‘ಏಕತಾ ಪ್ರತಿಮೆ’ | 2 ವರ್ಷದಲ್ಲಿ 38 ಪ್ರಾಣಿಗಳು, ಪಕ್ಷಿಗಳು ಸಾವು

Date:

‘ಸ್ಟ್ಯಾಚ್ಯೂ ಆಫ್ ಯೂನಿಟಿ’ (ಏಕತಾ ಪ್ರತಿಮೆ) ಕಾಂಪ್ಲೆಕ್ಸ್‌ನಲ್ಲಿರುವ ಜಂಗಲ್ ಸಫಾರಿ ಎಂದು ಜನಪ್ರಿಯವಾಗಿರುವ ಸರ್ದಾರ್ ಪಟೇಲ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಇತರ ರಾಜ್ಯಗಳು ಮತ್ತು ವಿದೇಶಗಳಿಂದ ತರಲಾದ 38 ಪ್ರಾಣಿಗಳು ಮತ್ತು ಪಕ್ಷಿಗಳು ಸಾವನ್ನಪ್ಪಿವೆ ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಬಹಿರಂಗಪಡಿಸಿದೆ.

ಕಾಂಗ್ರೆಸ್ ಶಾಸಕ ಗುಲಾಬ್ ಸಿಂಗ್ ಚೌಹಾಣ್ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಾಜ್ಯ ಸರ್ಕಾರ, ಪ್ರಾಣಿ-ಪಕ್ಷಿಗಳ ಸಾವಿನ ಬಗ್ಗೆ ಒಪ್ಪಿಕೊಂಡಿದೆ. “ಇತರ ರಾಜ್ಯಗಳು ಮತ್ತು ವಿದೇಶಗಳಿಂದ ಝೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಗೊಂಡ 295 ಪ್ರಾಣಿಗಳು ಮತ್ತು ಪಕ್ಷಿಗಳಲ್ಲಿ 2023ರ ಡಿಸೆಂಬರ್ 31ರವರೆಗೆ 38 ಸಾವನ್ನಪ್ಪಿವೆ” ಎಂದು ಹೇಳಿದೆ. ಪಾರ್ಕ್‌ ಒಟ್ಟು 940 ಪ್ರಾಣಿ-ಪಕ್ಷಿಗಳಿದ್ದವು.

ಪ್ರಾಣಿಗಳ ಸಾವಿನ ಬಗ್ಗೆ ವಿಧಾನಸಭೆಯಲ್ಲಿ ಉತ್ತರಿಸಿದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, “ಪಾರ್ಕ್‌ನಲ್ಲಿದ್ದ ಐದು ಅಲ್ಪಕಾಗಳಲ್ಲಿ ಮೂವರು ಸಾವನ್ನಪ್ಪಿದರೆ, ನಾಲ್ಕು ವಾಲಬಿಗಳಲ್ಲಿ ಎರಡು ಸಾವನ್ನಪ್ಪಿವೆ. ನಾಲ್ಕು ಸನ್ ಕೋನರ್‌ಗಳು, ಮೂರು ಹಸಿರು ಕೆನ್ನೆಯ ಕೋನರ್‌ಗಳು, ಏಳು ನೀಲಿ ಫೆಸೆಂಟ್‌ಗಳು, ಮೂರು ಸಿಲ್ವರ್ ಫೆಸೆಂಟ್‌ಗಳು, ಮೂರು ಕೆಂಪು ಕೊಕ್ಕಿನ ಟೌಕನ್‌ಗಳು, ಮೂರು ಥಯಾಮಿನ್ ಜಿಂಕೆಗಳು, ಮೂರು ಅಳಿಲು ಕೋತಿಗಳು ಹಾಗೂ ಒಂದು ಜವುಗು ಮೊಸಳೆ ಸಾವನ್ನಪ್ಪಿವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂಚಿಕೊಂಡಿರುವ ವಿವರಗಳ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ಇಂತಹ ವಿದೇಶಿ ಪಕ್ಷಿಗಳು ಮತ್ತು ಪ್ರಾಣಿಗಳಿಗೆ 34 ಲಕ್ಷ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ.

2023ರ ಮಾರ್ಚ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಗುಜರಾತ್ ಸರ್ಕಾರ, 2021ರ ಫೆಬ್ರವರಿ 1ರಿಂದ 2023ರ ಜನವರಿ 31ರವರೆಗೆ 12 ಪ್ರಾಣಿಗಳು ಮತ್ತು ಪಕ್ಷಿಗಳು ಮೃಗಾಲಯದಲ್ಲಿ ಸಾವನ್ನಪ್ಪಿವೆ ಎಂದು ಹೇಳಿತ್ತು. ಇದೀಗ, ವಿಧಾನಸಭೆಯಲ್ಲಿ ನೀಡಿದ ಉತ್ತರದಲ್ಲಿ 38 ಪ್ರಾಣಿ-ಪಕ್ಷಿಗಳು ಸಾವನ್ನಪ್ಪಿವೆ ಎಂದು ಹೇಳಿದೆ. ಅದಾಗ್ಯೂ, ಅಂತಹ ಸಾವುಗಳಿಗೆ ಕಾರಣಗಳನ್ನು ವಿವರಿಸಲಾಗಿಲ್ಲವಾದರೂ, ಕಳೆದ ವರ್ಷ ನೀಡಿದ್ದ ಕಾರಣಗಳಲ್ಲಿ ಉಸಿರಾಟದ ಸಮಸ್ಯೆ ಮತ್ತು ಕಾರ್ಡಿಯೋ-ಪಲ್ಮನರಿ ಅರೆಸ್ಟ್ ಪ್ರಮುಖ ಕಾರಣಗಳೆಂದು ಹೇಳಲಾಗಿತ್ತು.

ಪಕ್ಷಿಗಳು ಮತ್ತು ಪ್ರಾಣಿಗಳ ರಕ್ಷಣೆಯಲ್ಲಿ ಗುಜರಾತ್ ಸರ್ಕಾರ ಅಸಮರ್ಥವಾಗಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ಪರಿಸರವಾದಿ ಪಾರ್ಥಿವ್ ಕಥವಾಡಿಯಾ ಆರೋಪಿಸಿದ್ದಾರೆ. “ಮಧ್ಯಪ್ರದೇಶದ ಕುನೊದಲ್ಲಿ ಚಿರತೆಗಳು ಸತ್ತಿವೆ ಮತ್ತು ಈಗ ಗುಜರಾತ್‌ನಲ್ಲಿ ವಿದೇಶದಿಂದ ತಂದ ಪಕ್ಷಿಗಳು ಮತ್ತು ಪ್ರಾಣಿಗಳು ಸಾಯುತ್ತಿವೆ. ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಸರಿಯಾದ ವಾತಾವರಣವನ್ನು ಒದಗಿಸಲು ಸರ್ಕಾರ ವಿಫಲವಾಗಿದೆ ಎಂಬುದು ವಿಮರ್ಶಾತ್ಮಕ; ಈ ಪ್ರಾಣಿಗಳು ಮತ್ತು ಪಕ್ಷಿಗಳನ್ನು ಜನರ ಹಣದಲ್ಲಿ ತರಲಾಯಿತು; ಅವುಗಳ ಸಾವಿನ ಹೊಣೆಯನ್ನು ಸರಕಾರವೇ ಹೊರಬೇಕು” ಎಂದು ಹೇಳಿದ್ದಾರೆ.

“ಈ ಎಲ್ಲಾ ಪಕ್ಷಿಗಳು ಮತ್ತು ಪ್ರಾಣಿಗಳು ಏಕೆ ಸತ್ತವು ಎಂಬುದನ್ನು ನಿರ್ಧರಿಸಲು ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು. ವೈಜ್ಞಾನಿಕ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸ್ಟ್ಯಾಚ್ಯೂ ಆಫ್ ಯೂನಿಟಿ ಕಾಂಪ್ಲೆಕ್ಸ್‌ನಲ್ಲಿರುವ ಸರ್ದಾರ್ ಪಟೇಲ್ ಝೂಲಾಜಿಕಲ್ ಪಾರ್ಕ್ ಮತ್ತು ಜಿಯೋಡೆಸಿಕ್ ಏವಿಯರಿ ಡೋಮ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2020ರ ಅಕ್ಟೋಬರ್ 30 ರಂದು ಉದ್ಘಾಟಿಸಿದರು. ಉದ್ಘಾಟನೆಗೆ ಮುಂಚೆಯೇ, ಝೂಲಾಜಿಕಲ್ ಪಾರ್ಕ್‌ನಲ್ಲಿ ವಿದೇಶದಿಂದ ತಂದ ಪ್ರಾಣಿಗಳು ಸಾವನ್ನಪ್ಪಿದ ಬಗ್ಗೆ ಟೀಕೆಗೆ ಗುರಿಯಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...