ರ‍್ಯಾಗಿಂಗ್ ಹೆಸರಿನಲ್ಲಿ ವಿದ್ಯಾರ್ಥಿ ಮೇಲೆ ಭೀಕರ ಹಲ್ಲೆ

Date:

ರ‍್ಯಾಗಿಂಗ್ ಹೆಸರಿನಲ್ಲಿ 10ನೇ ವಿದ್ಯಾರ್ಥಿಯ ಮೇಲೆ 12ನೇ ತರಗತಿ ವಿದ್ಯಾರ್ಥಿಗಳು ಕೋಲು ಮತ್ತು ಬ್ಯಾಟ್‌ಗಳಿಂದ ಭೀಕರವಾಗಿ ಹಲ್ಲೆಗೈದಿರುವ ಘಟನೆ ತೆಲಂಗಾಣದ ರಾಜಪೇಟದಲ್ಲಿರುವ ಸಮಾಜ ಕಲ್ಯಾಣ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ನಡೆದಿದೆ. ಸುಮಾರು 20 ಹಿರಿಯ (12ನೇ ತರಗತಿ) ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.

ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮರೆಮಾಚಿತ್ತು. ಆದಾಗ್ಯೂ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಬೆಳಕಿಗೆ ಬಂದಿದೆ.

ಚಾಡಾ ಗ್ರಾಮದ ಸಂತ್ರಸ್ತ ವಿದ್ಯಾರ್ಥಿಯು ರಾಜಪೇಟ ವಸತಿ ಶಾಲೆಯಲ್ಲಿ 5ನೇ ತರಗತಿಯಿಂದಲೂ ವ್ಯಾಸಂಗ ಮಾಡುತ್ತಿದ್ದರು. ಶಾಲೆಯ ವೈಸ್-ಕ್ಯಾಪ್ಟನ್ ಕೂಡ ಆಗಿದ್ದರು. ಆತ ವೈಸ್-ಕ್ಯಾಪ್ಟನ್ ಆಗಿದ್ದ ಕಾರಣಕ್ಕಾಗಿಯೇ, ಆತನನ್ನು ಗುರಿಯಾಗಿಸಿಕೊಂಡು ಹಿರಿಯ ವಿದ್ಯಾರ್ಥಿಗಳು ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 20 ವಿದ್ಯಾರ್ಥಿಗಳ ಗುಂಪೊಂದು ಬ್ಯಾಟ್‌ಗಳು ಮತ್ತು ಕೋಲುಗಳೊಂದಿಗೆ ಸಂತ್ರಸ್ತ ವಿದ್ಯಾರ್ಥಿಯ ಕೋಣೆಗೆ ನುಗ್ಗಿದ್ದಾರೆ. ಆತನನ್ನು ಅವಾಚ್ಯವಾಗಿ ನಿಂದಿಸಿ, ಹೊಡೆಯಲು ಆರಂಭಿಸಿದ್ದಾರೆ. ಹಲ್ಲೆಯ ದೃಶ್ಯವನ್ನು ಸ್ನೇಹಿತರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಪ್ರಯತ್ನಿಸಿದಾಗ, ಹಲ್ಲೆಕೋರರು ಕೊಠಡಿಯ ದೀಪಗಳನ್ನು ಆಫ್ ಮಾಡಿ, ದಾಳಿಯನ್ನು ಮುಂದುವರೆಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತನನ್ನು ರಕ್ಷಿಸಲು ಪ್ರಯತ್ನಿಸಿದ ಇತರ ಐದು ವಿದ್ಯಾರ್ಥಿಗಳ ಮೇಲೂ ಆರೋಪಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿಯ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ನೋಡಿ, ಆತಂಕಗೊಂಡು ಶಾಲೆಗೆ ಧಾವಿಸಿದ್ದಾರೆ. ದಾಳಿಯನ್ನು ತಡೆಯುವಲ್ಲಿ ವಿಫಲವಾದ ಮತ್ತು ಘಟನೆಯನ್ನು ಮುಚ್ಚಿಟ್ಟಿದ್ದ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲ್ಲೆಗೈದಿರುವ ಎಲ್ಲ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ವಿದ್ಯಾರ್ಥಿಗಳ ಕುಟುಂಬಸ್ಥರು ಶಾಲೆಯ ಎದುರು ಧರಣಿ ನಡೆಸಿದ್ದಾರೆ.

“ಕಳೆದ ಎರಡು ದಿನಗಳಿಂದ ಶಾಲೆಯಲ್ಲಿ ವಿಶೇಷ ಸಭೆಗಳು ಮತ್ತು ಸಮಾಲೋಚನೆ ನಡೆದಿದೆ. ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ” ಎಂದು ಶಾಲೆಯ ಪ್ರಾಂಶುಪಾಲ ಸುಧಾಕರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...