‘ಸೂಪರ್ ಸ್ಟಾರ್‌ಗಳು 8 ಗಂಟೆ ಮಾತ್ರ ಕೆಲಸ ಮಾಡ್ತಾರೆ – ಯಾರೂ ಮಾತಾಡಲ್ಲ: ಮೌನ ಮುರಿದ ದೀಪಿಕಾ ಪಡುಕೋಣೆ

Date:

ದಕ್ಷಿಣ ಭಾರತ ಚಿತ್ರರಂಗಗಳಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾಗಳಾದ ‘ಕಲ್ಕಿ’ ಮತ್ತು ‘ಸ್ಪಿರಿಟ್’ ಸಿನಿಮಾಗಳಿಂದ ತಮ್ಮನ್ನು ಹೊರಹಾಕಲಾಗಿರುವ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮೌನ ಮುರಿದಿದ್ದಾರೆ. ‘ಸೂಪರ್‌ ಸ್ಟಾರ್‌ಗಳು 8 ಗಂಟೆ ಮಾತ್ರವೇ ಕೆಲಸ ಮಾಡುತ್ತಾರೆ. ಆದರೆ, ಅದರ ಬಗ್ಗೆ ಯಾವುದೇ ಸುದ್ದಿಯಿಲ್ಲ. ನಾನು ನನ್ನ ಮಗಳಿಗೆ ಹೆಚ್ಚಿನ ಸಮಯ ನೀಡಬೇಕೆಂಬ ಷರತ್ತು ಹಾಕಿದ್ದೇ ತಪ್ಪಾಯಿತು ಎಂಬಂತೆ ಟೀಕೆ ಮಾಡಲಾಗುತ್ತಿದೆ’ ಎಂದಿದ್ದಾರೆ.

ದೀಪಿಕಾ ಪಡುಕೋಣೆ ಅವರು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ರಭಾಸ್ ಅಭಿನಯದ ಸ್ಪಿರಿಟ್ ಚಿತ್ರಕ್ಕೆ ಆಯ್ಕೆಯಾಗಿದ್ದರು. ನಂತರದಲ್ಲಿ ಅವರನ್ನು ಚಿತ್ರದಿಂದ ಕೈಬಿಡಲಾಯಿತು. ಆ ನಂತರ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾದ ಭಾಗ-1ರಲ್ಲಿ ಅವರು ನಟಿಸಿದ್ದರೂ, ಸಿನಿಮಾದ ಮುಂದುವರಿಕೆಯಾದ ಭಾಗ-2ರಿಂದಲೂ ಅವರನ್ನು ಹೊರಗಿಡಲಾಯಿತು. ಎರಡೂ ಸಿನಿಮಾಗಳಿಂದ ಅವರನ್ನು ಕೈಬಿಡಲು ದೀಪಿಕಾ ಅವರು ನಿರ್ದೇಶಕರ ಎದುರು ಇಟ್ಟಿದ್ದ ಕೆಲವು ಷರತ್ತುಗಳು ಮತ್ತು ಆದಾಯದಲ್ಲಿ ತಮಗೂ ಭಾಗ ಕೊಡುವಂತೆ ಕೇಳಿದ್ದದ್ದು ಕಾರಣವೆಂದು ಹೇಳಲಾಗಿತ್ತು. ಅಲ್ಲದೆ, ಸಿನಿಮಾ ಕತೆಯನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದಾಗ್ಯೂ, ಸಿನಿಮಾಗಳಿಂದ ಹೊರ ಉಳಿದಿದ್ದ ದೀಪಿಕಾ, ಸಿನಿಮಾಗಳ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮೌನವಾಗಿದ್ದರು. ಇದೀಗ, ಮೌನ ಮುರಿದಿದ್ದು, ಸಿನಿಮಾಗಳಿಂದ ತಮ್ಮನ್ನು ಕೈಬಿಡಲು ಕಾರಣವಾದ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಚಿತ್ರೀಕರಣದ ವೇಳೆ 8 ಗಂಟೆ ಕೆಲಸ ಮಾಡುವುದು, ಪ್ರಾಫಿಟ್ ಶೇರ್ ಮಾಡಿಕೊಳ್ಳುವ ಬಗ್ಗೆ ಪ್ರಸ್ತಾಪಿಸಿದ್ದೆ. ನನಗೆ ನನ್ನ ಮಗಳಿಗೆ ಹೆಚ್ಚಿನ ಸಮಯ ಕೊಡುವುದು ಆದ್ಯತೆಯಾಗಿತ್ತು. ಆ ಕಾರಣಕ್ಕಾಗಿ 8 ಗಂಟೆ ಕೆಲಸ ಮಾಡುವ ಷರತ್ತು ಮುಂದಿಟ್ಟಿದ್ದೆ” ಎಂದು ದೀಪಿಕಾ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಎಸ್‌ಟಿ ಒಳಮೀಸಲಾತಿ ಮುನ್ನಲೆಗೆ; ‘ನಾಯಕ- ಕುರುಬ’ರ ನಡುವೆ ಬಿಕ್ಕಟ್ಟು ಮೂಡುವುದೇ?

“ನಾನು ಈವರೆಗೆ ಮೌನವಾಗಿಯೇ ಹಲವು ಹಂತಗಳಲ್ಲಿ ಹೋರಾಡಿದ್ದೇನೆ. ಹೋರಾಟ ನನಗೆ ಹೊಸದಲ್ಲ. ವೇತನದ ವಿಷಯದ ಜೊತೆಗೆ, ಇನ್ನಿತರ ಎಲ್ಲ ಸಮಸ್ಯೆ ಎದುರಿಸಬೇಕಾಗಿತ್ತು. ಕೆಲವೊಮ್ಮೆ ಕೆಲ ವಿಷಯಗಳು ಸರಿಯಾದ ಅಥವಾ ತಪ್ಪಾದ ರೀತಿಯಲ್ಲಿ ಸಾರ್ವಜನಿಕವಾಗುತ್ತವೆ. ಅದೇನೇ ಆದರೂ, ಗೌರವಯುತ ರೀತಿಯಲ್ಲಿ ಹೋರಾಡುವುದೊಂದೇ ನನಗೆ ತಿಳಿದಿರುವ ದಾರಿ” ಎಂದು ಅವರು ಹೇಳಿಕೊಂಡಿದ್ದಾರೆ.

“ಭಾರತೀಯ ಚಿತ್ರರಂಗದಲ್ಲಿ ಹಲವಾರು ಸೂಪರ್‌ಸ್ಟಾರ್‌ಗಳು, ಅದರಲ್ಲೂ ಸ್ಟಾರ್‌ ನಟರು ಹಲವು ವರ್ಷಗಳಿಂದ 8 ಗಂಟೆಗಳ ಕಾಲ ಮಾತ್ರವೇ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ, ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಕೆಲಸ ಮಾಡುತ್ತಾರೆ. ಆದರೂ, ಆ ವಿಚಾರ ಎಂದಿಗೂ ಸುದ್ದಿಯಾಗಿಲ್ಲ. ಸುದ್ದಿ ಆಗುವುದೂ ಇಲ್ಲ. ಅವರು ಚಿತ್ರರಂಗದಲ್ಲಿ ಬೇರುಬಿಟ್ಟಿರುವ ‘ಚಲ್ತಾ ಹೈ’ (ನಡೀತದೆ ಬಿಡು) ಸಂಸ್ಕೃತಿಯನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ” ಎಂದು ವಿವರಿಸಿದ್ದಾರೆ.

“ಚಿತ್ರರಂಗವನ್ನು ಒಂದು ಉದ್ಯಮ ಎನ್ನಲಾಗಿದ್ದರೂ, ನಾವು ಎಂದಿಗೂ ಒಂದೇ ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಹಲವು ಸಮಯದಲ್ಲಿ ಹೆಚ್ಚು ಗಂಟೆಗಳ ಕಾಲ, ಕಳಪೆ ಪರಿಸ್ಥಿತಿ ಹಾಗೂ ಆಹಾರ ಕೊರತೆ ಸೇರಿದಂತೆ ಮೂಲಭೂತ ಸಮಸ್ಯೆಗಳನ್ನು ಎದುರಿಸಿ ಕೆಲಸ ಮಾಡಿದ್ದೇವೆ” ಎಂದು ದೀಪಿಕಾ ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...