ದೆಹಲಿ ವಿವಿ ಕ್ಯಾಂಪಸ್‌: ಗಾಂಧಿ ಪ್ರತಿಮೆ ಬಳಿ ದೀಪ ಬೆಳಗಿಸದಂತೆ ವಿದ್ಯಾರ್ಥಿಗಳಿಗೆ ತಡೆ

Date:

ಹುತಾತ್ಮರ ದಿನದಂದು (ಜನವರಿ 30) ಗಾಂಧಿ ಪ್ರತಿಮೆ ಮುಂದೆ ಮೊಂಬತ್ತಿ ಹಚ್ಚದಂತೆ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನ ಭದ್ರತಾ ಸಿಬ್ಬಂದಿ ತಡೆದ ಘಟನೆ ಬೆಳಕಿಗೆ ಬಂದಿದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಮರಣೆಯನ್ನು ಶಾಂತಿಯುತವಾಗಿ ಆಚರಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂಬ ಆರೋಪಗಳು ವ್ಯಾಪಕ ಟೀಕೆಗೆ ಕಾರಣವಾಗಿವೆ.

ಈ ಘಟನೆ ವಿವಿ ಕ್ಯಾಂಪಸ್‌ನ ಮುಖ್ಯದ್ವಾರದ ಬಳಿ, ಕುಲಪತಿಗಳ ನಿವಾಸದಿಂದ ಕೇವಲ 100 ಮೀಟರ್ ದೂರದಲ್ಲಿ ನಡೆದಿದೆ.

ಹುತಾತ್ಮರ ದಿನದಂದು ಗಾಂಧಿ ಪ್ರತಿಮೆಯ ಸುತ್ತ ಕತ್ತಲು ಆವರಿಸಿತ್ತು. ನಾವು ಕೇವಲ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲು ಬಯಸಿದ್ದೆವು. ಆದರೆ ಅಧಿಕಾರಿಗಳು ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಯಾವುದೇ ಸಂಘರ್ಷಕ್ಕೆ ಇಳಿಯದೆ ಶಾಂತಿಯುತವಾಗಿ ವಾಪಸ್ಸಾದೆವು,” ಎಂದು ವಿದ್ಯಾರ್ಥಿ ಸಮರ್ಥ್ ಬನೀವಾಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ವಿದ್ಯಾರ್ಥಿ ವಿಕಾಸ್ ರಾಣ್ವಾ, “ಹುತಾತ್ಮರ ದಿನದಂದು ಮುಂಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲು ತೆರಳಿದ್ದೆವು. ಆದರೆ ಭದ್ರತಾ ಸಿಬ್ಬಂದಿ ಅವಕಾಶ ನೀಡಲಿಲ್ಲ. ಕೊನೆಗೆ ಮೊಂಬತ್ತಿ ಉರಿಸದೇ ವಾಪಸ್ಸಾಗಬೇಕಾಯಿತು. ಇದು ತೀರಾ ಖೇದಕರ,” ಎಂದು ಹೇಳಿದರು.

ಘಟನೆಯ ಪರಿಣಾಮಗಳ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿ ಮಂದೇವ್ ಕಸಾನಾ ಆತಂಕ ವ್ಯಕ್ತಪಡಿಸಿದ್ದು, “ಈ ಘಟನೆ ನಮ್ಮ ವಿಶ್ವವಿದ್ಯಾನಿಲಯದ ಸ್ಥಿತಿಗತಿಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...