ಮನಾಲಿಯಲ್ಲಿ ಹಿಮಪಾತ: ರಸ್ತೆಯಲ್ಲಿ ಸಿಕ್ಕಿಕೊಂಡಿವೆ 1,000ಕ್ಕೂ ಹೆಚ್ಚು ವಾಹನಗಳು

Date:

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಭಾರೀ ಹಿಮಪಾತ ಉಂಟಾಗಿದ್ದು, 1,000ಕ್ಕೂ ಹೆಚ್ಚು ವಾಹನಗಳು ಹಿಮದಲ್ಲಿ ಸಿಲುಕಿಕೊಂಡಿವೆ. ಪರಿಣಾಮವಾಗಿ, ಹಲವಾರು ಪ್ರವಾಸಿಗರು ಸೋಲಾಂಗ್ ಮತ್ತು ರೋಹ್ತಾಂಗ್‌ ನಡುವಿನ ಅಟಲ್ ಸುರಂಗ ಮಾರ್ಗದಲ್ಲಿ ಗಂಟೆಗಟ್ಟಲೆ ಸಿಲುಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು 1,000 ವಾಹನಗಳು ರಸ್ತೆಯಲ್ಲಿದ್ದು, ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್‌ ಉಂಟಾಗಿದೆ. ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಈವರೆಗೆ ಸುಮಾರು 700 ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

ಹಿಮಪಾತವು ಮುಂದುವರೆದಿದ್ದು, ಪ್ರವಾಸಿಗರು ಮತ್ತು ವಾಹನ ಚಾಲಕರು ತಮ್ಮ ವಾಹನಗಳನ್ನು ಚಲಾಯಿಸಲಾಗುತ್ತಿಲ್ಲ. ಅವರೆಲ್ಲರನ್ನೂ ರಕ್ಷಿಸುವಲ್ಲಿ ಪೊಲೀಸ್ ಸಿಬ್ಬಂದಿ ನಿರತರಾಗಿದ್ದಾರೆ. ಸ್ಥಳೀಯ ಅಧಿಕಾರಿಗಳು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಮದಿಂದ ಆವೃತವಾದ ಪರ್ವತಗಳಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷವನ್ನು ಆಚರಿಸಲು ಪ್ರವಾಸಿಗರು ಹೆಚ್ಚಾಗಿ ಮನಾಲಿ, ಶಿಮ್ಲಾಗೆ ತೆರಳಿದ್ದಾರೆ. ಆದರೆ, ಹಿಮಪಾತದಿಂದ ಅವರೆಲ್ಲರೂ ಆತಂಕಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ, ಡಿಸೆಂಬರ್ 8ರಂದು ಕೂಡ ಹಿಮಪಾತವಾಗಿದ್ದು, ಇದೀಗ ಮತ್ತೆ ಹಿಮಪಾತವಾಗುತ್ತಿದೆ. ಪರಿಣಾಮವಾಗಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗಾಗಿ ತೆರಳಿದ್ದವರು, ಹಬ್ಬ ಆಚರಣೆಗೂ ಮುನ್ನವೇ ಮನಾಲಿ ತೊರೆಯಲು ಮುಂದಾಗಿದ್ದಾರೆ.

ಕೋವಿಡ್-19 ಹೊಡೆತದಿಂದ ತತ್ತರಿಸಿದ್ದ ಹಿಮಾಚಲ ಪ್ರದೇಶದ ಪ್ರವಾಸೋದ್ಯಮವು ಚೇತರಿಕೆಯ ಹಾದಿಯಲ್ಲಿದೆ. ಈ ಬಾರಿಯ ಚಳಿಗಾಲದಲ್ಲಿ ಸ್ಥಳೀಯ ವ್ಯಾಪಾರಗಳು, ಪ್ರವಾಸೋದ್ಯಮ ಹೆಚ್ಚು ಆದಾಯದ ನಿರೀಕ್ಷೆಯಲ್ಲಿದ್ದರು. ಆದರೆ, ಹಿಮಪಾತವು ಪ್ರವಾಸಿಗರನ್ನು ಮತ್ತೆ ಮನಾಲಿ, ಶಿಮ್ಲಾಗಳಿಂದ ದೂರವಿಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...