ತಮಿಳುನಾಡಿನಲ್ಲಿ ಹಾಲು ಸಂಗ್ರಹ ನಿಲ್ಲಿಸುವಂತೆ ಅಮೂಲ್‌ಗೆ ನಿರ್ದೇಶಿಸುವಂತೆ ಅಮಿತ್‌ ಶಾಗೆ ಸ್ಟಾಲಿನ್ ಪತ್ರ

Date:

  • ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಅಮೂಲ್‌ ಮೂಲಕ ಹಾಲು ಸಂಗ್ರಹ
  • ಅಮೂಲ್‌ ನಿರ್ಧಾರದಿಂದ ಸಹಕಾರ ಸಂಘಗಳಲ್ಲಿ ಅನಾರೋಗ್ಯಕರ ಸ್ಪರ್ಧೆ

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಗುಜರಾತ್ ಮೂಲದ ಡೇರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ಸ್ಥಗಿತಗೊಳಿಸಲು ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ತಮಿಳುನಾಡಿನ ಹಾಲಿನ ಶೆಡ್ ಪ್ರದೇಶಗಳಲ್ಲಿ ಅಮುಲ್ ಹಾಲು ಸಂಗ್ರಹಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಕೃಷ್ಣಗಿರಿ ಜಿಲ್ಲೆಯಲ್ಲಿ ಅಮುಲ್ ಚಿಲ್ಲಿಂಗ್ ಸೆಂಟರ್ ಮತ್ತು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಬಳಸಿಕೊಂಡಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸ್ಟಾಲಿನ್‌ ಪತ್ರದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿ ಸಂಸ್ಥೆಗಳ ನಡುವೆ ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರಿ ಸಂಘಗಳು ಪರಸ್ಪರರ ಡೈರಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ಭಾರತದಲ್ಲಿ ರೂಢಿಯಲ್ಲಿದೆ. ಇಂತಹ ಅಡ್ಡ-ಸಂಗ್ರಹಣೆಯು 1970ರಲ್ಲಿ ಪ್ರಾರಂಭವಾದ ಶ್ವೇತ ಕ್ರಾಂತಿಯ ಸ್ಪೂರ್ತಿಗೆ ವಿರುದ್ಧವಾಗಿದೆ,  ಪ್ರಸ್ತುತ ಯೋಜನೆಯು ದೇಶದಲ್ಲಿ ಹಾಲಿನ ಕೊರತೆಯ ಸನ್ನಿವೇಶದ ದೃಷ್ಟಿಯಿಂದ ಗ್ರಾಹಕರಿಗೆ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

ತಮಿಳುನಾಡಿನ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವನ್ನು(ಆವಿನ್) ದಶಕಗಳಿಂದ ಪೋಷಿಸಿಕೊಂಡು ಬರಲಾಗಿದೆ. ಅಮೂಲ್‌ನ ಈಗಿನ ಯೋಜನೆಯು ಸಹಕಾರ ಸಂಘಗಳ ನಿಯಮವನ್ನು ಉಲ್ಲಂಘಿಸುತ್ತದೆ. ಪ್ರಾದೇಶಿಕ ಸಹಕಾರಿ ಸಂಘಗಳು ರಾಜ್ಯಗಳಲ್ಲಿ ಡೇರಿ ಅಭಿವೃದ್ಧಿಗೆ ಮೂಲಾಧಾರವಾಗಿವೆ ಮತ್ತು ಉತ್ಪಾದಕರನ್ನು ತೊಡಗಿಸಿಕೊಳ್ಳಲು, ಪೋಷಿಸಲು ಮತ್ತು ಅನಿಯಂತ್ರಿತ ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ, ತಮಿಳುನಾಡಿನ ಆವಿನ್‌ನ ಹಾಲಿನ ಶೆಡ್ ಪ್ರದೇಶದಿಂದ ತಕ್ಷಣವೇ ಜಾರಿಗೆ ಬರುವಂತೆ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ಅಮುಲ್‌ಗೆ ನಿರ್ದೇಶಿಸಲು ನಿಮ್ಮ ತಕ್ಷಣದ ಮಧ್ಯಸ್ಥಿಕೆಯನ್ನು ನಾನು ವಿನಂತಿಸುತ್ತೇನೆ ಎಂದು ಸ್ಟಾಲಿನ್ ಪತ್ರದಲ್ಲಿ ಮನವಿ ಮಾಡಿದ್ದಾರೆ. 

ಗ್ರಾಮೀಣ ಹಾಲು ಉತ್ಪಾದಕರು ಮತ್ತು ಗ್ರಾಹಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಒಡೆತನದೊಂದಿಗೆ ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಡಿಯಲ್ಲಿ(ಆವಿನ್) 9,673 ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಸಂಘಗಳಲ್ಲಿ 4.5 ಲಕ್ಷ  ಸದಸ್ಯರು ನಿತ್ಯವು 35 ಲಕ್ಷಕ್ಕೂ ಹೆಚ್ಚಿನ ಲೀಟರ್ ಹಾಲನ್ನು ಸಂಗ್ರಹಿಸುತ್ತಾರೆ. ಈ ಕಸುಬನ್ನು ನಂಬಿಕೊಂಡು ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಆವಿನ್ ಜಾನುವಾರು ಆಹಾರ, ಮೇವು, ಖನಿಜ ಮಿಶ್ರಣ, ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ಹಾಲು ಉತ್ಪಾದಕರ ಪ್ರಾಣಿಗಳಿಗೆ ತಳಿ ಸೇವೆಗಳನ್ನು ಒದಗಿಸುತ್ತದೆ. ಇದಲ್ಲದೆ, ನಮ್ಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪೂರೈಸುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಅಮೂಲ್‌ ಸಂಸ್ಥೆ ಕರ್ನಾಟಕದ ಚುನಾವಣಾ ಪೂರ್ವದಲ್ಲಿ ಬಿಜೆಪಿ ಸರ್ಕಾರದ ಮೂಲಕ ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ನಂದಿನಿಯನ್ನು ಆಪೋಷನ ತೆಗೆದುಕೊಳ್ಳಲು ಹೊರಟಿತ್ತು. ಕರ್ನಾಟಕದ ವಿಪಕ್ಷಗಳು ಹಾಗೂ ಕನ್ನಡಪರ ಹೋರಾಟಗಾರರ ಪ್ರತಿಭಟನೆಯ ಫಲವಾಗಿ ಅಮೂಲ್‌ ಕರ್ನಾಟಕಕ್ಕೆ ಕಾಲಿಡಲು ಸಾಧ್ಯವಾಗಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...