ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ: ಏಮ್ಸ್‌ ಅಧ್ಯಯನ

Date:

ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ ಕಾರಣ ಎಂಬುದನ್ನು ಏಮ್ಸ್‌ ಅಧ್ಯಯನ ವರದಿ ಬಹಿರಂಗಪಡಿಸಿದೆ. ಉತ್ತರಾಖಂಡದಲ್ಲಿ ರಸ್ತೆ ಅಪಘಾತಗಳಿಗೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳೇ ಏಕೈಕ ಮುಖ್ಯ ಕಾರಣವಾಗಿ ಹೊರಹೊಮ್ಮುತ್ತಿವೆ ಎಂದು ಋಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(AIIMS) ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.

ಅಷ್ಟಕ್ಕೂ ದೀರ್ಘವಾಗಿ ಟ್ರಕ್, ಲಾರಿ ಚಲಾಯಿಸುವವರಿಗೆ ನಿದ್ರಾಹೀನತೆ ಇರುತ್ತದೆ ಎಂದು ಈ ಅಧ್ಯಯನ ಹೇಳಿರುವುದಲ್ಲ. ಬದಲಾಗಿ ದೈನಂದಿನವಾಗಿ ಸಣ್ಣ ವಾಹನಗಳನ್ನು ಚಲಾಯಿಸುವವರಿಗೂ ನಿದ್ರಾಹೀನತೆ ಹೆಚ್ಚಾಗುತ್ತಿದೆ. ನಿದ್ರಾಹೀನತೆಯಿಂದಾಗಿ ಸಣ್ಣ ವಾಹನ ಚಾಲಕರು ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಏಮ್ಸ್ ಮನೋವೈದ್ಯಶಾಸ್ತ್ರ ವಿಭಾಗದ ನಿದ್ರಾಹೀನತೆ ಸಂಬಂಧಿತ ವಿಭಾಗವು ನಡೆಸಿದ ಸಂಶೋಧನೆಯು ಅಮೆರಿಕದ ವೈದ್ಯಕೀಯ ಜರ್ನಲ್ ‘ಕ್ಯೂರಿಯಸ್’ನಲ್ಲಿ ಪ್ರಕಟವಾಗಿದೆ.

ಇದನ್ನು ಓದಿದ್ದೀರಾ? ಕಡಿಮೆ ನಿದ್ದೆ ಮಾಡುವವರು ಓದಲೇ ಬೇಕಾದ ಸುದ್ದಿ | 10 ಮುಖ್ಯ ಅಂಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಡಿದು ವಾಹನ ಚಲಾಯಿಸುವುದು ಅಪಘಾತಕ್ಕೆ ಕಾರಣವಾಗಲಿದೆ ಎಂಬ ನಿಟ್ಟಿನಲ್ಲಿ ಅಧಿಕಾರಿಗಳು ಆಗಾಗ್ಗೆ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಅಭಿಯಾನಗಳನ್ನು ನಡೆಸುತ್ತಿದ್ದಾರೆ. ಆದರೆ ಉತ್ತರಾಖಂಡದಲ್ಲಿ ವಾಸ್ತವ ಹೆಚ್ಚು ಸಂಕೀರ್ಣವಾಗಿದೆ ಎಂದು ಅಧ್ಯಯನ ಹೇಳುತ್ತದೆ.

ಅಕ್ಟೋಬರ್ 2021 ಮತ್ತು ಏಪ್ರಿಲ್ 2022ರ ನಡುವೆ ಏಮ್ಸ್‌ಗೆ ದಾಖಲಾದ ವಿವಿಧ ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸುಮಾರು 1,200 ವ್ಯಕ್ತಿಗಳನ್ನು ಸಂಶೋಧಕರು ಪರೀಕ್ಷಿಸಿದ್ದಾರೆ. ಈ 575 ಚಾಲಕರಲ್ಲಿ ಶೇಕಡ 75ರಷ್ಟು ಜನರು ದ್ವಿಚಕ್ರ ಅಥವಾ ತ್ರಿಚಕ್ರ ವಾಹನಗಳನ್ನು ಚಲಾಯಿಸುತ್ತಿದ್ದರು ಎಂದು ಅಧ್ಯಯನದಲ್ಲಿ ತಿಳಿದುಬಂದಿದೆ.

ಈ ಬಗ್ಗೆ ಅಧ್ಯಯನದ ನಿರ್ದೇಶಕರಾದ ಪ್ರೊಫೆಸರ್ ರವಿ ಗುಪ್ತಾ ಮತ್ತು ಡಾ. ವಿಶಾಲ್ ಧಿಮಾನ್, “ಶೇಕಡ 21ರಷ್ಟು ಅಪಘಾತಗಳು ಚಾಲಕರು ನಿದ್ರಿಸುವುದರಿಂದ ಅಥವಾ ವಾಹನ ಚಲಾಯಿಸುವಾಗ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಿದ್ದರಿಂದ ಸಂಭವಿಸಿದೆ ಎಂದು ನಮ್ಮ ಸಂಶೋಧನೆಯಲ್ಲಿ ತಿಳಿದುಬಂದಿದೆ” ಎಂದಿದ್ದಾರೆ. ಇನ್ನು ಅತಿಯಾದ ಕೆಲಸದಿಂದ ಉಂಟಾಗುವ ಬಳಲಿಕೆಯು ಶೇಕಡ 26ರಷ್ಟು ಅಪಘಾತಕ್ಕೆ ಕಾರಣವಾಗಿದೆ ಎಂದೂ ಒತ್ತಿ ಹೇಳಿದ್ದಾರೆ.

ಶೇಕಡ 32ರಷ್ಟು ಅಪಘಾತಗಳಲ್ಲಿ ಮದ್ಯಪಾನ ಒಂದು ಕಾರಣವಾಗಿದ್ದರೆ, ಈ ಚಾಲಕರಲ್ಲಿ ಅನೇಕರು ನಿದ್ರಾಹೀನತೆ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮದ್ಯಪಾನವು ಅವರ ನಿದ್ರೆಯ ಸಮಸ್ಯೆಯನ್ನು ಇನ್ನಷ್ಟೂ ಹೆಚ್ಚಿಸಿದೆ” ಎಂದು ಅಧ್ಯಯನ ಹೇಳಿದೆ.

ಆಶ್ಚರ್ಯಕರವಾಗಿ, ಸುಮಾರು ಶೇಕಡ 68ರಷ್ಟು ನಿದ್ರೆಗೆ ಸಂಬಂಧಿಸಿದ ಅಪಘಾತಗಳು ಅಂಕುಡೊಂಕಾದ ರಸ್ತೆಗಳಲ್ಲಿ ಅಲ್ಲ, ಬದಲಾಗಿ ನೇರ, ದೈನಂದಿನ ಓಡಾಡುವ ರಸ್ತೆಗಳಲ್ಲಿ ಸಂಭವಿಸಿವೆ. ಹೆಚ್ಚಿನ ಘಟನೆಗಳು ಸಂಜೆ 6 ಗಂಟೆಯಿಂದ ಮಧ್ಯರಾತ್ರಿಯವರೆಗೆ ಸಂಭವಿಸಿವೆ. ಜನರು ದಿನವಿಡೀ ಕೆಲಸ ಮಾಡಿ ಸಂಜೆ ವೇಳೆಗೆ ಆಯಾಸಗೊಂಡಿರುವುದು ಇದಕ್ಕೆ ಕಾರಣ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...