ಕೆ.ಎಲ್ ರಾಹುಲ್‌ಗೆ ಸುನಿಲ್ ಗವಾಸ್ಕರ್ ತರಾಟೆ

Date:

ಗುರುವಾರ ಸಂಜೆ ನಡೆದ ಇಂಗ್ಲೆಂಡ್‌-ಭಾರತ ಕ್ರಿಕೆಟ್‌ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕು ವಿಕೆಟ್‌ಗಳ ನಷ್ಟದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆದಾಗ್ಯೂ, ಕೆ.ಎಲ್ ರಾಹುಲ್ ಅವರ ಆಟದ ಬಗ್ಗೆ ಟೀಮ್ ಇಂಡಿಯಾದ ಮಾಜಿ ಸ್ಟಾರ್‌ ಆಟಗಾರ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಟೀಮ್‌ ಗೇಮ್‌ನಲ್ಲಿ ತಂಡದ ಆಟದ ಮೇಲೆ ಗಮನ ಇರಬೇಕೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್‌ ತಂಡ 248 ರನ್‌ಗಳನ್ನು ದಾಖಲಿಸಿತ್ತು. ಟೀಮ್ ಇಂಡಿಯಾ ಗೆಲ್ಲಲು 249 ರನ್‌ಗಳ ಗುರಿ ನೀಡಿತ್ತು. ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. 251 ರನ್‌ ಗಳಿಸಿ, ಗೆಲುವು ಸಾಧಿಸಿತು.

ಭಾರತ ತಂಡ ಗೆಲುವು ಸಾಧಿಸಲು ಕೇವಲ 28 ರನ್‌ಗಳ ಅಗತ್ಯವಿದ್ಧಾಗ ಕೆ.ಎಲ್‌ ರಾಹುಲ್ ಕ್ರೀಸ್‌ಗೆ ಇಳಿದರು. ಆ ವೇಳೆಗೆ, ಶುಭಮನ್ ಗಿಲ್ ಶತಕದ ಸನಿಹದಲ್ಲಿದ್ದರು. ರಾಹುಲ್ ಅವರ ಆಟದ ಶೈಲಿಯು ಗಿಲ್ ಶತಕ ಬಾರಿಸಲು ಅವಕಾಶ ಮಾಡಿಕೊಡಬೇಕೆಂಬ ಧೋರಣೆಯನ್ನು ಹೊಂದಿದೆ ಎಂಬ ರೀತಿಯಲ್ಲಿತ್ತು. 9 ಬಾಲ್‌ಗಳನ್ನು ಎದುರಿಸಿದ ರಾಹುಲ್, ಕೇವಲ 2 ರನ್‌ ಗಳಿಸಿ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, 87 ರನ್ ಗಳಿಸಿದ್ದ ಗಿಲ್‌ ಕೂಡ ರಾಹುಲ್ ಔಟ್ ಆದ ಬೆನ್ನಲ್ಲೇ ಔಟ್‌ ಆದರು. ಪಂದ್ಯದಲ್ಲಿ ಕೆ.ಎಲ್ ರಾಹುಲ್ ಅವರ ಆಟದ ಶೈಲಿಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಲ್‌ ಅವರಿಗೆ ಸ್ಟ್ರೈಕ್ ನೀಡುವ ಆತುರದಲ್ಲಿ ಕೆ.ಎಲ್ ರಾಹುಲ್‌ ಔಟಾಗಿದ್ದಾರೆ ಎಂದು ಹಲವರು ಭಾವಿಸಿದ್ದಾರೆ.

ಈ ವೇಳೆ, ಕಾಮೆಂಟರಿಯಲ್ಲಿದ್ದ ಸುನಿಲ್ ಗವಾಸ್ಕರ್, “ಕೆಎಲ್ ರಾಹುಲ್ ತಮ್ಮ ಆಟವನ್ನು ಪಂದ್ಯಕ್ಕಾಗಿ ಆಡಬೇಕು. ಸಹಜವಾಗಿ ಬ್ಯಾಟಿಂಗ್ ಮಾಡಬೇಕು. ತಮ್ಮ ಜೊತೆಗಾರ ಶತಕ ಗಳಿಸುವ ಅವಕಾಶವಿದೆ ಎಂಬ ಕಾರಣಕ್ಕಾಗಿ ಅವರು ಆತುರದಲ್ಲಿ ಆಟವಾಡಿದರು. ಆಟಗಾರರಿಗೆ ತಂಡ ಆದ್ಯತೆ ಆಗಿರಬೇಕು. ಶುಭ್ಮನ್ ಗಿಲ್ ಅವರಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪಂದ್ಯವು ತಂಡದ ಆಟ. ರಾಹುಲ್ ತಮ್ಮ ಜೊತೆಗಾರ ಶತಕ ಗಳಿಸಲು ಸಹಾಯ ಮಾಡುವ ಉದ್ದೇಶದಿಂದ ಚೆಂಡನ್ನು ಅರ್ಧ ಮನಸ್ಸಿನಿಂದ ಎದುರಿಸಿದರು. ಔಟ್‌ ಆದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...