ಸೋನಮ್ ವಾಂಗ್‌ಚುಕ್ ಬಂಧನ ಆದೇಶವು ಈ ಹಿಂದಿನ ಆದೇಶಗಳ ನಕಲು: ಸುಪ್ರೀಂ ಕೋರ್ಟ್‌ನಲ್ಲಿ ಸಿಬಲ್ ವಾದ

Date:

ಲಡಾಖ್ ಸಾಮಾಜಿಕ ಹೋರಾಟಗಾರ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರ ಬಂಧನ ಆದೇಶವು ಈ ಹಿಂದಿನ ಬಂಧನ ಆದೇಶಗಳ ನಕಲಾಗಿದೆ. ಭಾಷೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಏನೂ ಇಲ್ಲ. ಅದೇ ಪದ, ಅದೇ ವಾಕ್ಯ, ಎಲ್ಲವೂ ಒಂದೇ ಆಗಿದೆ” ಎಂದು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಿದ್ದಾರೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಮತ್ತು ಸಂವಿಧಾನದ ಆರನೇ ಅಡಿಯಲ್ಲಿ ಲಡಾಖ್‌ ಅನ್ನು ಸೇರಿಸಬೇಕು ಎಂದು ಒತ್ತಾಯಿಸಿ ಸೋನಮ್ ವಾಂಗ್‌ಚುಕ್ ಹಲವು ಬಾರಿ ಪ್ರತಿಭಟನೆ ನಡೆಸಿದ್ದಾರೆ, ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸೋನಮ್ ಉಪವಾಸ ನಡೆಸುತ್ತಿದ್ದ ಶಹೀದ್‌ ಪಾರ್ಕ್‌ನ ಹೊರಭಾಗದಲ್ಲಿ ಹಿಂಸಾಚಾರ ನಡೆದಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಇದಾದ ಬಳಿಕ ಹಿಂಸಾಚಾರಕ್ಕೆ ಸೋನಮ್ ಭಾಷಣವೇ ಕಾರಣ ಎಂದು ಆರೋಪಿಸಿ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಶಾಂತಿ-ಅಹಿಂಸೆಯ ನನ್ನ ಮನವಿಯನ್ನು ಅಕ್ರಮವಾಗಿ ಹತ್ತಿಕ್ಕಲಾಗಿದೆ, ಪಾತಕಿಯಂತೆ ಬಿಂಬಿಸಲಾಗುತ್ತಿದೆ: ‘ಸುಪ್ರೀಂ’ ಗೆ ವಾಂಗ್‌ಚುಕ್ ಅರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ ಸೋನಮ್ ಪತ್ನಿ, ಶಿಕ್ಷಕಿ ಗೀತಾಂಜಲಿ ಆಂಗ್ಮೋ ಈ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಪೀಠವು ಮುಂದುವರಿಸಿದೆ.

ಆಂಗ್ಮೋ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಮೂರು ಪ್ರಮುಖ ವಾದಗಳನ್ನು ಮಂಡಿಸಿದ್ದಾರೆ. ಅಧಿಕಾರಿಗಳು ಬಂಧನಕ್ಕೆ ದಾಖಲೆಯಾಗಿ ಇಟ್ಟುಕೊಂಡಿರುವ ನಾಲ್ಕು ವಿಡಿಯೋಗಳನ್ನು ಅವರಿಗೆ ನೀಡಲಾಗಿಲ್ಲ ಎಂದು ಸಿಬಲ್ ಮತ್ತೊಮ್ಮೆ ಹೇಳಿದ್ದಾರೆ. ಹಾಗೆಯೇ ವಿಧಿ 22(1) ಮತ್ತು 22(5) ಅನ್ನು ಉಲ್ಲೇಖಿಸಿದ್ದು ಯಾವುದೇ ವ್ಯಕ್ತಿಗೆ ಕಾರಣ ತಿಳಿಸದೆ ಬಂಧಿಸಲಾಗುವುದಿಲ್ಲ, ಕಾನೂನು ವೃತ್ತಿಪರರನ್ನು ಸಂಪರ್ಕಿಸುವ ಹಕ್ಕನ್ನು ನಿಕಾರಿಸುವಂತಿಲ್ಲ ಎಂದು ಹೇಳಿದ್ದಾರೆ.

“ಬಂಧನ ಆದೇಶ ಮತ್ತು ಬಂಧನ ಆದೇಶಕ್ಕಾಗಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಹಂಚಿಕೊಂಡ ನಂತರವೇ ಸೆಕ್ಷನ್ 5(ಎ) ಎನ್‌ಎಸ್‌ಎ ಅನ್ವಯಿಸಬಹುದು. ಅದು ನನ್ನ ಸಾಂವಿಧಾನಿಕ ಹಕ್ಕು. 25ನೇ ವಿಧಿಯು ಸೆಕ್ಷನ್ 5(ಎ) ಎನ್‌ಎಸ್‌ಎಗೆ ಒಳಪಡುವುದಿಲ್ಲ. ಸಂವಿಧಾನವನ್ನು ರಚಿಸಿದ ಕ್ಷಣದಿಂದಲೇ ಕಾನೂನನ್ನು ರೂಪಿಸಲಾಗಿದೆ. 5ಎ ಅನ್ವಯಿಸಬೇಕಾದರೆ, ಎಲ್ಲವನ್ನೂ ನನಗೆ ಪೂರೈಸಬೇಕು” ಎಂದು ಸೋನಮ್ ಪರವಾಗಿ ಸಿಬಲ್ ವಾದಿಸಿದ್ದಾರೆ.

ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ನಾಳೆ, ಅಂದರೆ ಜನವರಿ 13ರಂದು ಮುಂದುವರೆಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...