ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ ಕಾನೂನುಬಾಹಿರ : ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

Date:

ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ) ಅನ್ನು ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಗುಪ್ತಚರ ಇಲಾಖೆಯ ನಿರ್ದೇಶನಾಲಯವು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರವು ಉಪ ಕಲಂ(1) -3 ಕಾನೂನು ಬಾಹಿರ ಚಟುವಟಿಕೆಗಳ (ತಡೆ ಕಾಯ್ದೆ) 1967 (37 ಆಫ್ 1967) ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರದ ಅನ್ವಯ ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಅನ್ನು ಕಾನೂನು ಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ 2024ರ ಜನವರಿ 29ರಂದು ಘೋಷಿಸಿದೆ ಎಂದು ದೆಹಲಿ ಉಚ್ಛ ನ್ಯಾಯಾಲಯದ ಕಾನೂನು ಬಾಹಿರ ಚಟುವಟಿಕೆ(ತಡೆ) ನ್ಯಾಯಾಧೀಕರಣ ರಿಜಿಸ್ಟ್ರಾರ್ ಜಿತೇಂದ್ರ ಪ್ರಸಾತ್ ಸಿಂಗ್ ಅವರು ತಿಳಿಸಿದ್ದಾರೆ.

ಈ ಕಾಯ್ದೆಯ ಉಪ ಕಲಂ (1) ಕಲಂ 4ರಲ್ಲಿ ತಿಳಿಸಿರುವಂತೆ ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಲು ಸಾಕಷ್ಟು ಕಾರಣಗಳು ಇವೆಯೇ ಎಂಬ ಬಗ್ಗೆ ನಿರ್ಣಯಿಸಲು ಕಲಂ 5(1) ಕಾಯ್ದೆ ಅಡಿ ದೆಹಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪುರುಷೇಂದ್ರ ಕುಮಾರ್ ಕೌರವ್ ರವರನ್ನೂಳಗೊಂಡ ನ್ಯಾಯಾಧೀಕರಣವನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಕಾಯ್ದೆಯ ಕಲಂ 4 ಉಪ ಕಲಂ-2ರ ಅಡಿಯಲ್ಲಿ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಈ ನೋಟೀಸ್ ಜಾರಿ ಮಾಡಿದ 30 ದಿನದೊಳಗೆ ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಅನ್ನು ಸಾಕಷ್ಟು ಕಾರಣಗಳಿಂದ ಕಾನೂನು ಬಾಹಿರವೆಂದು ತೀರ್ಮಾನಿಸಿ ಘೋಷಿಸಿರುವುದನ್ನು ಏಕೆ ಒಪ್ಪಬಾರದು ಹಾಗೂ ಕಲಂ 4(3)ರ ಅಡಿಯಲ್ಲಿ ಈ ನಿರ್ಣಯವನ್ನು ಒಪ್ಪಿಕೊಂಡು ಏಕೆ ಅಂತಹ ಘೋಷಣೆಯನ್ನು ದೃಢೀಕರಿಸಬಾರದೆಂಬುದಕ್ಕೆ ಕಾರಣಗಳನ್ನು ನೀಡಲು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ಯಾನರಿ ರಸ್ತೆಯಲ್ಲಿ ಹೊಸ ಕೆಳಸೇತುವೆ ನಿರ್ಮಾಣ: ಟ್ರಾಫಿಕ್ ಸಮಸ್ಯೆಗೆ ಕಡಿವಾಣ

ಆಕ್ಷೇಪಣೆಗಳು ಅಥವಾ ಉತ್ತರ ಏನಾದರೂ ಇದ್ದದಲ್ಲಿ ಒಂದು ವಾರದೊಳಗಾಗಿ ಕಚೇರಿ ಕೊಠಡಿ ಸಂಖ್ಯೆ: 104, ಮೊದಲನೆಯ ಮಹಡಿ, ಎ ಬ್ಲಾಕ್, ದೆಹಲಿ ಉಚ್ಚ ನ್ಯಾಯಾಲಯ, ಶೇರ್ ಷಾ ರಸ್ತೆ, ನವದೆಹಲಿ-110503ರಲ್ಲಿ ಕಳುಹಿಸಬಹುದಾಗಿದೆ. ಆಕ್ಷೇಪಣೆಗಳು / ಉತ್ತರ/ ದಾಖಲೆಗಳು ಪ್ರಾಂತೀಯ ಭಾಷೆಯಲ್ಲಿ ಇದ್ದಲ್ಲಿ ಅದರ ಯಥಾವತ್ತಾದ ಆಂಗ್ಲ ಭಾಷಾಂತರದ ಪ್ರತಿಯನ್ನು ಲಗತ್ತಿಸಬೇಕು.

ನೀವು ಖುದ್ದಾಗಿ ಅಥವಾ ನಿಮ್ಮ ಅಧಿಕೃತ ಅನುಮತಿ ಪಡೆದ ವ್ಯಕ್ತಿಯ ಮೂಲಕ ಕೊಠಡಿ ಸಂಖ್ಯೆ: 16, ದೆಹಲಿ ಉಚ್ಚ ನ್ಯಾಯಾಲಯ, ಶೇರ್ ಷಾ ರಸ್ತೆ, ನವದೆಹಲಿ – 110503 ರ ದೆಹಲಿಯಲ್ಲಿರುವ ಟ್ರಿಬ್ಯೂನಲ್‌ನ ಮುಂದೆ 2024ರ ಮೇ 4ರ ಸಂಜೆ 4.30 ಗಂಟೆಗೆ ಹಾಜರಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...