ಟಿಕೆಟ್ ಇಲ್ಲದ ಪ್ರಯಾಣಿಕನಿಂದ ರೈಲಿನಲ್ಲಿ ಧೂಮಪಾನ : ದಟ್ಟ ಹೊಗೆಗೆ ಬೆಚ್ಚಿಬಿದ್ದ ಪ್ರಯಾಣಿಕರು!

Date:

  • ತಿರುಪತಿಯಿಂದ ಸಿಕಂದರಾಬಾದ್​ಗೆ ಹೊರಟಿದ್ದ ವಂದೇ ಭಾರತ್ ರೈಲು
  • ಘಟನೆಗೆ ಕಾರಣರಾದ ಪ್ರಯಾಣಿಕನನ್ನು ಬಂಧಿಸಿದ ರೈಲ್ವೆ ಪೊಲೀಸರು

ಮೇಕ್ ಇನ್ ಇಂಡಿಯಾದ ಭಾಗವಾಗಿ ದೇಶದಲ್ಲಿ ಚಾಲ್ತಿಯಲ್ಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉದ್ಘಾಟನೆಯಾದಂದಿನಿಂದ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ.

ಈ ಬಾರಿ ಮಾತ್ರ ಸುದ್ದಿಯಾಗಿದ್ದು ಆಂಧ್ರಪ್ರದೇಶದಿಂದ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಟಾಯ್ಲೆಟ್‌ನಲ್ಲಿ ಮಾಡಿದ ಧೂಮಪಾನದಿಂದ ಹೊಗೆ ಸೃಷ್ಟಿಯಾಗಿ, ಕೆಲ ಕಾಲ ಆತಂಕದ ವಾತಾವರಣ ಉಂಟಾದ ಘಟನೆ ನೆಲ್ಲೂರು ಜಿಲ್ಲೆಯ ಮನುಬೋಳು ರೈಲು ನಿಲ್ದಾಣದ ಬಳಿ ನಡೆದಿದೆ.

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಹೊಗೆಯಿಂದಾಗಿ ಸುಮಾರು ಒಂದು ಗಂಟೆ ಕಾಲ ಸ್ಥಗಿತಗೊಳಿಸಿದ್ದ ಸುದ್ದಿ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಘಟನೆಯಿಂದ ರೈಲಿನ ಬೋಗಿಯೊಳಗೆ ಹೊಗೆ ತುಂಬಿಕೊಂಡಿದ್ದ ವಿಡಿಯೋಗಳು ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿರುಪತಿಯಿಂದ ಸಿಕಂದರಾಬಾದ್​ಗೆ ಹೊರಟಿದ್ದ ವಂದೇ ಭಾರತ್ ರೈಲಿನಲ್ಲಿ ಈ ಘಟನೆ ನಡೆದಿದೆ.

ಅಷ್ಟಕ್ಕೂ ಆಗಿದ್ದೇನು?

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಟಿಕೆಟ್ ಪರಿಶೀಲಿಸುವ ಅಧಿಕಾರಿ ಟಿಟಿಯ ಕೈಗೆ ಸಿಕ್ಕಿ ಬೀಳಬಾರದೆಂದು ಸಿ -13 ಕೋಚ್‌ನ ಶೌಚಾಲಯದೊಳಗೆ ಹೋಗಿ ಕೂತಿದ್ದಾನೆ. ಸುಮ್ಮನೆ ಕೂತಿದ್ದಿದ್ದರೆ ಇದು ಸುದ್ದಿಯೇ ಆಗುತ್ತಿರಲಿಲ್ಲವೇನೋ. ಸುಮ್ಮನೆ ಕೂರದ ಆತ ಸಿಗರೇಟ್ ಸೇದಿ, ಅದರ ತುಂಡನ್ನು ಶೌಚಾಲಯದಲ್ಲಿದ್ದ ಕಸದ ಬುಟ್ಟಿಗೆ ಹಾಕಿದ್ದಾನೆ. ಈ ವೇಳೆ ಬೆಂಕಿಯುಂಟಾಗಿ ಹೊಗೆ ಎದ್ದಿದೆ. ಈ ವೇಳೆ ಶೌಚಾಲಯದೊಳಗೆ ಬೆಂಕಿ ನಂದಿಸಲು ಅಳವಡಿಸಲಾಗಿದ್ದ ಏರೋಸಾಲ್ ಸ್ವಯಂಚಾಲಿತವಾಗಿ ಕೆಲಸ ಮಾಡಿದೆ. ಏರೋಸಾಲ್​ ಯಂತ್ರದಿಂದ ಪೌಡರ್ ಬರಲಾರಂಭಿಸಿದ್ದರಿಂದ ರೈಲಿನ ಬೋಗಿಯಲ್ಲಿ ಹೊಗೆಯ ವಾತಾವರಣ ನಿರ್ಮಾಣಗೊಂಡಿದೆ. ಹೊಗೆಯಿಂದ ಇತರ ಪ್ರಯಾಣಿಕರು ತುಂಬಾ ಭಯಭೀತರಾಗಿದ್ದರು. ಎಲ್ಲದರ ನಡುವೆ ಗಾಬರಿಯಿಂದ ಟಿಕೆಟ್ ಇಲ್ಲದ ಪ್ರಯಾಣಿಕ ಶೌಚಾಲಯದಲ್ಲೇ ಕೂತಿದ್ದಾನೆ.

ಕೂಡಲೇ ರೈಲಿನ ಸಿಬ್ಬಂದಿ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ. ನಿಲ್ದಾಣದಲ್ಲಿ ರೈಲು ನಿಂತಿದ್ದರಿಂದ ಗಾಬರಿಗೊಂಡ ಪ್ರಯಾಣಿಕರು ಕೆಳಗಿಳಿದಿದ್ದಾರೆ. ರೈಲಿನ ಮೂರನೇ ಬೋಗಿಯ ವಾಶ್​ರೂಂನಲ್ಲಿ ಹೊಗೆ ಬರುತ್ತಿರುವುದನ್ನು ಸಿಬ್ಬಂದಿ ಪರಿಶೀಲಿಸಿದರು. ಈ ವೇಳೆ ಉಪಕರಣಗಳಿಗೆ ಸುಟ್ಟ ಸಿಗರೇಟಿನ ತುಂಡು ಅಂಟಿಕೊಂಡಿದ್ದರಿಂದ ಹೊಗೆ ಹಬ್ಬಿರುವುದು ದೃಢಪಟ್ಟಿದೆ. ಬಳಿಕ ಘಟನೆಗೆ ಕಾರಣನಾದ ಹಾಗೂ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನ ವಿವರ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...