಶ | ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯ ಹತ್ಯೆ

Date:

  • ಮಧ್ಯಪ್ರದೇಶ ಮೊರೆನಾ ಜಿಲ್ಲೆಯ ಲೇಪಾ ಗ್ರಾಮದಲ್ಲಿ ಘಟನೆ
  • ಎರಡು ಕುಟುಂಬಗಳ ನಡುವಿನ ಹಳೆಯ ವೈಷಮ್ಯ ದಾಳಿಗೆ ಕಾರಣ

ಮಧ್ಯಪ್ರದೇಶ ಮೊರೆನಾ ಜಿಲ್ಲೆಯಲ್ಲಿ ಶುಕ್ರವಾರ (ಮೇ 5) ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮೂವರು ಗಾಯಗೊಂಡು ಪಾರಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಜೇಂದ್ರ ಸಿಂಗ್ ತೋಮರ್ ಮತ್ತು ಅವರ ಇಬ್ಬರು ಮಕ್ಕಳು ಮೃತ ಆರು ಮಂದಿ ಪೈಕಿ ಇತರ ಮೂವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಪ್ರದೇಶ ಮೊರೆನಾ ಜಿಲ್ಲೆಯಿಂದ 50 ರಿಂದ 60 ಕಿ ಮೀ ದೂರದ ಲೇಪಾ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿ ಕುಟುಂಬ ಹಾಗೂ ಅಪರಿಚಿತರ ನಡುವೆ ನಡೆಯುತ್ತಿದ್ದ ಮಾತುಕತೆ ವಾಗ್ವಾದ ಹಂತಕ್ಕೆ ತಲುಪಿತ್ತು.

ಇದರಿಂದ ಉದ್ರಿಕ್ತ ಅಪರಿಚಿತರು ಬಂದೂಕುಗಳಿಂದ ಕುಟುಂಬದ ಸದಸ್ಯರ ಮೇಲೆ ದಾಳಿ ಮಾಡಿ ಮರದ ಕೋಲುಗಳಿಂದ ಥಳಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ ವಾಗ್ವಾದ ನಡೆದಿತ್ತು. ಹಳೆಯ ದ್ವೇಷದಿಂದ ಗುಂಡಿನ ದಾಳಿ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಧ್ಯಪ್ರದೇಶ ಚಂಬಲ್ ವಲಯದ ಪೊಲೀಸ್ ಮಹಾನಿರ್ದೇಶಕ (ಐಜಿ) ಎಸ್ ಸಕ್ಸೇನಾ ತಿಳಿಸಿದ್ದಾರೆ.

ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತ್ಯಾಜ್ಯ ಎಸೆಯುವ ಸಂಬಂಧ 2013ರಲ್ಲಿ ಗಜೇಂದ್ರ ಸಿಂಗ್ ಮತ್ತು ಧೀರ್ ಸಿಂಗ್ ಕುಟುಂಬಗಳ ನಡುವೆ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ ಧೀರ್ ಸಿಂಗ್ ಅವರ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿದ್ದರು. ಗಜೇಂದ್ರ ಸಿಂಗ್ ಕುಟುಂಬ ಊರು ತೊರೆದಿತ್ತು.

ಈ ಸುದ್ದಿ ಓದಿದ್ದೀರಾ? ಜಮ್ಮು- ಕಾಶ್ಮೀರ | ಕಿಶ್ತ್ವಾರ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ತನಿಖೆಗೆ ಆದೇಶ

ನ್ಯಾಯಾಲಯದ ಹೊರಗೆ ಎರಡು ಕುಟುಂಬಗಳು ರಾಜಿ ಮಾಡಿಕೊಂಡಿದ್ದವು. ಶುಕ್ರವಾರ ಗಜೇಂದ್ರ ಸಿಂಗ್‌ ಕುಟುಂಬ ಊರಿಗೆ ಮರಳಿತ್ತು.

ಈ ಮಾಹಿತಿ ತಿಳಿದ ಧೀರ್‌ ಸಿಂಗ್‌ ಕುಟುಂಬ ಗಜೇಂದ್ರ ಸಿಂಗ್ ಕುಟುಂಬದ ಮೇಲೆ ಪೂರ್ವ ಯೋಜಿತ ದಾಳಿ ನಡೆಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...