ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ಘಟನೆ ಎಲ್ಲಡೆ ವೈರಲ್‌ ಆಗುತ್ತಿದೆ.

ಷೇರು ಮಾರುಕಟ್ಟೆಯ ಗ್ರಾಹಕರೊಬ್ಬರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಷೇರು ಮಾರುಕಟ್ಟೆ ಗ್ರಾಹಕರಿಗೆ(ಬ್ರೋಕರ್‌ಗಳು) ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಗಳಿಗೆ ಹೆಚ್ಚು ತೆರಿಗೆಯನ್ನು ವಿಧಿಸಲಾಗುತ್ತಿರುವ ಬಗ್ಗೆ ಪ್ರಶ್ನೆ ಕೇಳಿದರು.

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು ನಾನು ನಿಮ್ಮ ವಿಷಯಕ್ಕೆ ಸಂಬಂಧಪಡದ ವ್ಯಕ್ತಿಯಾಗಿದ್ದು, ನಾನು ನಿಮ್ಮ ಈ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ತಮ್ಮದೆ ಭಾಷೆಯಲ್ಲಿ ಹೇಳಿ ಜಾರಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈನಲ್ಲಿ ಭಾರತೀಯ ಷೇರು ಮಾರುಕಟ್ಟೆ ವಿನಿಮಯ(ಬಿಎಸ್‌ಇ) ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಷೇರು ಮಾರುಕಟ್ಟೆ ಗ್ರಾಹಕರು, ಹೂಡಿಕೆ ಮತ್ತು ತೊಂದರೆಗಳು, ಸರ್ಕಾರವು ಜಿಎಸ್‌ಟಿ, ಐಜಿಎಸ್‌ಟಿ, ಮುದ್ರಾಂಕ ಶುಲ್ಕ,ಭದ್ರತಾ ವಹಿವಾಟು ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳನ್ನು ವಿಧಿಸುತ್ತಿರುವ ಬಗ್ಗೆ ಪ್ರಶ್ನೆಗಳನ್ನು ಕೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಈ ಸಂದರ್ಭದಲ್ಲಿ ಬ್ರೋಕರ್‌ ಒಬ್ಬರು, ”ಇಂದು ಭಾರತ ಸರ್ಕಾರ ಬ್ರೋಕರ್‌ಗಳಿಂಗಿತ ಹೆಚ್ಚು ಲಾಭ ಗಳಿಸುತ್ತಿದೆ. ನಾನು ಎಲ್ಲದರಲ್ಲಿಯೂ ಹೂಡಿಕೆ ಮಾಡಿದ್ದೇನೆ. ನಾನು ಎಲ್ಲ ರೀತಿಯ ಸವಾಲುಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಕೇಂದ್ರ ಸರ್ಕಾರ ಕೂಡ ನನ್ನ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುತ್ತಿದೆ. ನೀವು(ಸರಕಾರ) ನನ್ನ ಸ್ಲೀಪಿಂಗ್‌ ಪಾರ್ಟ್ನ್‌ರ್ ಆಗಿದ್ದೀರಿ. ನಾನು ನನ್ನ ಹಣಕಾಸು, ನನ್ನ ಜವಾಬ್ದಾರಿಗಳು, ನನ್ನ ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದೇನೆ. ಷೇರು ಮಾರುಕಟ್ಟೆ ಗ್ರಾಹಕರಿಗೆ(ಬ್ರೋಕರ್‌ಗಳು) ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಗಳಿಗೆ ಹೆಚ್ಚು ತೆರಿಗೆಯನ್ನು ವಿಧಿಸಲಾಗುತ್ತಿದೆ. ಸರ್ಕಾರ ಸ್ಲೀಪಿಂಗ್‌ ಪಾರ್ಟ್ನ್‌ರ್ ಆಗಿದೆ. ನಾನು ನನ್ನ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಪಾರ್ಟ್ನ್‌ರ್ ಆಗಿದ್ದೇನೆ. ಇದಕ್ಕೆ ನಿಮ್ಮ ಉತ್ತರವೇನು” ಎಂದು ಪ್ರಶ್ನೆ ಕೇಳಿದರು.

ಈ ಪ್ರಶ್ನೆಗೆ ಅಸಂಬದ್ಧವಾಗಿ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್‌ ”ಇಲ್ಲಿ ಕುಳಿತುಕೊಂಡಿರುವ ಸ್ಲೀಪಿಂಗ್‌ ಪಾರ್ಟ್ನ್‌ರ್ ನಿಮ್ಮ ಪ್ರಶ್ನೆಗೆ ಉತ್ತರ ಕೊಡಲು ಸಾಧ್ಯವಿಲ್ಲ” ಎಂದು ವಿಷಯವನ್ನು ಬೇರೆಡೆ ತಿರುಗಿಸಿದರು.

ನಿರ್ಮಲಾ ಸೀತಾರಾಮನ್‌ ನೀಡಿದ ಉತ್ತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಹಣಕಾಸು ಸಂಬಂಧಿತ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸದ ಸಚಿವರು ತಮ್ಮ ಹುದ್ದೆಗೆ ಅನರ್ಹರು ಎಂದು ನೆಟ್ಟಿಗರು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...