ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ: ಮುಂಬೈ ನ್ಯಾಯಾಲಯ

Date:

ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿ ತಪಾಸಣೆ ನಡೆಸುವುದು ಅವರ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆ ಹಾಗೂ ಅಪಮಾನಕಾರಿ ಎಂದು ಮುಂಬೈ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿದೆ.

“ವಿಚಾರಣಾಧೀನ ಕೈದಿಯ ವಿರುದ್ಧ ಅಸಂಸದೀಯ ಅಥವಾ ಅಶ್ಲೀಲ ಭಾಷೆ ಬಳಸುವುದೂ ಕೂಡಾ ಅಪಮಾನಕಾರಿ. ಆದ ಕಾರಣ ಅಧೀಕ್ಷಕರು ಹಾಗೂ ಸಂಬಂಧಿತ ಭದ್ರತಾ ಸಿಬ್ಬಂದಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕಿದೆ” ಎಂದು ವಿಶೇಷ ನ್ಯಾಯಾಧೀಶ ಬಿ ಡಿ ಶೆಲ್ಕೆ ಅಭಿಪ್ರಾಯ ಪಟ್ಟಿದ್ದಾರೆ.

1993ರ ಮುಂಬೈ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ ಮೂರನೆ ಹಂತದ ವಿಚಾರಣಾಧೀನ ಕೈದಿಯಾಗಿರುವ ಅಹ್ಮದ್ ಕಮಾಲ್ ಶೇಖ್ ಎಂಬ ಆರೋಪಿಯು, ನ್ಯಾಯಾಲಯದ ವಿಚಾರಣೆಯ ನಂತರ ಕಾರಾಗೃಹಕ್ಕೆ ವಾಪಸು ಕರೆ ತಂದಾಗ, ತನ್ನನ್ನು ಕಾರಾಗೃಹದ ಪ್ರವೇಶ ದ್ವಾರದ ಬಳಿ ಬೆತ್ತಲೆಯಾಗಿ ನಿಲ್ಲಿಸಲಾಗಿತ್ತು ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ವಿದ್ಯುನ್ಮಾನ ಶೋಧಕಗಳು ಲಭ್ಯವಿಲ್ಲದಿದ್ದರೆ ವಿಚಾರಣಾಧೀನ ಕೈದಿಗಳ ವೈಯಕ್ತಿಕ ಶೋಧವನ್ನು ದೈಹಿಕವಾಗಿ ನಡೆಸಬೇಕು. ಆದರೆ ಯಾವುದೇ ಕಾರಣಕ್ಕೂ ಅವರನ್ನು ಬೆತ್ತಲೆ ಮಾಡಬಾರದು. ಅವರ ವಿರುದ್ಧ ಅವಾಚ್ಯ ಅಥವಾ ಅಸಂಸದೀಯ ಭಾಷೆಯನ್ನು ಬಳಸಬಾರದು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಫಿರ್ಯಾದುದಾರರ ಪರ ಸಾಕ್ಷಿಯಾಗಿ ಪರಿವರ್ತನೆಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ತನ್ನನ್ನು ಆರ್ಥರ್ ರಸ್ತೆ ಕಾರಾಗೃಹದ ಅಧೀಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಬೆತ್ತಲೆಗೊಳಿಸಿ ತಪಾಸಣೆ ನಡೆಸಿದ್ದಾರೆ ಎಂದು ನ್ಯಾಯಾಲಯಕ್ಕೆ ನೀಡಿದ್ದ ದೂರಿನಲ್ಲಿ ಹುರುಳಿರುವುದನ್ನು ಕಳೆದ ಫೆಬ್ರವರಿಯಲ್ಲಿ ನ್ಯಾಯಾಲಯ ಗಮನಿಸಿತ್ತು.

ವಿಚಾರಣಾಧೀನ ಕೈದಿಗಳ ತಪಾಸಣೆಯನ್ನು ವಿದ್ಯುನ್ಮಾನ ಶೋಧಕ ಹಾಗೂ ಗ್ಯಾಡ್ಜೆಟ್‌ಗಳನ್ನು ಮಾತ್ರ ಬಳಸಿ ಮಾಡಬೇಕು ಎಂದು ಆರ್ಥರ್ ರಸ್ತೆ ಕಾರಾಗೃಹದ ಅಧೀಕ್ಷಕ ಹಾಗೂ ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...